Wednesday, December 17, 2025
Wednesday, December 17, 2025

Industrial Smart Cities shimoga ಶಿವಮೊಗ್ಗ ನಗರವನ್ನ ಕೈಗಾರಿಕಾ ಸ್ಮಾರ್ಟ್ ಸಿಟಿ ಆಯ್ಕೆಗೆ ಪರಿಗಣಿಸಲು ಮನವಿ

Date:

Industrial Smart Cities shimoga ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಶಿವಮೊಗ್ಗ ಮಹಾನಗರವನ್ನು ಕೈಗಾರಿಕಾ ಸ್ಮಾರ್ಟ್ ಸಿಟಿಯಾಗಿ ಆಯ್ಕೆ ಮಾಡುವಂತೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಸಭೆಯಲ್ಲಿ ದೇಶದ 12 ಕೈಗಾರಿಕಾ ಸ್ಮಾರ್ಟ್ ಸಿಟಿ ಸ್ಥಾಪಿಸಲು ಅನುಮೋದನೆ ನೀಡಿದೆ. ಶಿವಮೊಗ್ಗ ನಗರವನ್ನು ಯೋಜನೆ ವ್ಯಾಪ್ತಿಯಲ್ಲಿ ಕೈಗಾರಿಕಾ ಸ್ಮಾರ್ಟ್ ಸಿಟಿ ಸ್ಥಾಪಿಸಲು ಆಯ್ಕೆ ಮಾಡಲು ಮುಂದಾಗಬೇಕು ಎಂದು ಸಂಘದ ಪದಾಧಿಕಾರಿಗಳು ಮನವಿ ಮಾಡಿದರು.
ಶಿವಮೊಗ್ಗ ಜಿಲ್ಲೆಯು ಪ್ರವಾಸೋದ್ಯಮ, ಆಹಾರ ಉತ್ಪನ್ನ ಕ್ಷೇತ್ರ ಹಾಗೂ ಕೈಗಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶಗಳಿದ್ದು, ಈಗಾಗಲೇ ಕೈಗಾರಿಕಾ ಕ್ಷೇತ್ರದಲ್ಲಿ ಮಹತ್ತರ ಕೊಡುಗೆಗಳನ್ನು ನೀಡುತ್ತಿದೆ. ಕರ್ನಾಟಕ ರಾಜ್ಯದಿಂದ ಶಿವಮೊಗ್ಗ ಆಯ್ಕೆ ಮಾಡುವುದು ಅತ್ಯಂತ ಸೂಕ್ತವಾಗಿದೆ ಎಂದು ತಿಳಿಸಿದರು.
Industrial Smart Cities shimoga ಶಿವಮೊಗ್ಗ ಮಹಾನಗರಕ್ಕೆ ಹೊಂದಿಕೊಂಡಿರುವ ದೇವಕಾತಿಕೊಪ್ಪದಲ್ಲಿ ಕೈಗಾರಿಕೆಗೆ ಅವಶ್ಯವಿರುವ ಸೌಕರ್ಯ ಹಾಗೂ ಅನುಮತಿಯನ್ನು ಒದಗಿಸಬೇಕು. ಸಿದ್ಲಿಪುರ ಸೇರಿ ಕೈಗಾರಿಕೆಗೆ ಇರುವ ಅವಕಾಶ ಜಾಗಗಳಲ್ಲಿ ಹೊಸ ಹೊಸ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯ ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು.
ಶಿವಮೊಗ್ಗ ಜಿಲ್ಲೆಯು ಪ್ರಸ್ತುತ ವಾಯು ಸಾರಿಗೆ, ರೈಲ್ವೆ ಸಾರಿಗೆ ಹಾಗೂ ರಸ್ತೆ ಸಾರಿಗೆಯಲ್ಲಿ ಉತ್ತಮ ಸೌಲಭ್ಯ ಹೊಂದಿದ್ದು, ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿಗಳು ಹಾದುಹೋಗಿವೆ. ಕೈಗಾರಿಕಾ ಕ್ಷೇತ್ರಕ್ಕೆ ಪೂರಕವಾದ ವಾತಾವರಣ ಶಿವಮೊಗ್ಗದಲ್ಲಿದೆ. ಇಲ್ಲಿ ಕೈಗಾರಿಕಾ ಸ್ಮಾರ್ಟ್ ಸಿಟಿ ಸ್ಥಾಪಿಸಿದಲ್ಲಿ ಉದ್ಯೋಗ ಅವಕಾಶ ಹೆಚ್ಚು ಲಭ್ಯವಾಗುತ್ತದೆ ಎಂದು ಸಂಘದ ಪದಾಧಿಕಾರಿಗಳು ಮನವಿ ಮಾಡಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಉಪಾಧ್ಯಕ್ಷ ಬಿ.ಗೋಪಿನಾಥ್, ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್, ಹರ್ಷ ಕಾಮತ್, ಪ್ರದೀಪ್ ವಿ.ಎಲಿ, ವಿಶ್ವೇಶ್ವರಯ್ಯ, ರಾಮಾಜೋಯೀಸ್ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...