Sunday, December 14, 2025
Sunday, December 14, 2025

Inner Wheel Shivamogga ಪಂಚಾಕ್ಷರಿ ಗವಾಯಿಗಳ‌ ಅಂಧರ ಶಾಲೆಗೆ ಸಂಗೀತ ಪರಿಕರಗಳ ಕೊಡುಗೆ

Date:

Inner Wheel Shivamogga ನಾವು ಮಾಡಿದ ಸೇವೆ ಸಾರ್ಥಕತೆಗೊಳ್ಳಬೇಕಾದರೆ ಅಗತ್ಯವಿದ್ದಲ್ಲಿ ಮಾತ್ರ ಮಾಡಬೇಕು. ಹೊಟ್ಟೆ ತುಂಬಿದ ಸ್ಥಳದಲ್ಲಿ ನಮ್ಮ ಸೇವೆ ಸಾರ್ಥಕವಾಗುವುದಿಲ್ಲ ಎಂದು ನಿವೃತ್ತ ಸರ್ಕಾರಿ ನೌಕರರು ಹಾಗೂ ಇನ್ನರ್ ವೀಲ್ ಶಿವಮೊಗ್ಗ ಪೂರ್ವ ಸದಸ್ಯರಾದ ವೇದಾವತಿ ಅಭಿಮತ ವ್ಯಕ್ತಪಡಿಸಿದರು.

ಸಾಗರ ರಸ್ತೆಯ ಹಾನಗಲ್ ಶ್ರೀ ಕುಮಾರ ಸ್ವಾಮಿಗಳ ಸಭಾಮಂಟಪದಲ್ಲಿ ಆಯೋಜಿಸಿದ್ದ ಕಾರ್ಯಕ್ರದಲ್ಲಿ ಪಂಚಾಕ್ಷರಿ ಗವಾಯಿಗಳ ಅಂಧರ ಶಾಲೆಗೆ ಸಂಗೀತ ಪರಿಕರಗಳಾದ ತಬಲಾ, ಹಾರ್ಮೋನಿಯಂ ಹಾಗೂ ವಸ್ತು ವಿತರಿಸಿ ಮಾನಾಡಿದ ಅವರು, ಇಂತಹ ಸಂಸ್ಥೆಗಳಿಗೆ ಅಗತ್ಯ ನೆರವು ನೀಡಿದರೆ ಅಂಧ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಸಿಕ್ಕಾಗ, ಸಂಗೀತಕ್ಕೆ ಹೆಚ್ಚು ಸಹಕಾರ ನೀಡಿದಂತಾಗುತ್ತದೆ ಎಂದರು.

ಇನ್ನರ್ ವೀಲ್ ಶಿವಮೊಗ್ಗ ಪೂರ್ವ ನೂತನ ಸದಸ್ಯೆ ಸವಿತಾ ಪಾಲಕರವರು, ಆಶ್ರಮದ ಮಕ್ಕಳಿಗೆ ಟವಲ್, ಬ್ರಷ್, ಸೋಪು ಹಾಗೂ ಅಗತ್ಯ ವಸ್ತುಗಳನ್ನು ನೀಡಿದರು.

Inner Wheel Shivamogga ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇನ್ನರ್ ವೀಲ್ ಶಿವಮೊಗ್ಗ ಪೂರ್ವ ಸಂಸ್ಥೆಯ ಅಧ್ಯಕ್ಷರಾದ ವಾಗ್ದೇವಿ ಬಸವರಾಜ್ ವಹಿಸಿ, ಪಂಚಾಕ್ಷರಿಗಳ ಸಂಗೀತ ಸೇವೆ ಅಜರಾಮರ, ಸಾವಿರಾರು ಆಂಧ ವಿದ್ಯಾರ್ಥಿಗಳು ಗದುಗಿನ ಗದುಗಿನ ಪುಣ್ಯಾಶ್ರಮದಲ್ಲಿ ಸಂಗೀತ ಅಭ್ಯಾಸ ಮಾಡಿ, ಈ ನಾಡಿನ ಶ್ರೇಷ್ಠ ಸಂಗೀತಗಾರರಾಗಿದ್ದಾರೆ. ಇಲ್ಲಿನ ಶಿಷ್ಯರು ದೇಶದಲ್ಲಿ ದೊಡ್ಡ ಮಟ್ಟದ ವಿದ್ವಾಂಸರಾಗಿ, ಹಾಡುಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಸೇವೆಯನ್ನು ಸ್ಮರಿಸಿದರು.ಕಾರ್ಯಕ್ರದಲ್ಲಿ ಇನ್ನರ್ ವೀಲ್ ಕ್ಲಬ್ ನ ಮಾಜಿ ಅಧ್ಯಕ್ಷರಾದ ಬಿಂದು ವಿಜಯ್ ಕುಮಾರ್, ಕಾರ್ಯದರ್ಶಿ ಲತಾ ಸೋಮಣ್ಣ, ಸತ್ಯ ಹಾಗೂ ಬಂಧುಗಳ ಸಂಗಮೇಳ ಗವಾಯಿಗಳಿಗೆ ಅಭಿನಂದಿಸಿ ಸನ್ಮಾನಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...