Saturday, December 6, 2025
Saturday, December 6, 2025

Bhadravathi Ganesha Festival 2024 ಅರಬಿಳಚಿಯಲ್ಲಿ ಗಣೇಶೋತ್ಸವ ವಾದ್ಯಮೇಳ ವಿವಾದ,ಗಲಭೆ. ಆರು ಮಂದಿ ಗಾಯಾಳು

Date:

Bhadravathi Ganesha Festival 2024 ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಗಲಾಟೆ ನಡೆದು ಪೊಲೀಸರೇ ವಿಸರ್ಜನೆ ನಡೆಸಿದ ಘಟನೆ ಅರೆಬಿಳಚಿ ಕ್ಯಾಂಪಿನಲ್ಲಿ ನಡೆದಿದೆ.
ಈ ವೇಳೆ ನಡೆದ ಗಲಾಟೆಯಲ್ಲಿ ಪೊಲೀಸರಿಗೂ ಸಣ್ಣಪುಟ್ಟ ಗಾಯವಾಗಿದೆ.,
ಗಲಾಟೆ ತಾರಕಕ್ಕೆ ಏರಿದ ಪರಿಣಾಮ ಪೊಲೀಸರು ಮಧ್ಯಪ್ರವೇಶಿಸಿ ಗಣಪತಿಯನ್ನ ವಿಸರ್ಜನೆ ಮಾಡಿರುವುದಾಗಿ ಎಸ್ಪಿ ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಅರಬಿಳಚಿ ಕ್ಯಾಂಪ್‌ನಲ್ಲಿ ತಮಿಳರ ಮತ್ತು ಬೋವಿ ಕಾಲನಿಯ ಗಣಪತಿಯನ್ನು ಪ್ರತ್ಯೇಕ ಕೂಡ್ರಿಸಲಾಗಿದ್ದು, ವಿಸರ್ಜನೆಗೆ ಒಂದೇ ಡೊಳ್ಳಿನ ತಂಡದವರಿಗೆ ಆಮಂತ್ರಿಸಲಾಗಿತ್ತು.

Bhadravathi Ganesha Festival 2024 ತಂಡದವರು ಬಂದಾಗ ತಮ್ಮ ಗಣಪತಿ ವಿಸರ್ಜನೆಗೆ ಬರಬೇಕೆಂದು ಇತ್ತಂಡದವರೂ ಹಠ ಹಿಡಿದಾಗ ಗಲಾಟೆ ನಡೆದಿದೆ‌ .
ಡೊಳ್ಳು ಬಾರಿಸುವವರ ಜೊತೆ ವಾಗ್ವಾದ ನಡೆದಿದೆ. ವಾಗ್ವಾದ ವಿಕೋಪಕ್ಕೆ ತಿರುಗಿ ಪೊಲೀಸ್ ಸೇರಿದಂತೆ ಆರು ಮಂದಿಗೆ ಗಾಯವಾಗಿದೆ. ಗಾಯಾಳುಗಳು ಭದ್ರಾವತಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...