Sunday, March 22, 2026
Sunday, March 22, 2026

Bhadravathi Ganesha Festival 2024 ಅರಬಿಳಚಿಯಲ್ಲಿ ಗಣೇಶೋತ್ಸವ ವಾದ್ಯಮೇಳ ವಿವಾದ,ಗಲಭೆ. ಆರು ಮಂದಿ ಗಾಯಾಳು

Date:

Bhadravathi Ganesha Festival 2024 ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಗಲಾಟೆ ನಡೆದು ಪೊಲೀಸರೇ ವಿಸರ್ಜನೆ ನಡೆಸಿದ ಘಟನೆ ಅರೆಬಿಳಚಿ ಕ್ಯಾಂಪಿನಲ್ಲಿ ನಡೆದಿದೆ.
ಈ ವೇಳೆ ನಡೆದ ಗಲಾಟೆಯಲ್ಲಿ ಪೊಲೀಸರಿಗೂ ಸಣ್ಣಪುಟ್ಟ ಗಾಯವಾಗಿದೆ.,
ಗಲಾಟೆ ತಾರಕಕ್ಕೆ ಏರಿದ ಪರಿಣಾಮ ಪೊಲೀಸರು ಮಧ್ಯಪ್ರವೇಶಿಸಿ ಗಣಪತಿಯನ್ನ ವಿಸರ್ಜನೆ ಮಾಡಿರುವುದಾಗಿ ಎಸ್ಪಿ ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಅರಬಿಳಚಿ ಕ್ಯಾಂಪ್‌ನಲ್ಲಿ ತಮಿಳರ ಮತ್ತು ಬೋವಿ ಕಾಲನಿಯ ಗಣಪತಿಯನ್ನು ಪ್ರತ್ಯೇಕ ಕೂಡ್ರಿಸಲಾಗಿದ್ದು, ವಿಸರ್ಜನೆಗೆ ಒಂದೇ ಡೊಳ್ಳಿನ ತಂಡದವರಿಗೆ ಆಮಂತ್ರಿಸಲಾಗಿತ್ತು.

Bhadravathi Ganesha Festival 2024 ತಂಡದವರು ಬಂದಾಗ ತಮ್ಮ ಗಣಪತಿ ವಿಸರ್ಜನೆಗೆ ಬರಬೇಕೆಂದು ಇತ್ತಂಡದವರೂ ಹಠ ಹಿಡಿದಾಗ ಗಲಾಟೆ ನಡೆದಿದೆ‌ .
ಡೊಳ್ಳು ಬಾರಿಸುವವರ ಜೊತೆ ವಾಗ್ವಾದ ನಡೆದಿದೆ. ವಾಗ್ವಾದ ವಿಕೋಪಕ್ಕೆ ತಿರುಗಿ ಪೊಲೀಸ್ ಸೇರಿದಂತೆ ಆರು ಮಂದಿಗೆ ಗಾಯವಾಗಿದೆ. ಗಾಯಾಳುಗಳು ಭದ್ರಾವತಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ripponpet News ಪೆಟ್ರೋಲ್ ಕೊರತೆ ಎಂಬ ಸುದ್ದಿ ನಂಬಿ ರಿಪ್ಪನ್ ಪೇಟೆಯ ‘ಬಂಕ್’ ಗಳಿಗೆ ಮುಗಿಬಿದ್ದ ಜನ.

Ripponpet News ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್...

Yakshagana ಶಿವಮೊಗ್ಗದ ವರದಾ ಐತಾಳ್ ಅವರಿಗೆ ಶಿವರಾಮ ಕಾರಂತ ಪ್ರತಿಷ್ಠಾನದಿಂದ “ಸಾಧಕಿ ಪ್ರಶಸ್ತಿ” ಪುರಸ್ಕಾರ.

Yakshagana ತಾll 15.03.2026 ರಂದು ಯಕ್ಷಗಾನ ದಲ್ಲಿ ಹೊಸಸಾಧ್ಯತೆಯ ಅನಾವರಣಕ್ಕಾಗಿ ಡಾllಶಿವರಾಮ...

Ramadan ಸಮಾಜದಲ್ಲಿ ಶಾಂತಿ – ಸೌಹಾರ್ದದಿಂದ ಬಾಳಬೇಕು- ಮೌಲಾನಾ ಮುಫ್ತಿ ತಪ್ಜಿಲ್ ಆಲಂ ಖಾಸ್ಮಿ

Ramadan ತಿಂಗಳು ಪೂರ್ತಿ ಉಪವಾಸ ವ್ರತ ಆಚರಣೆಯ ನಂತರ ಮುಸ್ಲಿಂ ಬಾಂಧವರು...

Chess ಮಾರ್ಚ್ 25 ರಿಂದ ಶಿವಮೊಗ್ಗದಲ್ಲಿ ಬೇಸಿಗೆ ರಜೆ ನಿಮಿತ್ತ ಚೆಸ್ ತರಬೇತಿ ಶಿಬಿರ.

Chess ಶಿವಮೊಗ್ಗ ನಗರದ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯಿಂದ ಈ...