Sunday, December 14, 2025
Sunday, December 14, 2025

Supreme Court ಅಪರಾಧಿಗಳ ಮನೆಗೆ “ಬುಲ್ಡೋಜರ್ ಆಪರೇಷನ್” ಬಗ್ಗೆ ಕೋರ್ಟ್ ಅಸಮಾಧಾನ. ಮಾರ್ಗಸೂಚಿ ರೂಪಿಸಲು ಸೂಚನೆ

Date:

Supreme Court ಏನಾದರು ಘಟನೆ ನಡೆದಾಗ ಏಕಾಏಕಿ ಆರೋಪಿಗಳ ಮನೆ ಕೆಡವುವ ರಾಜ್ಯ ಸರ್ಕಾರಗಳ ಕ್ರಮದ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಸಂಬಂಧ ರಾಷ್ಟ್ರ ಮಟ್ಟದಲ್ಲಿ ಏಕರೂಪದ ಮಾರ್ಗಸೂಚಿ ರೂಪಿಸಲು ಮುಂದಾಗಿದೆ.
ಆರೋಪಿಗಳ ಮನೆಗಳನ್ನು ಕೆಡವುವ ‘ಬುಲ್ಡೋಝರ್ ಕಾರ್ಯಾಚರಣೆ’ಯ ವಿರುದ್ದ ಸಲ್ಲಿಕೆಯಾಗಿರುವ ವಿವಿಧ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರ ಪೀಠ, ರಾಷ್ಟ್ರ ಮಟ್ಟದಲ್ಲಿ ಮಾರ್ಗಸೂಚಿಗಳನ್ನು ರೂಪಿಸಲು ನ್ಯಾಯಾಲಯವು ಪರಿಗಣಿಸಬಹುದಾದ ಕರಡು ಸಲಹೆಗಳನ್ನು ಸಲ್ಲಿಸುವಂತೆ ಕಕ್ಷಿದಾರರನ್ನು ಕೇಳಿದೆ. ಸಲಹೆಗಳನ್ನು ಹಿರಿಯ ವಕೀಲ ನಚಿಕೇತ ಜೋಶಿ ಅವರಿಗೆ ಸಲ್ಲಿಸಬೇಕಿದ್ದು, ಅವರು ಅವುಗಳನ್ನು ಕ್ರೋಡೀಕರಿಸಿ ನ್ಯಾಯಾಲಯಕ್ಕೆ ನೀಡಬೇಕು ಎಂದು ಆದೇಶಿಸಿದೆ.
Supreme Court ವಿಚಾರಣೆಯನ್ನು ಎರಡು ವಾರದ ಅವಧಿಗೆ ಮುಂದೂಡಿರುವ ನ್ಯಾಯಪೀಠ, ನಾವು ರಾಷ್ಟ್ರ ಮಟ್ಟದಲ್ಲಿ ಈ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸೋಣ ಎಂದಿದೆ.
“ಆರೋಪಿಯಾದ ಮಾತ್ರಕ್ಕೆ ಮನೆ ಕೆಡವಲು ಹೇಗೆ ಸಾಧ್ಯ? ಅಪರಾಧಿಯಾಗಿದ್ದರೂ ಮನೆ ಕೆಡವಲು ಸಾಧ್ಯವಿಲ್ಲ. ನ್ಯಾಯಾಲಯವು ಅನಧಿಕೃತ ನಿರ್ಮಾಣಗಳನ್ನು ರಕ್ಷಿಸುವುದಿಲ್ಲ. ಆದರೆ, ಅದನ್ನು ಕೆಡವಲು ಕೆಲವು ಮಾರ್ಗಸೂಚಿಗಳು ಅಗತ್ಯವಿದೆ” ಎಂದು ನ್ಯಾಯಮೂರ್ತಿ ಗವಾಯಿ ಹೇಳಿದ್ದಾರೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ದುಶ್ಯಂತ್ ದವೆ, ದೇಶದಾದ್ಯಂತ ‘ಬುಲ್ಡೋಝರ್ ಕಾರ್ಯಚರಣೆ’ ನಡೆಯದಂತೆ ನ್ಯಾಯಾಲಯ ನಿರ್ದೇಶನ ನೀಡಬೇಕು ಎಂದು ಕೋರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...