Friday, May 8, 2026
Friday, May 8, 2026

Horticulture Department ಪಿಎಂ ಕೃಷಿ ಸಿಂಚಾಯಿ ಯೋಜನೆ ಲಾಭ ಪಡೆಯಲು ಶಿಕಾರಿಪುರ ತಾಲ್ಲೂಕಿನ ಅರ್ಹರಿಂದ ಅರ್ಜಿ ಆಹ್ವಾನ

Date:

Horticulture Department ಶಿಕಾರಿಪುರ ತೋಟಗಾರಿಕೆ ಇಲಾಖೆಯು 2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ವರ್ಗದ ರೈತರಿಂದ ಅರ್ಜಿ ಆಹ್ವಾನಿಸಿದೆ.
ತೋಟಗಾರಿಕೆ ಬೆಳೆಯನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ವರ್ಗದ ರೈತರಿಗೆ ಹನಿ ನೀರಾವರಿ ಅಳವಡಿಸಿದ ಪ್ರತಿ ಫಲಾನುಭವಿಗೆ ಮೊದಲ 2 ಹೆ. ಪ್ರದೇಶದವರೆಗೆ ಶೇ. 90% ಮತ್ತು 3 ಹೆ. ಪ್ರದೇಶಕ್ಕೆ ಶೇ. 45% ರಷ್ಟು ಸಹಾಯಧನ ಸೌಲಭ್ಯ ಲಭ್ಯವಿರುತ್ತದೆ. ಇಲಾಖೆಯಿಂದ ಅನುಮೋದಿತ ಕಂಪನಿಗಳ ಮೂಲಕವೇ ರೈತರು ಸೂಕ್ಷ್ಮ ನೀರಾವರಿ ಘಟಕವನ್ನು ಅಳವಡಿಸಿಕೊಲ್ಳುವುದು. ಆಸಕ್ತ ರೈತರು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಹಾಗೂ ತೋಟಗಾರಿಕೆ ಇಲಾಖೆ, ಶಿಕಾರಿಪುರ ಕಚೇರಿಯನ್ನು ಸಂಪರ್ಕಿಸಿ ಅರ್ಜಿಯನ್ನು ಪಡೆಯುವುದು.
Horticulture Department 2024-25ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯ ಪರಿಶಿಷ್ಟ ಜಾತಿ ರೈತರಿಗೆ ಟ್ರಾಕ್ಟರ್ ಖರೀದಿಸಲು ಸಹಾಯಧನ ನೀಡಲಾಗುತ್ತಿದ್ದು, ಆಸಕ್ತ ರೈತರು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಿ ಹೆಸರು ನೊಂದಾಯಿಸಿಕೊಳ್ಳುವುದು. ಹಾಗೂ 2024-25ನೇ ಸಾಲಿನ ಎಸ್.ಎಂ.ಎ.ಎಂ. ಯೋಜನೆಯಡಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ ಹಾಗೂ ಅಡಿಕೆ ದೋಟಿಗಳಿಗೆ ಸಹಾಯಧನ ನೀಡುಲಾಗುವುದು. ಆಸಕ್ತ ರೈತರು ಆಯಾ ಹೋಬಳಿ ರೈತರ ಸಂಪರ್ಕ ಸಹಾಯಕ ತೋಟಗಾರಿಕಾ ಅಧಿಕಾರಿಗಳನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳುವುದು.
ಈ ಎಲ್ಲಾ ಯೋಜನೆಗಳಿಗೆ ಸೆ. 23 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga police ಅನಾಮಧೇಯ ಮೃತವ್ಯಕ್ತಿ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ.

Shivamogga police ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್...

Shikaripura Station ಶಿಕಾರಿಪುರ ಠಾಣೆಯಲ್ಲಿ ವಿವಿಧ ವಸ್ತುಗಳ ಹರಾಜು.

Shikaripura Station ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯ...

Youth Hostel Association ಸರ್ ಪಾಸ್ ಹಿಮಾಲಯ ಚಾರಣವು ಪ್ರತಿಯೊಬ್ಬರಿಗೂ ಸಂತಸ ಹೆಚ್ಚಿಸುತ್ತದೆ- ಎಸ್.ಎಸ್.ವಾಗೀಶ್.

Youth Hostel Association ಚಾರಣಿಗರ ಸ್ವರ್ಗ ಹಿಮಾಲಯ ಪ್ರದೇಶ. ಪ್ರತಿ ದಿನ ಪ್ರಾಕೃತಿಕ...