Thursday, March 19, 2026
Thursday, March 19, 2026

Shivamogga Dasara Utsava ಯಾವ ಕಾರಣಕ್ಕೂ ಯುವುದೇ ಕೊರತೆಯಾಗದಂತೆ ಎಲ್ಲರೂ ಸೇರಿ ದಸರಾ ಯಶಸ್ವಿಗೊಳಿಸೋಣ- ಶಾಸಕ ಚೆನ್ನಿ

Date:

Shivamogga Dasara Utsava ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಲಾಗುತ್ತಿರುವ ಶಿವಮೊಗ್ಗ ದಸರಾ ಉತ್ಸವವನ್ನು ಅದ್ದೂರಿಯ ಜೊತೆಗೆ ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಎಸ್.ಎನ್. ಚನ್ನಬಸಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾಲಿಕೆಯ ಸಭಾಂಗಣದಲ್ಲಿ ನಡೆದ ವಿವಿಧ ಸಮಿತಿಗಳ ಕಾರ್ಯದರ್ಶಿಗಳ ಮಟ್ಟದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೈಸೂರು ಹೊರತು ಪಡಿಸಿದರೆ, ಶಿವಮೊಗ್ಗೆಯಲ್ಲಿ ವೈವಿಧ್ಯಮಯ ದಸರಾ ಸಂಘಟಿಸಲಾಗುತ್ತಿದೆ. ಈ ಬಾರಿ ವಿಶೇಷವಾಗಿ ಹದಿನಾಲ್ಕು ಉತ್ಸವಗಳ ಜೊತೆಗೆ ಸಮಾಜಮುಖಿಯಾದ ಇನ್ನೂ ಮೂರು ಉತ್ಸವಗಳನ್ನು ನಡೆಸಲು ಚಿಂತನೆ ನಡೆದಿದೆ ಎಂದರು.

ಶಿವಮೊಗ್ಗ ನಗರದ ಸ್ವಚ್ಚತೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಪೌರ ಕಾರ್ಮಿಕರನ್ನು ಒಳಗೊಂಡ ಪೌರ ಕಾರ್ಮಿರ ದಸರಾ ನಡೆಸಲು ಯೋಜಿಸಲಾಗಿದೆ. ಹಾಗೆಯೇ ಸದಾ ಸುದ್ದಿಯ ಹಿಂದೆ ಬಿದ್ದು, ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರನ್ನು ಒಳಗೊಂಡ ಪತ್ರಕರ್ತರ ದಸರಾ ಹಾಗೂ ನಮ್ಮ ಶ್ರೇಷ್ಟ ಪರಂಪರೆಯ ಗಮಕ ಕಲೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಗಮಕ ದಸರಾ ಆಚರಿಸಲು ಚಿಂತನೆ ನಡೆದಿದೆ ಎಂದ ಅವರು, ಈ ಮೂರೂ ದಸರಾವನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಪಟ್ಟವರೊಂದಿಗೆ ಚರ್ಚಿಸಿ, ಅಂತಿಮ ರೂಪ ನೀಡಲು ಯೋಜಿಸಲಾಗಿದೆ ಎಂದರು.

ಈ ಬಾರಿ ಚುನಾಯಿತ ಪಾಲಿಕೆಯಲ್ಲಿ ಪ್ರತಿನಿಽಗಳಿಲ್ಲ. ಆದರೆ, ಈ ಹಿಂದಿನ ಪಾಲಿಕೆ ಸದಸ್ಯರು ಮೇಯರ್, ಉಪ ಮೇಯರ್ ಸೇರಿದಂತೆ ಎಲ್ಲರನ್ನೂ ಒಳಗೊಂಡು, ಅವರ ಸಲಹೆ ಸೂಚನೆ ಮೇರೆಗೆ ಕಾರ್ಯಪ್ರವೃತ್ತರಾಗಬೇಕಿದೆ ಎಂದ ಅವರು, ಇದು ಯಾರಿಗೋ ಒಬ್ಬರಿಗೆ ಜವಾಬ್ದಾರಿ ಕೊಟ್ಟು, ಈವೆಂಟ್ ಮ್ಯಾನೇಜ್‌ಮೆಂಟ್ ಮಾಡುವ ಕೆಲಸ ಅಲ್ಲ. ಅದು ನಾಡ ಹಬ್ಬ. ಜನರ ಹಬ್ಬ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ಎಲ್ಲರನ್ನೂ ಒಳಗೊಂಡು ಕಾರ್ಯನಿರ್ವಹಿಸಿ. ಇದಕ್ಕಾಗಿ ಪ್ರತ್ಯೇಕ ಸಲಹಾ ಸಮಿತಿಯನ್ನು ರಚಿಸಿ ಎಂದು ಸಲಹೆ ನೀಡಿದರು.

