Thursday, June 19, 2025
Thursday, June 19, 2025

Dhananjaya Sarji ಮಕ್ಕಳ ಜೀವನದಲ್ಲಿ ಗುರುಗಳು ಸುಜ್ಞಾನದ ಬೆಳಕನ್ನು ಬೀರುತ್ತಾರೆ – ಡಾ.ಧನಂಜಯ ಸರ್ಜಿ

Date:

Dhananjaya Sarji ಗುರು ಎಂದರೇ ಪ್ರೀತಿಯ ಆಗರ, ಅಜ್ಞಾನದ ಅಂಧಕಾರವನ್ನು ತೊಲಗಿಸಿ ಸುಜ್ಞಾನದ ಜ್ಯೋತಿಯನ್ನು ಬೆಳಗಿಸುವವರು ಎಂದು ವಿಧಾನಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಹೇಳಿದ್ದಾರೆ.

ಶಿವಮೊಗ್ಗ ನಗರದ ಸರ್ಜಿ ಕನ್ವ್ಷನ್ ಹಾಲ್‌ನಲ್ಲಿ ಸಿಬಿಎಸ್ಸ್ಸಿ ಶಾಲೆಗಳ ಒಕ್ಕೂಟವಾದ ಸಹ್ಯಾದ್ರಿ ಸಹೋದಯ ಸ್ಕೂಲ್ಸ್ ಕಾಂಪ್ಲೆಕ್ಸ್ ವತಿಯಿಂದ ಹಮ್ಮಿಕೊಂಡಿದ್ದ ಅಧ್ಯಯನ-೫ ಶಿಕ್ಷಕರ ಒಂದು ದಿನದ ವಾರ್ಷಿಕ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಸೂರ್ಯನ ಬೆಳಕು ಭೂಮಿಗೆ ಬಂದ ಹಾಗೆ ಲಕ್ಷಾಂತರ ಮಕ್ಕಳ ಜೀವನದಲ್ಲಿ ಗುರುಗಳು ಸುಜ್ಞಾನದ ಬೆಳಕನ್ನು ಬೀರುತ್ತಾರೆ. ಸಮಾಜದಲ್ಲಿ ವೈದ್ಯರಿಗೆ ಮತ್ತು ಗುರುಗಳಿಗೆ ಬಹಳ ಮಹತ್ವವಿದೆ. ಶ್ವಾಸ ನಿಂತರೆ ಜೀವ ಹೋಗುತ್ತದೆ, ಆದರೆ ವಿಶ್ವಾಸ ಮತ್ತು ನಂಬಿಕೆ ಹೋದರೆ ಜೀವನವೇ ಹೋಗುತ್ತದೆ. ರೋಗಿಗಳು ವೈದ್ಯರನ್ನು ನಂಬುತ್ತಾರೆ. ವಿದ್ಯಾರ್ಥಿಗಳು ಗುರುಗಳನ್ನು ನಂಬುತ್ತಾರೆ. ಹಿಂದಿನ ಕಾಲದ ಶಿಕ್ಷಣ ಹೀಗಿಲ್ಲ, ಈಗಿನ ಶಿಕ್ಷಣ ಗೂಗಲ್ ಆಧಾರಿತವಾಗಿದೆ ಎಂದರು.

ವಿದ್ಯಾರ್ಥಿಗಳಿಗೆ ಒಳ್ಳೆಯ ವ್ಯಕ್ತಿತ್ವ ಮತ್ತು ಸಂಸ್ಕಾರ ನೀಡಬೇಕು. ಅವರಲ್ಲಿ ದೊಡ್ಡ ದೊಡ್ಡ ಕನಸುಗಳನ್ನು ಬಿತ್ತಬೇಕು. ಬೆಳಗಿನ ಜಾವ ನಿದ್ದೇಗೇಡಿಸುವ ಹಾಗೆ ಕನಸುಗಳು ಇರಬೇಕು ಮತ್ತು ಆ ಕನಸ್ಸನ್ನು ನೆನಸು ಮಾಡುವ ದೃಢ ಸಂಕಲ್ಪ ಹಾಗೂ ಆತ್ಮವಿಶ್ವಾಸ ತುಂಬಿಸುವ ಕೆಲಸ ಮಾಡಬೇಕು. ಅವರಲ್ಲಿ ಪರಿವರ್ತನೆಯನ್ನು ತರಬೇಕು. ಭಾವನೆಯನ್ನು ಸದ್ಭಾವನೆಯನ್ನಾಗಿ ಮೂಡಿಸಬೇಕು. ನಿರಂತರ ಪ್ರಯತ್ನ ಮಾಡಿ ಗುರಿ ಮುಟ್ಟುವ ಹಾಗೆ ವಿದ್ಯಾರ್ಥಿಯನ್ನು ಹುರಿದುಂಬಿಸಬೇಕು, ಉತ್ತಮ ಸಂಸ್ಕಾರ ನೀಡಿ, ಸತ್ಪçಜೆಯನ್ನಾಗಿ ಮಾಡಬೇಕು ಎಂದರು.

