Sunday, December 14, 2025
Sunday, December 14, 2025

Youth Hostels Association ಚಾರಣಗಳಲ್ಲಿ ನಿರಂತರ ಭಾಗಿಯಾಗಿದ್ದಕ್ಕೆ ರಾಷ್ಟ್ರೀಯ ಮಂಡಳಿ ಮನ್ನಣೆ- ಅ.ನಾ.ವಿಜೇಂದ್ರರಾವ್

Date:

Youth Hostels Association ಚಾರಣಗಳಲ್ಲಿ ಹೆಚ್ಚು ಯಶಸ್ಸು ಸಾಧಿಸಲು ಸಾಧ್ಯವಾಗಿದ್ದು, ನಿರಂತರ ಚಾರಣಗಳಲ್ಲಿ ಭಾಗವಹಿಸಿದ್ದರಿಂದ ಉನ್ನತ ಸ್ಥಾನ ಲಭಿಸಿದೆ ಎಂದು ಯೂತ್ ಹಾಸ್ಟೆಲ್ ರಾಷ್ಟ್ರೀಯ ಮಂಡಳಿ ಸದಸ್ಯ ಅ.ನಾ.ವಿಜಯೇಂದ್ರ ರಾವ್ ಹೇಳಿದರು.

ಶಿವಮೊಗ್ಗದಲ್ಲಿ ಯೂತ್ ಹಾಸ್ಟೆಲ್ ತರುಣೋದಯ ಘಟಕದಿಂಧ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಯೂತ್ ಹಾಸ್ಟೆಲ್ಸ್ ತರುಣೋದಯ ಘಟಕದ ಸದಸ್ಯರು ಅತ್ಯುತ್ತಮವಾಗಿ ಚಾರಣಗಳಲ್ಲಿ ಭಾಗವಹಿಸುತ್ತಿದ್ದಾರೆ. ನನಗೆ ಉನ್ನತ ಸ್ಥಾನ ದೊರಕಲು ಎಲ್ಲರ ಸಹಕಾರ ಕಾರಣ. ಈ ಸನ್ಮಾನ ನಿಮ್ಮೆಲ್ಲರಿಗೂ ಸಲ್ಲಬೇಕು ಎಂದು ತಿಳಿಸಿದರು.

ಯೂತ್ ಹಾಸ್ಟೆಲ್ಸ್ ನಿಯಮ, ನಿಬಂಧನೆಗಳು, ಸುರಕ್ಷಿತ ನಡುವಳಿಕೆ, ಪ್ರತ್ಯೇಕ ವಸತಿ ಸೌಕರ್ಯ, ಉತ್ತಮ ಆಹಾರ, ಕಡಿಮೆ ಖರ್ಚಿನಲ್ಲಿ ಇರುವ ಅನುಕೂಲಗಳನ್ನು ನಮ್ಮ ಘಟಕದ ಸದಸ್ಯರು ಉಪಯೋಗಿಸುತ್ತಿದ್ದಾರೆ. ಇದರಿಂದ ನಮ್ಮ ಘಟಕವನ್ನು ಗುರುತಿಸಿ ರಾಷ್ಟ್ರೀಯ ಆಡಳಿತ ಮಂಡಳಿ ಸದಸ್ಯನಾಗಿ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ ಎಂದರು.

Youth Hostels Association ಅಧ್ಯಕ್ಷತೆ ವಹಿಸಿದ್ದ ತರುಣೋದಯ ಘಟಕದ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ಪ್ರತಿಯೊಬ್ಬರೂ ದಿನನಿತ್ಯದ ಜಂಜಾಟದಿಂದ ಹೊರಬರಲು ಆಗಾಗ್ಗೆ ಪ್ರಕೃತಿಯೊಂದಿಗೆ ಬೆರೆತು ಚಾರಣ ಮಾಡಿದಾಗ ಮನಸ್ಸಿಗೆ ನೆಮ್ಮದಿ ದೊರಕುತ್ತದೆ. ಹೊಸ ಸ್ನೇಹಿತರು ದೊರಕುತ್ತಾರೆ. ಈ ವಿಚಾರದಲ್ಲಿ ಯೂತ್ ಹಾಸ್ಟೆಲ್ಸ್ ಉತ್ತಮ ಕಾರ್ಯಕ್ರಮ ಮಾಡುತ್ತಿರುವುದರಿಂದ ನಮ್ಮ ಘಟಕದ ಸದಸ್ಯರು ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ.
ಹೆಚ್ಚು ಸದಸ್ಯರನ್ನು ಪರಿಚಯಿಸಬೇಕು ಎಂದು ತಿಳಿಸಿದರು.

ತರುಣೋದಯ ಘಟಕ ಹೆಚ್ಚು ಚಾರಣಗಳನ್ನು ನಿರಂತರವಾಗಿ ಆಯೋಜಿಸುತ್ತಿದೆ. ಸುಮಾರಾಣಿ ಪ್ರಾರ್ಥಿಸಿದರು. ದಿಲೀಪ್ ನಾಡಿಗ್ ಸ್ವಾಗತಿಸಿದರು. ಜಿ.ವಿಜಯಕುಮಾರ್ ನಿರೂಪಿಸಿದರು. ಪ್ರಕೃತಿ ಮಂಚಾಲೆ ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...