Friday, September 27, 2024
Friday, September 27, 2024

Industrial Smart Cities shimoga ಶಿವಮೊಗ್ಗ ನಗರವನ್ನ ಕೈಗಾರಿಕಾ ಸ್ಮಾರ್ಟ್ ಸಿಟಿ ಆಯ್ಕೆಗೆ ಪರಿಗಣಿಸಲು ಮನವಿ

Date:

Industrial Smart Cities shimoga ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಶಿವಮೊಗ್ಗ ಮಹಾನಗರವನ್ನು ಕೈಗಾರಿಕಾ ಸ್ಮಾರ್ಟ್ ಸಿಟಿಯಾಗಿ ಆಯ್ಕೆ ಮಾಡುವಂತೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಸಭೆಯಲ್ಲಿ ದೇಶದ 12 ಕೈಗಾರಿಕಾ ಸ್ಮಾರ್ಟ್ ಸಿಟಿ ಸ್ಥಾಪಿಸಲು ಅನುಮೋದನೆ ನೀಡಿದೆ. ಶಿವಮೊಗ್ಗ ನಗರವನ್ನು ಯೋಜನೆ ವ್ಯಾಪ್ತಿಯಲ್ಲಿ ಕೈಗಾರಿಕಾ ಸ್ಮಾರ್ಟ್ ಸಿಟಿ ಸ್ಥಾಪಿಸಲು ಆಯ್ಕೆ ಮಾಡಲು ಮುಂದಾಗಬೇಕು ಎಂದು ಸಂಘದ ಪದಾಧಿಕಾರಿಗಳು ಮನವಿ ಮಾಡಿದರು.
ಶಿವಮೊಗ್ಗ ಜಿಲ್ಲೆಯು ಪ್ರವಾಸೋದ್ಯಮ, ಆಹಾರ ಉತ್ಪನ್ನ ಕ್ಷೇತ್ರ ಹಾಗೂ ಕೈಗಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶಗಳಿದ್ದು, ಈಗಾಗಲೇ ಕೈಗಾರಿಕಾ ಕ್ಷೇತ್ರದಲ್ಲಿ ಮಹತ್ತರ ಕೊಡುಗೆಗಳನ್ನು ನೀಡುತ್ತಿದೆ. ಕರ್ನಾಟಕ ರಾಜ್ಯದಿಂದ ಶಿವಮೊಗ್ಗ ಆಯ್ಕೆ ಮಾಡುವುದು ಅತ್ಯಂತ ಸೂಕ್ತವಾಗಿದೆ ಎಂದು ತಿಳಿಸಿದರು.
Industrial Smart Cities shimoga ಶಿವಮೊಗ್ಗ ಮಹಾನಗರಕ್ಕೆ ಹೊಂದಿಕೊಂಡಿರುವ ದೇವಕಾತಿಕೊಪ್ಪದಲ್ಲಿ ಕೈಗಾರಿಕೆಗೆ ಅವಶ್ಯವಿರುವ ಸೌಕರ್ಯ ಹಾಗೂ ಅನುಮತಿಯನ್ನು ಒದಗಿಸಬೇಕು. ಸಿದ್ಲಿಪುರ ಸೇರಿ ಕೈಗಾರಿಕೆಗೆ ಇರುವ ಅವಕಾಶ ಜಾಗಗಳಲ್ಲಿ ಹೊಸ ಹೊಸ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯ ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು.
ಶಿವಮೊಗ್ಗ ಜಿಲ್ಲೆಯು ಪ್ರಸ್ತುತ ವಾಯು ಸಾರಿಗೆ, ರೈಲ್ವೆ ಸಾರಿಗೆ ಹಾಗೂ ರಸ್ತೆ ಸಾರಿಗೆಯಲ್ಲಿ ಉತ್ತಮ ಸೌಲಭ್ಯ ಹೊಂದಿದ್ದು, ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿಗಳು ಹಾದುಹೋಗಿವೆ. ಕೈಗಾರಿಕಾ ಕ್ಷೇತ್ರಕ್ಕೆ ಪೂರಕವಾದ ವಾತಾವರಣ ಶಿವಮೊಗ್ಗದಲ್ಲಿದೆ. ಇಲ್ಲಿ ಕೈಗಾರಿಕಾ ಸ್ಮಾರ್ಟ್ ಸಿಟಿ ಸ್ಥಾಪಿಸಿದಲ್ಲಿ ಉದ್ಯೋಗ ಅವಕಾಶ ಹೆಚ್ಚು ಲಭ್ಯವಾಗುತ್ತದೆ ಎಂದು ಸಂಘದ ಪದಾಧಿಕಾರಿಗಳು ಮನವಿ ಮಾಡಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಉಪಾಧ್ಯಕ್ಷ ಬಿ.ಗೋಪಿನಾಥ್, ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್, ಹರ್ಷ ಕಾಮತ್, ಪ್ರದೀಪ್ ವಿ.ಎಲಿ, ವಿಶ್ವೇಶ್ವರಯ್ಯ, ರಾಮಾಜೋಯೀಸ್ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hassan Manikya Prakashana ಶಿವಮೊಗ್ಗದ ಕವಿ ಶಿ.ಜು.ಪಾಶಾ ಅವರಿಗೆ “ಜನ್ನ ಕಾವ್ಯ ಪ್ರಶಸ್ತಿ”

Hassan Manikya Prakashana ಹಾಸನದ ಮಾಣಿಕ್ಯ ಪ್ರಕಾಶನ(ರಿ) ರಾಜ್ಯಮಟ್ಟದ ಜನ್ನ ಕಾವ್ಯ...

Vajreshwari Co Operative Society ಶ್ರೀವಜ್ರೇಶ್ವರಿ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ

Vajreshwari Co Operative Society ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ...

Inner Wheel Shivamogga ದುರ್ಬಲರಿಗೆ ನೆರವು ನೀಡಿದಾಗ ಸೇವೆ ಸಾರ್ಥಕ- ಶಿಲ್ಪ ಗೋಪಿನಾಥ್

Inner Wheel Shivamogga ನಾವು ಮಾಡುವ ಸೇವೆ ಸಾರ್ಥಕಗೊಳ್ಳಬೇಕಾದರೆ...

National Education Committee ಬೆಳಗುತ್ತಿ & ಮಲ್ಲಿಗೇನಹಳ್ಳಿಯಲ್ಲಿ ಗಮನ ಸೆಳೆದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

National Education Committee ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿರಂಗಪ್ರಯೋಗದ...