Saturday, December 6, 2025
Saturday, December 6, 2025

International Day of Democracy ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಸಕಲ ಸಿದ್ಧತೆ- ಗುರುದತ್ತ ಹೆಗಡೆ

Date:

International Day of Democracy ಸಂವಿಧಾನದ ಬಗ್ಗೆ ಅರಿವು ಮೂಡಿಸಲು ಸೆ.15 ರಂದು ಮಾನವ ಸರಪಳಿ ರಚನೆ ಮಾಡುವ ಮೂಲಕ ಹಬ್ಬದ ರೀತಿಯಲ್ಲಿ, ಅರ್ಥಪೂರ್ಣವಾಗಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲು ಅಗತ್ಯವಾದ ಎಲ್ಲ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಸೆ.15 ರಂದು ನಡೆಯಲಿರುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪೂರ್ವಸಿದ್ದತೆ ಕುರಿತು ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸೆ.15 ರಂದು ರಾಜ್ಯದಾದ್ಯಂತ ಏಕ ಕಾಲದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಮಾನವ ಸರಪಳಿ ರಚಿಸುವ ಮೂಲಕ ಆಚರಿಸಲಾಗುವುದು. ನಮ್ಮ ಜಿಲ್ಲೆಗೆ ಮಾರ್ಗನಕ್ಷೆ ನೀಡಿರುವನ್ವಯ ಭದ್ರಾವತಿ ತಾಲ್ಲೂಕಿನ ಕಾರೇಹಳ್ಳಿಯಿಂದ ಪ್ರಾರಂಭಿಸಿ ಶಿವಮೊಗ್ಗ ನಗರದ ಮೂಲಕ ಶಿವಮೊಗ್ಗ ತಾಲ್ಲೂಕಿನ ಮಡಿಕೆ ಚೀಲೂರುವರೆಗೆ ಸುಮಾರು 60 ಕಿ.ಮೀ ಮಾನವ ಸರಪಳಿ ರಚಿಸಬೇಕಾಗಿರುತ್ತದೆ.
ಅದಕ್ಕೆ 50 ರಿಂದ 55 ಸಾವಿರ ಜನರ ಅವಶ್ಯಕತೆಯಿದ್ದು ಈ ಮಾರ್ಗದ 8 ಪಂಚಾಯತ್‌ಗಳಿಗೆ ನೋಡಲ್ ಅಧಿಕಾರಿ ನೇಮಿಸಿ, ಈ ಮಾರ್ಗದಲ್ಲಿ ಅಗತ್ಯವಾದ ಜನರನ್ನು ವ್ಯವಸ್ಥೆ ಮಾಡಬೇಕು. ಮೊದಲೇ ಸ್ಥಳ ಪರಿಶೀಲನೆ ಮಾಡಬೇಕು. ಗ್ರಾಮ ಲೆಕ್ಕಿಗರು, ಪಿಡಿಓ, ಶಿಕ್ಷಕರು, ಆಶಾ, ಅಂಗನವಾಡಿ ಕಾರ್ಯಕರ್ತರು ಇತರೆ ಸಿಬ್ಬಂದಿಗಳನ್ನು ನಿಯೋಜಿಸಿ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು.
ಭದ್ರಾವತಿ ಮತ್ತು ಶಿವಮೊಗ್ಗ ತಾಲ್ಲೂಕುಗಳ ಬಿಇಓ ಗಳು ಸಮನ್ವಯತೆ ಸಾಧಿಸಿ ವಿದ್ಯಾರ್ಥಿಗಳನ್ನು ಸೇರಿಸುವುದು ಸೇರಿದಂತೆ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು. ಡಿಡಿಪಿಐ, ಡಿಡಿಪಿಯು, ಬಿಇಓ ಗಳು ಅನುದಾನಿತ, ಅನುದಾನರಹಿತ ಮತ್ತು ಸರ್ಕಾರಿ ಶಾಲಾ-ಕಾಲೇಜು ಮುಖ್ಯ ಶಿಕ್ಷಕರು, ಪ್ರಾಂಶುಪಾಲರ ಸಭೆ ನಡೆಸಿ, ವಿದ್ಯಾರ್ಥಿಗಳನ್ನು ನಿಗದಿತ ಸಮಯಕ್ಕೆ ಕರೆತರುವ ವ್ಯವಸ್ಥೆ ಮಾಡಬೇಕು.
International Day of Democracy ಸೆ.15 ರಂದು 9 ರಿಂದ 9.30 ಕ್ಕೆ ಮಾನವ ಸರಪಳಿಯನ್ನು ರಚಿಸಲಾಗುವುದು. ಕಾರ್ಯಕ್ರಮದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದ್ದು, ವಿದ್ಯಾರ್ಥಿಗಳು, ಜನಪ್ರತಿನಿಧಿಗಳು, ಸಾರ್ವಜನಿಕರಿಂದ ಅಂದು ಗಿಡ ನೆಡಲಾಗುವುದು.
