Saturday, May 16, 2026
Saturday, May 16, 2026

Red Cross Sanjeevini Blood Bank 55 ನೇ ಬಾರಿಗೆ ರಕ್ತದಾನ ಮಾಡಿದ ಅಲ್ಲಾಬಕಾಸ್

Date:

Red Cross Sanjeevini Blood Bank ಜೀವನ ಸಾರ್ಥಕವಾಗಬೇಕಾದರೆ ನಮ್ಮ ಕೈಲಾದಷ್ಟು ಸೇವಾ ಕಾರ್ಯಗಳನ್ನು ನಡೆಸಬೇಕು ಎಂದು ಲ್ಯಾಬ್ ಟೆಕ್ನಿಷಿಯನ್ ಅಲ್ಲಾಬಕಾಸ್ ಹೇಳಿದರು.
ಸಂಜೀವಿನಿ ರೆಡ್‌ಕ್ರಾಸ್ ರಕ್ತನಿಧಿಯಲ್ಲಿ ಸೇವೆ ಸಲ್ಲಿಸುತ್ತಿರುವ ಅಲ್ಲಾಬಕಾಸ್ ತಮ್ಮ ಜನ್ಮದಿನದ ಹಿನ್ನೆಲೆಯಲ್ಲಿ 55ನೇ ಬಾರಿ ರಕ್ತದಾನ ಮಾಡಿದ ಅವರು ಮಾತನಾಡಿ, ನನ್ನಿಂದ ರಕ್ತದಾನ ಮಾಡಲು ಶಕ್ತಿ ಇರುವವರೆಗೂ ರಕ್ತದಾನ ಮಾಡುತ್ತೇನೆ. ಇದರಿಂದ ತುರ್ತು ಸಂದರ್ಭದಲ್ಲಿ ಅವಶ್ಯಕತೆ ಇರುವವರಿಗೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.
Red Cross Sanjeevini Blood Bank ಇದೇ ಸಂದರ್ಭದಲ್ಲಿ ಸ್ವಯಂಪ್ರೇರಿತ ರಕ್ತದಾನಿಗಳ ಸೇವಾ ಸಂಸ್ಥೆ ಮಾಜಿ ಅಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ನಾನು ಈವರೆಗೂ 47 ಬಾರಿ ರಕ್ತದಾನ ಮಾಡಿದ್ದು, ಎಲ್ಲ ದಾನಗಳಿಗಿಂತಲೂ ರಕ್ತದಾನ ತುಂಬಾ ಶ್ರೇಷ್ಠ. ರಕ್ತದ ಮಹತ್ವವನ್ನು ಅರಿತುಕೊಂಡು ಆರೋಗ್ಯವಂತ ಯುವಜನತೆ ರಕ್ತದಾನ ಮಾಡಲು ಮುಂದಾಗಬೇಕು. ಇದರಿಂದ ನಮಗೂ ಅನೇಕ ಉಪಯೋಗಗಳಿವೆ ಎಂದರು.
ಪ್ರಸ್ತುತ ಬೇಡಿಕೆಗೆ ಅನುಗುಣವಾಗಿ ರಕ್ತ ಲಭ್ಯವಾಗುತ್ತಿಲ್ಲ. ರಕ್ತದ ಕೊರತೆ ಎದುರಾಗುವುದನ್ನು ಕಾಣುತ್ತೇವೆ. ಆದ್ದರಿಂದ ಪ್ರತಿಯೊಬ್ಬರೂ ರಕ್ತದಾನ ಮಾಡಿ ಜೀವ ಉಳಿಸುವ ಶ್ರೇಷ್ಠ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.
ಡಾ. ದಿನಕರ್ ಮಾತನಾಡಿ, ರಕ್ತದಾನ ಆರೋಗ್ಯ ಕಾಪಾಡುವುದರ ಜತೆಗೆ ನಮ್ಮ ದೇಹದಲ್ಲಿರುವ ಕೊಬ್ಬಿನಾಂಶ ಕಡಿಮೆ ಮಾಡುತ್ತದೆ. ಸದಾ ಲವಲವಿಕೆಯಿಂದ ಇರಲು ಸಾಧ್ಯವಾಗುತ್ತದೆ. ಉತ್ತಮ ಜೀವನಶೈಲಿ ಹಾಗೂ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯ ಎಂದು ತಿಳಿಸಿದರು.
ಅಲ್ಲಾಬಕಾಸ್ ಪತ್ನಿ ಕೂಡ ಇದೇ ಸಂದರ್ಭದಲ್ಲಿ ರಕ್ತದಾನ ಮಾಡಿದರು. ದಂಪತಿಯನ್ನು ಅಭಿನಂದಿಸಲಾಯಿತು. ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಬಿಂದು ವಿಜಯಕುಮಾರ್, ರಕ್ತನಿಧಿಯ ಪೂಜಾ, ಡಾ. ದಿನಕರ್, ಸುಲ್ತಾನ್, ಧರಣೇಂದ್ರ ದಿನಕರ್, ಉಮೈಸಲ್ಮಾ, ಕವಿತಾ, ಶಿಲ್ಪಾ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...