Shivamogga Dasara Utsava ವಿಶೇಷವಾಗಿ ಅಲಂಕಾರ ಸಮಿತಿ, ಸ್ವಾಗತ ಸಮಿತಿಯ ಜವಾಬ್ದಾರಿ ಹೆಚ್ಚಿದೆ. ಯಾವುದೇ ಕಾರಣಕ್ಕೂ ಎಲ್ಲಿಯೂ ಕೊರತೆಯಾಗದಂತೆ ಎಚ್ಚರಿಕೆಯಿಂದ ಗಮನಿಸಿ, ಸಮಷ್ಟಿ ಪ್ರಯತ್ನದಿಂದ ದಸರಾವನ್ನು ಯಶಸ್ವಿಗೊಳಿಸೋಣ ಎಂದು ಆಶಿಸಿದ ಅವರು, ಪ್ರಸ್ತುತ ರಾಜ್ಯ ಸರ್ಕಾರದಿಂದ 1.50 ಕೋಟಿ ಹಣ ನಿಗಧಿಯಾಗಿದೆ. ಇದನ್ನು ಹೆಚ್ಚಿಸಲು ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಚಿವರನ್ನು ಭೇಟಿ ಮಾಡಿ ಪ್ರಯತ್ನ ಮಾಡಲಾಗುವುದು. ಹಣಕಾಸಿನ ತೊಂದರೆಯಾಗದಂತೆ ನೋಡಿಕೊಳ್ಳಲಾಗವುದು ಎಂದು ಭರವಸೆ ನೀಡಿದರು.

ಅಲಂಕಾರ ದಸರಾ, ಕಲಾ ದಸರಾ, ಚಲನಚಿತ್ರ ದಸರಾ, ರಂಗ ದಸರಾ, ಸಾಂಸ್ಕೃತಿಕ ದಸರಾ, ಮಹಿಳಾ ದಸರಾ, ಯೋಗ ದಸರಾ, ರೈತ ದಸರಾ ಸೇರಿದಂತೆ ವಿವಿಧ ಹದಿನಾಲ್ಕು ವಿಭಾಗಗಳಲ್ಲಿ ನಡೆಯುವ ದಸರಾವನ್ನು ಎಲ್ಲರೂ ಸೇರಿ ಅಚ್ಚುಕಟ್ಟಾಗಿ ನಿರ್ವಹಿಸೋಣ ಎಂದ ಅವರು, ಈ ಬಾರಿಯೂ ಸಹ ಅಂಬಾರಿ ಉತ್ಸವ ನಡೆಯಲಿದೆ. ಇದಕ್ಕಾಗಿ ಪ್ರಯತ್ನ ನಡೆದಿದೆ ಎಂದರು.

ಈ ಎಲ್ಲಾ ಸಮಿತಿಗಳ ಸಭೆಗಳು ಈಗಾಗಲೇ ಮೊದಲ ಹಂತದಲ್ಲಿ ನಡೆದಿದ್ದು, ಗಣಪತಿ ಹಬ್ಬ ಕಳೆದ ನಂತರ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ ಎಂದ ಅವರು, ಪ್ರಸ್ತುತ ಅಧಿಕಾರಿಗಳು ನಿರಂತರ ಸಭೆ ನಡೆಸಿ, ಸಕಾಲದಲ್ಲಿ ಆಹ್ವಾನ ಪತ್ರಿಕೆ ಕೈಗೆ ಸಿಗುವಂತೆ ಮಾಡಿ ಎಂದು ಮನವಿ ಮಾಡಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಿ ಎಸ್ ಅರುಣ್, ಬಲ್ಕಿಶ್, ಸರ್ಜಿ, ಆಯುಕ್ತ ಡಾ. ಕವಿತಾ ಹಾಗೂ ವಿವಿಧ ಸಮಿತಿಗಳ ಕಾರ್ಯದರ್ಶಿಗಳು, ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...