Sahachetana Natyalaya ಶಿವಮೊಗ್ಗದ ಪ್ರತಿಷ್ಠಿತ ಸಹಚೇತನ ನಾಟ್ಯಾಲಯ (ರಿ)., ವತಿಯಿಂದ ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಮೂರು ದಿನಗಳ ಕಾಲ ಅತ್ಯಂತ ವಿಜ್ರಂಬಣೆ ಹಾಗೂ ವಿಶಿಷ್ಟತೆಗಳಿಂದ ನಡೆದ ‘ನಾಟ್ಯಾರಾಧನ-13 ರಾಷ್ಟ್ರೀಯ ಮಹೋತ್ಸವ’ದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಪಾಲ್ಗೊಂಡು ಸಭಾ ಕಾರ್ಯಕ್ರಮದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಕಲಾವಿದರನ್ನು ಸನ್ಮಾನಿಸಲಾಯಿತು.
Sahachetana Natyalaya ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಡಿ ಎಸ್ ಅರುಣ್, ಸಹಚೇತನ ನಾಟ್ಯಾಲಯದ ಸಹನಾ ಚೇತನ್ ಸೇರಿದಂತೆ ಸಂಸ್ಥೆಯ ಪ್ರಮುಖರು ಹಾಗೂ ಶಿವಮೊಗ್ಗದ ಕಲರಸಿಕರು ಉಪಸ್ಥಿತರಿದ್ದರು.