Tuesday, October 1, 2024
Tuesday, October 1, 2024

Children’s Day ಹೊಯ್ಸಳ & ಕೆಳದಿ ಚನ್ನಮ್ಮ ಶೌರ್ಯ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಗೆ ಅರ್ಜಿ ಆಹ್ವಾನ

Date:

Children’s Day ಮಕ್ಕಳ ದಿನಾಚರಣೆ-2024 ರ ಪ್ರಯುಕ್ತ, ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷಗೊಳಗಿನ ಬಾಲಕರಿಗೆ ‘ಹೊಯ್ಸಳ’ ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಶೌರ್ಯ ಪ್ರಶಸ್ತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಸಾಹಸ ಪ್ರಕರಣವು ದಿ: 01-08-2023 ರಿಂದ 31-07-2024 ರೊಳಗೆ ನಡೆದಿರಬೇಕು.
ದಿ: 01-08-2006 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000 ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು.

ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 05 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು.

Children’s Day ಅರ್ಜಿ ಸಲ್ಲಿಸುವವರು ವ್ಯಕ್ತಿ/ಸಂಸ್ಥೆಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ಇಲ್ಲದಿರುವ ಬಗ್ಗೆ ಗುಪ್ತಚರ ಇಲಾಖೆಯಿಂದ(ಇಂಟೆಲಿಜೆನ್ಸ್ ರಿಪೋರ್ಟ್) ವರದಿ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು.
ಮಕ್ಕಳ ದಿನಾಚರಣೆ -2024 ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿವಮೊಗ್ಗ ಇವರಿಂದ ಪಡೆದುಕೊಂಡು ದಿ: 24-09-2024 ರೊಳಿಗೆ ಸಲ್ಲಿಸಬೇಕು. ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿಯೇ ಸಲ್ಲಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ಕೃಷ್ಣಪ್ಪ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shakahari Film ಶಾಖಾಹಾರಿ ಚಿತ್ರಕ್ಕೆ ಕಾನೂನು ಜಯ

Shakahari Film ಶಿವಮೊಗ್ಗದ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಿಸಿದ್ದ ಶಾಖಾಹಾರಿ...

Mahatma Gandhi ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ, ಫಲಿತಾಂಶ ಪ್ರಕಟ

Mahatma Gandhi ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ...

Yaduveer Wadiyar ಶಿವಮೊಗ್ಗ ಹಬ್ಬ ಯಶಸ್ವಿಗೊಳಿಸಿ- ಸಂಸದ ಯದುವೀರ್

Yaduveer Wadiyar ಪ್ರವಾಸೋದ್ಯಮ ಹಾಗೂ ಜಿಲ್ಲೆಯ ಉದ್ಯಮಿಗಳ ಪ್ರೋತ್ಸಾಹಿಸುವ ದೃಷ್ಟಿಯಿಂದ...

Shivamogga Cycle Club ಸೈಕಲ್ ಅಭ್ಯಾಸವು ಜನಸಾಮಾನ್ಯರ ವ್ಯಾಯಾಮಶಾಲೆ- ಎನ್.ಗೋಪಿನಾಥ್

Shivamogga Cycle Club ಸೈಕಲ್ ಅಭ್ಯಾಸ ಮಾಡುವುದರಿಂದ ಹೃದಯ ಸಂಬಂಧಿ...