Sunday, August 23, 2026
Sunday, August 23, 2026

Youth Hostels Association ಚಾರಣಗಳಲ್ಲಿ ನಿರಂತರ ಭಾಗಿಯಾಗಿದ್ದಕ್ಕೆ ರಾಷ್ಟ್ರೀಯ ಮಂಡಳಿ ಮನ್ನಣೆ- ಅ.ನಾ.ವಿಜೇಂದ್ರರಾವ್

Date:

Youth Hostels Association ಚಾರಣಗಳಲ್ಲಿ ಹೆಚ್ಚು ಯಶಸ್ಸು ಸಾಧಿಸಲು ಸಾಧ್ಯವಾಗಿದ್ದು, ನಿರಂತರ ಚಾರಣಗಳಲ್ಲಿ ಭಾಗವಹಿಸಿದ್ದರಿಂದ ಉನ್ನತ ಸ್ಥಾನ ಲಭಿಸಿದೆ ಎಂದು ಯೂತ್ ಹಾಸ್ಟೆಲ್ ರಾಷ್ಟ್ರೀಯ ಮಂಡಳಿ ಸದಸ್ಯ ಅ.ನಾ.ವಿಜಯೇಂದ್ರ ರಾವ್ ಹೇಳಿದರು.

ಶಿವಮೊಗ್ಗದಲ್ಲಿ ಯೂತ್ ಹಾಸ್ಟೆಲ್ ತರುಣೋದಯ ಘಟಕದಿಂಧ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಯೂತ್ ಹಾಸ್ಟೆಲ್ಸ್ ತರುಣೋದಯ ಘಟಕದ ಸದಸ್ಯರು ಅತ್ಯುತ್ತಮವಾಗಿ ಚಾರಣಗಳಲ್ಲಿ ಭಾಗವಹಿಸುತ್ತಿದ್ದಾರೆ. ನನಗೆ ಉನ್ನತ ಸ್ಥಾನ ದೊರಕಲು ಎಲ್ಲರ ಸಹಕಾರ ಕಾರಣ. ಈ ಸನ್ಮಾನ ನಿಮ್ಮೆಲ್ಲರಿಗೂ ಸಲ್ಲಬೇಕು ಎಂದು ತಿಳಿಸಿದರು.

ಯೂತ್ ಹಾಸ್ಟೆಲ್ಸ್ ನಿಯಮ, ನಿಬಂಧನೆಗಳು, ಸುರಕ್ಷಿತ ನಡುವಳಿಕೆ, ಪ್ರತ್ಯೇಕ ವಸತಿ ಸೌಕರ್ಯ, ಉತ್ತಮ ಆಹಾರ, ಕಡಿಮೆ ಖರ್ಚಿನಲ್ಲಿ ಇರುವ ಅನುಕೂಲಗಳನ್ನು ನಮ್ಮ ಘಟಕದ ಸದಸ್ಯರು ಉಪಯೋಗಿಸುತ್ತಿದ್ದಾರೆ. ಇದರಿಂದ ನಮ್ಮ ಘಟಕವನ್ನು ಗುರುತಿಸಿ ರಾಷ್ಟ್ರೀಯ ಆಡಳಿತ ಮಂಡಳಿ ಸದಸ್ಯನಾಗಿ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ ಎಂದರು.

Youth Hostels Association ಅಧ್ಯಕ್ಷತೆ ವಹಿಸಿದ್ದ ತರುಣೋದಯ ಘಟಕದ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ಪ್ರತಿಯೊಬ್ಬರೂ ದಿನನಿತ್ಯದ ಜಂಜಾಟದಿಂದ ಹೊರಬರಲು ಆಗಾಗ್ಗೆ ಪ್ರಕೃತಿಯೊಂದಿಗೆ ಬೆರೆತು ಚಾರಣ ಮಾಡಿದಾಗ ಮನಸ್ಸಿಗೆ ನೆಮ್ಮದಿ ದೊರಕುತ್ತದೆ. ಹೊಸ ಸ್ನೇಹಿತರು ದೊರಕುತ್ತಾರೆ. ಈ ವಿಚಾರದಲ್ಲಿ ಯೂತ್ ಹಾಸ್ಟೆಲ್ಸ್ ಉತ್ತಮ ಕಾರ್ಯಕ್ರಮ ಮಾಡುತ್ತಿರುವುದರಿಂದ ನಮ್ಮ ಘಟಕದ ಸದಸ್ಯರು ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ.
ಹೆಚ್ಚು ಸದಸ್ಯರನ್ನು ಪರಿಚಯಿಸಬೇಕು ಎಂದು ತಿಳಿಸಿದರು.

ತರುಣೋದಯ ಘಟಕ ಹೆಚ್ಚು ಚಾರಣಗಳನ್ನು ನಿರಂತರವಾಗಿ ಆಯೋಜಿಸುತ್ತಿದೆ. ಸುಮಾರಾಣಿ ಪ್ರಾರ್ಥಿಸಿದರು. ದಿಲೀಪ್ ನಾಡಿಗ್ ಸ್ವಾಗತಿಸಿದರು. ಜಿ.ವಿಜಯಕುಮಾರ್ ನಿರೂಪಿಸಿದರು. ಪ್ರಕೃತಿ ಮಂಚಾಲೆ ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...