Thursday, August 6, 2026
Thursday, August 6, 2026

Hosanagara News ದಂಪತಿ ಜಗಳ.ಪತ್ನಿಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ ಪತಿ ಆತ್ಮಹತ್ಯೆ

Date:

Hosanagara News ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯಲ್ಲಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ ನಂತರ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕೋಡೂರು ಗ್ರಾಮದ ಸದಾನಂದ ಭಟ್ ಮತ್ತು ಪತ್ನಿ ಸವಿತಾ ನಡುವೆ ಗುರುವಾರ ಕೌಟುಂಬಿಕ ಕಾರಣಗಳಿಗಾಗಿ ಜಗಳ ನಡೆದಿತ್ತು. ಜಗಳ ವಿಕೋಪಕ್ಕೆ ತಿರುಗಿ ಪತ್ನಿ ಮೇಲೆ ಪತಿ ಮಾರಣಾಂತಿಕ ಹಲ್ಲೆ ನಡೆಸಿದ್ದನು.
ತಲೆಗೆ ತೀವ್ರವಾದ ಗಾಯವಾದ ಹಿನ್ನೆಲೆಯಲ್ಲಿ ಸಬೀತಾ ಅವರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ರಿಪ್ಪನ್‌ಪೇಟೆ ಪೊಲೀಸರು ಆರೋಪಿ ಸದಾನಂದ ಭಟ್ ಗೆ ಶೋಧ ನಡೆಸಿದಾಗ ಆತನ ಕಾರು ಪಟಗುಪ್ಪ ಸೇತುವೆ ಬಳಿ ಕಂಡುಬಂದಿದೆ. ಆದರೆ ಆತನ‌ ಸುಳಿವು ಸಿಕ್ಕಿರಲಿಲ್ಲ ನಂತರ ಕಾರನ್ನು ಹೊಸನಗರ ಪೊಲೀಸರು ವಶಪಡಿಸಿಕೊಂಡಿದ್ದರು.
Hosanagara News ಶುಕ್ರವಾರ ಬೆಳಿಗ್ಗೆ ಆರೋಪಿ ಸದಾನಂದ ಭಟ್ ಮೃತ ದೇಹ ಪಟಗುಪ್ಪ ಸೇತುವೆ ಬಳಿಯಲ್ಲಿ ಪತ್ತೆಯಾಗಿದೆ. ಶವ ಮೇಲೆತ್ತಿ ಮಹಜರು ನಡೆಸಿ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....

DC Shivamogga ಮುಂದಿನ 61 ವಾರಗಳಿಗೆ ಜಾನುವಾರುಗಳ ಅಗತ್ಯ ಮೇವಿಗೆ ಕೊರತೆಯಿಲ್ಲ : ಪ್ರಭುಲಿಂಗ ಕವಳಿಕಟ್ಟಿ

DC Shivamogga ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್...