ಪಂಚಾಯತ್ ಕೇಂದ್ರ ಸ್ಥಾನದಲ್ಲಿ, ನಗರದಲ್ಲಿ, ಸ್ಥಳಾವಕಾಶ ಇರುವೆಡೆ ಸಸಿಗಳನ್ನು ನೆಡಲಾಗುವುದು. ಸಸಿಗಳನ್ನು ನೆಡುವ ಮುನ್ನವೇ ಅಲ್ಲಿ ಸಿದ್ದತೆ ಮಾಡಿಕೊಳ್ಳಬೇಕು. ಸಸಿ ನೆಟ್ಟ ನಂತರ ಒಂದೆರಡು ವರ್ಷಗಳ ಕಾಲ ಗಿಡಗಳ ರಕ್ಷಣೆ ಮಾಡಬೇಕು. ಮಾರ್ಗದ ಹತ್ತಿರ ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಬೇಕು.
ಸ್ಥಳೀಯ ಸಂಸ್ಥೆಳ ಜನಪ್ರತಿನಿಧಿಗಳು, ಸ್ತ್ರೀಶಕ್ತಿ, ಸ್ವಸಹಾಯ ಮಹಿಳಾ ಗುಂಪುಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸಂಘಟನೆಗಳು, ಸರ್ಕಾರಿ ಅಧಿಕಾರಿ, ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸ್ಕೌಟ್ಸ್ ಗೈಡ್ಸ್, ಎನ್‌ಎಸ್‌ಎಸ್, ಎನ್‌ಸಿಸಿ ಅಭ್ಯರ್ಥಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಮಾನವ ಸರಪಳಿ ನಿರ್ಮಿಸುವ ಕಾರ್ಯದಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳಬೇಕು. ಮಾರ್ಗನಕ್ಷೆಯಂತೆ ಪಂಚಾಯತ್ ವಾರು, ನಗರದಲ್ಲ್ಲಿ ವಾರ್ಡ್ವಾರು ಜನರನ್ನು ಸೇರಿಸಲು ಸಮರ್ಪಕವಾದ ಯೋಜನೆ ರೂಪಿಸಿಕೊಳ್ಳಬೇಕು. ಮಹಾನಗರಪಾಲಿಕೆ, ಸ್ಥಳೀಯ ಸಂಸ್ಥೆಗಳು, ಅಧಿಕಾರಿಗಳನ್ನೊಳಗೊಂಡAತೆ ಎಲ್ಲರೂ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಬೇಕು. ಸ್ಥಳೀಯ ಉಡುಗೆ-ತೊಡುಗೆಗಳೊಂದಿಗೆ ಕಲಾತ್ಮಕವಾಗಿ ಜನರು ಈ ಹಬ್ಬದಲ್ಲಿ ಪಾಲ್ಗೊಳ್ಳಬಹುದು ಎಂದರು.
ಪ್ರಶಸ್ತಿ : ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡ, ಶಿಸ್ತುಬದ್ದವಾಗಿ, ಸೃಜನಾತ್ಮಕವಾಗಿ ಪಾಲ್ಗೊಂಡ ಸ್ತ್ರೀಶಕ್ತಿ ಗುಂಪುಗಳು, ಶಾಲಾ-ಕಾಲೇಜುಗಳಿಗೆ ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಜಿ.ಪಂ. ಸಿಇಓ ಎನ್.ಹೇಮಂತ್, ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್, ಜಿ.ಪಂ ಸಿಪಿಓ ಗಾಯತ್ರಿ,,ಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಿ. ಮಲ್ಲೇಶಪ್ಪ, ತಹಶೀಲ್ದಾರ್ ಗಿರೀಶ್, ಡಿಡಿಪಿಯು, ಡಿಡಿಪಿಐ, ಡಿಹೆಚ್‌ಒ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bangalore Television Centre ಕಲಾತ್ಮಕ ಧಾರಾವಾಹಿ ನಿರ್ಮಾಣ & ಫೋಕ್ ರಿಯಾಲಿಟಿ ಶೋ ನಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ

Bangalore Television Centre ಬೆಂಗಳೂರು ದೂರದರ್ಶನ ಕೇಂದ್ರವು ನಿರ್ಮಿಸಲಿರುವ ಕಲಾತ್ಮಕ ಧಾರಾವಾಹಿಯನ್ನು...

ಭಗವದ್ಗೀತೆ ಪಠ್ಯದಲ್ಲಿ ಅಳವಡಿಸಲು ಸಚಿವ ಕುಮಾರಣ್ಣ ಬರೆದ ಪತ್ರಕ್ಕೆ ಅಶೋಕ ಜಿ.ಭಟ್ ಕೃತಜ್ಞತೆ

ಶಿವಮೊಗ್ಗದಲ್ಲಿ ಇತ್ತೀಚೆಗೆ ಭಗವದ್ಗೀತಾ ಅಭಿಯಾನವು ಅತ್ಯಂತ ಯಶಸ್ವಿಯಾಗಿ ನೆರವೇರಿತು.ರಾಜ್ಯಮಟ್ಟದ ಬೃಹತ್ಸಮಾರಂಭದಲ್ಲಿ ವಿವಿಧ...

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...