Wednesday, August 12, 2026
Wednesday, August 12, 2026

CM Siddaramaiah ಭದ್ರಾವತಿ ತಾಲ್ಲೂಕಿನ ರಾಜಕೀಯ ಮುಖಂಡರ ಪಕ್ಷಾಂತರ ಪರ್ವ

Date:

CM Siddaramaiah ಭದ್ರಾವತಿ‌ ನಗರಸಭೆ ಯ ಮೂವರು ಸದಸ್ಯರು, ಬೆಂಗಳೂರಿನಲ್ಲಿ ಭಾನುವಾರ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.
ನಗರಸಭಾ ಸದಸ್ಯ ವಿ.ಕದಿರೇಶ್, ಅನಿತಾ ಮಲ್ಲೇಶ್, ಶಶಿಕಲಾ ನಾರಾಯಣಪ್ಪ ಅವರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಇವರ ಜೊತೆಗೆ ವಿ.ಕದಿರೇಶ್ ಅವರ ಪುತ್ರ, ಬಿಜೆಪಿಯ ಹಿಂದುಳಿದ ವರ್ಗ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಮಂಜುನಾಥ್ ಅವರು ಕೂಡ, ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎಂದು ಸಿಎಂ ಕಚೇರಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಭದ್ರಾವತಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ವರ, , ಮುಖಂಡರಾದ ಕುಮಾರ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
CM Siddaramaiah ಪ್ರಸ್ತುತ ಕಾಂಗ್ರೆಸ್ ಸೇರ್ಪಡೆಯಾಗಿರುವ ಮೂವರು ನಗರಸಭಾ ಸದಸ್ಯರು ಬಿಜೆಪಿ ಪಕ್ಷದವರಾಗಿದ್ದಾರೆ. ನಗರಸಭೆ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆ ವೇಳೆ, ಈ ಮೂವರು ಸದಸ್ಯರು ಪಕ್ಷದ ವಿಪ್ ಉಲ್ಲಂಘಿಸಿ ಗೈರು ಹಾಜರಾಗಿದ್ದರು.
ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಬಿಜೆಪಿ ಪಕ್ಷವು ಈ ಮೂವರು ಸದಸ್ಯರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...