Sunday, December 7, 2025
Sunday, December 7, 2025

Teacher’s Day ಶಿಕ್ಷಕರ ವೇತನ ಐಎಎಸ್ ಅಧಿಕಾರಿಗಿಂತ ಹೆಚ್ಚಿನದ್ದಾಗಿರಬೇಕು- ಸಿಸೋಡಿಯ

Date:

Teacher’s Day 2047 ರ ವೇಳೆಗೆ ಭಾರತವು ಅಭಿವೃದ್ಧಿ ಹೊಂದಿದ ದೇಶವಾಗಿ ಹೊರಹೊಮ್ಮಬೇಕಾದರೆ ಶಿಕ್ಷಕರ ವೇತನವು ಐಎಎಸ್ ಅಧಿಕಾರಿಗಿಂತ ಹೆಚ್ಚಾಗಬೇಕು ಎಂದು ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರು ಗುರುವಾರ ಹೇಳಿದ್ದಾರೆ.

ಶಿಕ್ಷಕರ ದಿನಾಚರಣೆಯ ಅಂಗವಾಗಿ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಆಯೋಜಿಸಿದ್ದ ‘ಶಿಕ್ಷಕ ಸಮ್ಮಾನ್ ಸಮಾರೋಹ್’ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಶಿಕ್ಷಣ ಸಚಿವ, “ಇಂದು, 2047 ರ ಭಾರತದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಇಲ್ಲಿ ಕುಳಿತಿರುವ ಶಿಕ್ಷಕರು, ನಿಮ್ಮೊಂದಿಗೆ ಇರುವ ಮಕ್ಕಳು 2047ಕ್ಕೆ ಬಹಳ ಮುಖ್ಯ. 2047ರ ಅಭಿವೃದ್ಧಿ ಹೊಂದಿದ ಭಾರತ ಈ ಮಕ್ಕಳ ಮೇಲೆ ಅವಲಂಬಿತವಾಗಿದೆ ಎಂದರು.
“ಹೆಚ್ಚಿನ ಅಭಿವೃದ್ಧಿ ಹೊಂದಿದ ದೇಶಗಳಲ್ಲಿ, ಶಿಕ್ಷಕರ ಸಂಬಳವು ಅಲ್ಲಿನ ಅಧಿಕಾರಶಾಹಿಗಳಿಗಿಂತ ಹೆಚ್ಚಾಗಿದೆ. ಐದು ವರ್ಷಗಳ ಅನುಭವ ಹೊಂದಿರುವ ಶಿಕ್ಷಕರು ಒಬ್ಬ ಐಎಎಸ್ ಅಧಿಕಾರಿಗಿಂತ ಹೆಚ್ಚಿನ ಸಂಬಳ ಪಡೆಯುತ್ತಾರೆ” ಎಂದು ಸಿಸೋಡಿಯಾ ಜರ್ಮನಿ, ಸ್ವಿಟ್ಜರ್ಲೆಂಡ್ ಮತ್ತು ಇತರ ಕೆಲವು ದೇಶಗಳ ಉದಾಹರಣೆ ನೀಡಿದರು.
Teacher’s Day ಸರ್ವಾಧಿಕಾರದ ವಿರುದ್ಧ ಜನರು ಹೋರಾಡಬೇಕು: ಮನೀಶ್ ಸಿಸೋಡಿಯಾ
ಇದೇ ವೇಳೆ ತಾವು ತಿಹಾರ್ ಜೈಲಿನಲ್ಲಿ ಬಂಧಿಯಾಗಿರುವ ಬಗ್ಗೆ ಮಾತನಾಡಿದ ಸಿಸೋಡಿಯಾ, ಪ್ರತಿದಿನ 8-10 ಗಂಟೆಗಳ ಕಾಲ ಪುಸ್ತಕಗಳನ್ನು ಓದುತ್ತಿದ್ದೆ ಮತ್ತು ವಿವಿಧ ದೇಶಗಳ ಶಿಕ್ಷಣ ವ್ಯವಸ್ಥೆಯನ್ನು ತಿಳಿದುಕೊಂಡೆ. “ಕಳೆದ ಒಂದೂವರೆ ವರ್ಷ ನಾನು ನನ್ನ ಜೀವನದ ಕಠಿಣ ಪರಿಸ್ಥಿತಿಯನ್ನು ಎದುರಿಸಿದ್ದೇನೆ ಎಂದರು.
ನಾವು ಕಷ್ಟಕರ ಸಂದರ್ಭಗಳಲ್ಲಿದ್ದಾಗ ನಮಗೆ ಶಿಕ್ಷಕರು ಕಲಿಸಿದ ಪಾಠಗಳು ಹೆಚ್ಚು ಉಪಯುಕ್ತವಾಗುತ್ತವೆ. ನಾನು ಜೈಲಿನಲ್ಲಿದ್ದಾಗ ಸಾಕಷ್ಟು ಅಧ್ಯಯನ ಮಾಡಿದ್ದೇನೆ. 8-10 ಗಂಟೆಗಳ ಕಾಲ ಪುಸ್ತಕಗಳನ್ನು ಓದುತ್ತಿದ್ದೆ. ಎಲ್ಲಕ್ಕಿಂತ ಹೆಚ್ಚಾಗಿ ಶಿಕ್ಷಣ, ಭಾರತದ ಶಿಕ್ಷಣ ವ್ಯವಸಬಗ್ಗೆ, ವಿಶ್ವದ ಶಿಕ್ಷಣ ವ್ಯವಸ್ಥೆ ಬಗ್ಗೆ ಓದಿದ್ದೇನೆ ಎಂದರು.

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಿಸೋಡಿಯಾ 17 ತಿಂಗಳ ಕಾಲ ತಿಹಾರ್ ಜೈಲಿನಲ್ಲಿದ್ದರು. ಕಳೆದ ತಿಂಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...