Monday, December 15, 2025
Monday, December 15, 2025

Gauri Ganesh festival ಗೌರಿಗಣೇಶ ಹಬ್ಬದ ಮುನ್ನ ಜನಕ್ಕೆ ವಾಣಿಜ್ಯ ಎಲ್ ಪಿ ಜಿ ಸಿಲಿಂಡರ್ ದರ ಏರಿಕೆ ಶಾಕ್!

Date:

Gauri Ganesh festival ದೇಶದಲ್ಲಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ ಬೆಲೆ ಮತ್ತೆ ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 39ರೂ. ಹೆಚ್ಚಿಸಿವೆ. 14 ಕೆಜಿ ಗೃಹಬಳಕೆಯ ಗ್ಯಾಸ್​ ಸಿಲಿಂಡರ್​ನ ಬೆಲೆಗಳು ಯಥಾ ಸ್ಥಿತಿ ಕಾಯ್ದುಕೊಂಡಿವೆ. ದೆಹಲಿಯಲ್ಲಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ ಬೆಲೆ 39ರೂ. ಹೆಚ್ಚಾಗಿದೆ.
ಸೆಪ್ಟೆಂಬರ್ 1 ರಿಂದ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ 1691.50 ರೂ.ಗೆ ಲಭ್ಯವಾಗಲಿದೆ. ಹೊಸ ದರಗಳ ಪ್ರಕಾರ ಇಂದಿನಿಂದ ವಾಣಿಜ್ಯ ಸಿಲಿಂಡರ್ ಬೆಲೆ 39 ರೂ. ಈಗ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1691.50 ರೂ. IOCL Gauri Ganesh festival ವೆಬ್‌ಸೈಟ್ ಪ್ರಕಾರ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಹೆಚ್ಚಳವು ಸೆಪ್ಟೆಂಬರ್ 1 ರಿಂದ ಜಾರಿಗೆ ಬಂದಿದೆ.
ಮುಂಬೈನಲ್ಲಿ ಇದರ ಬೆಲೆ 1644 ರೂ. ಈ ಮೊದಲು ಈ ಸಿಲಿಂಡರ್ ಮುಂಬೈನಲ್ಲಿ 1605 ರೂ.ಗೆ ಲಭ್ಯವಿತ್ತು. ಕೋಲ್ಕತ್ತಾದಲ್ಲಿ ಈ ಸಿಲಿಂಡರ್ ಬೆಲೆ 1764.50 ರೂ.ನಿಂದ 1802.50 ರೂ.ಗೆ ಏರಿಕೆಯಾಗಿದೆ. ಆದರೆ ಚೆನ್ನೈನಲ್ಲಿ ಈ ಸಿಲಿಂಡರ್ ಈಗ 1855 ರೂ.ಗೆ ಲಭ್ಯವಾಗಲಿದೆ. ಈ ಹಿಂದೆ ಚೆನ್ನೈನಲ್ಲಿ 19 ಕೆಜಿ ಸಿಲಿಂಡರ್ 1817 ರೂ.ಗೆ ಮಾರಾಟವಾಗಿತ್ತು.
ಆಗಸ್ಟ್‌ನಲ್ಲಿ ಎಲ್‌ಪಿಜಿ ಗ್ಯಾಸ್‌ನ ಬೆಲೆಯನ್ನು ಹೆಚ್ಚಿಸಲಾಗಿತ್ತು ಆಗ ಕಂಪನಿಗಳು 8.50 ರೂಪಾಯಿ ಏರಿಕೆ ಮಾಡಿದ್ದವು ಆದರೆ ಈ ಬಾರಿ ನೇರವಾಗಿ 39 ರೂಪಾಯಿ ಹೆಚ್ಚಿಸಿವೆ.
ಜುಲೈನಲ್ಲಿ ಪ್ರತಿ ಸಿಲಿಂಡರ್‌ ಗೆ 30 ರೂ., ಜೂನ್‌ನಲ್ಲಿ 69.50 ಮತ್ತು ಮೇನಲ್ಲಿ 19 ರೂ. ಹೆಚ್ಚಳ ಮಾಡಲಾಗಿತ್ತು. ಎಲ್‌ಪಿಜಿ ಬೆಲೆಗಳಲ್ಲಿನ ಹಠಾತ್ ಹೆಚ್ಚಳವು ರೆಸ್ಟೋರೆಂಟ್‌ ಗಳು ಮತ್ತು ಹೋಟೆಲ್‌ಗಳಿಂದ ಹಿಡಿದು ಸಣ್ಣ-ಪ್ರಮಾಣದ ಕೈಗಾರಿಕೆಗಳವರೆಗೆ ವಿವಿಧ ವಲಯಗಳ ವ್ಯವಹಾರಗಳ ಮೇಲೆ ಪರಿಣಾಮ ಬೀರಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...