Dhananjaya Sarji ವಿದ್ಯಾರ್ಥಿಗಳಲ್ಲಿ ಮುಂದಿನ ಭವಿಷ್ಯಕ್ಕೆ ಪರಿಸರ ಪ್ರಜ್ಞೆ ಮೂಡಿಸಬೇಕು. ಶುದ್ಧ ತುಂಗೆ ಮಲೀನವಾಗಿದ್ದು, ಅಲ್ಯೂಮಿನಿಯಂ ಇರುವುದು ಖಾತರಿಯಾಗಿದೆ, ಇದು ದೇಹಕ್ಕೆ ಅಪಾಯಕಾರಿ ಶುದ್ಧ ತುಂಗೆಗಾಗಿ ನಿರ್ಮಲ ತುಂಗಾ ಅಭಿಯಾನ ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳನ್ನು ಇದರಲ್ಲಿ ಜೋಡಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಅಭಿಮನ್ಯು ಅಕಾಡೆಮಿಯ ಸಿಇಓ ಅರ್ಜುನ್ ದೇವಯ್ಯ ಮಾತನಾಡಿ, ಶಿಕ್ಷಕರನ್ನು ನಗಿಸುವುದು ಸುಲಭವಲ್ಲ, ವಿಚಾರಗಳು ಮತ್ತು ತತ್ವಗಳು ಮಾತ್ರ ಜೀವನವನ್ನು ಬದಲಾಯಿಸುವುದಿಲ್ಲ, ಅನುಭವ ಎಂಬುವುದು ಅತ್ಯಮೂಲ್ಯ ಅದನ್ನು ವಿದ್ಯಾರ್ಥಿಗಳಿಗೆ ದಾರೆಯೇರೆಯಬೇಕು ಎಂದರು.

ಬೆಸ್ಟ್ ಟೀಚರ್ ಅವಾರ್ಡ್ ಪಡೆದ ಎಸ್.ಹರ್ಷ, ಹೊಂಗಿರಣ ಸ್ವತಂತ್ರ ಪಿಯು ಕಾಲೇಜಿನ ಪ್ರಾಂಶುಪಾಲರಾದ ರೋಹಿತ್ ವಿ., ಸುಖೇಶ್ ಶೇರಿಗಾರ್, ಶ್ರೀಕಾಂತ್ ಹೆಗಡೆ, ರವೀಂದ್ರ, ಅರುಣಾಜ್ಯೋತಿ, ಡಾ. ದ್ರಾಕ್ಷಾಯಿಣ ಸಿ.ಎಲ್., ಶೃತಿ ಆರ್.ಸ್ವಾಮಿ, ಶೋಭಾರವೀಂದ್ರ, ಕಿರಣ್ ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rahul Gandhi ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ರಾಹುಲ್ ಗಾಂಧಿಯವರ ಹುಟ್ಟುಹಬ್ಬ ಆಚರಣೆ

Rahul Gandhi ರಾಹುಲ್ ಗಾಂಧಿಯವರ ಹುಟ್ಟುಹಬ್ಬ - ಶಿವಮೊಗ್ಗ ಯುವ ಕಾಂಗ್ರೆಸ್...

Klive Special Article ಈ ಶತಮಾನದಲ್ಲಿ ಯೋಗವು ಜಗತ್ತನ್ನು ಒಂದುಗೂಡಿಸಿದೆ

Klive Special Article ಪ್ರಾಚೀನ ಭಾರತೀಯ ಸಂಪ್ರದಾಯದ ಅಮೂಲ್ಯ...

District Legal Services Authority ಯೋಗಾಭ್ಯಾಸದ ಮಹತ್ವ ಕುರಿತು ಹಿರಿಯ ನಾಗರೀಕರಿಗೆ ಮಾಹಿತಿ ಕಾರ್ಯಕ್ರಮ

District Legal Services Authority ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...