Monday, February 2, 2026
Monday, February 2, 2026

Dr. H B Manjunath ನಾಯಕತ್ವ ಎಂದರೆ ಇತರರ ಮೇಲೆ ದರ್ಪ ತೋರಿಸುವುದಲ್ಲ- ಡಾ.ಎಚ್.ಬಿ.ಮಂಜುನಾಥ್

Date:

Dr. H B Manjunath ಸ್ವ ಸಾಮರ್ಥ್ಯದ ಅರಿವು ಸಾಧನೆಗೆ ಪ್ರೇರಣೆಯಾಗುತ್ತದೆ, ಭಾರತದ ಯುವಶಕ್ತಿಯು ಜಾಗತಿಕ ಮಟ್ಟದ ಸಾಧನೆಗಾಗಿ ಸ್ವ ಸಾಮರ್ಥ್ಯದ ಅರಿವನ್ನು ಮಾಡಿಕೊಳ್ಳಬೇಕಿದೆ ಎಂದು ಹಿರಿಯ ಪತ್ರಕರ್ತ ಡಾ.ಎಚ್ ಬಿ ಮಂಜುನಾಥ ಕರೆಕೊಟ್ಟರು.

ದಾವಣಗೆರೆ ನಗರದ ಅಜ್ಜಂಪುರ ಗೋವಿಂದ ಸ್ವಾಮಿ ಭಾಗ್ಯಲಕ್ಷ್ಮಮ್ಮ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಾ ನಾಯಕತ್ವ ಗುಣ ಎಂದರೆ ಇತರರ ಮೇಲೆ ದರ್ಪ ತೋರಿಸುವುದಲ್ಲ, ಎಲ್ಲರ ಅಭಿಪ್ರಾಯಗಳಿಗೆ ಅವಕಾಶಕೊಟ್ಟು ಅದರಲ್ಲಿ ಯೋಗ್ಯವಾದದನ್ನು ವಿಧಾಯಕ ಕಾರ್ಯಗಳಿಗೆ ಅಳವಡಿಸುವುದಾಗಿದೆ. ಉತ್ತಮ ನಾಯಕ ಎನಿಸಿಕೊಳ್ಳಬೇಕಾದಲ್ಲಿ ಉತ್ತಮರೊಂದಿಗೆ ಸ್ನೇಹ ಸಹಾ ಅವಶ್ಯ, ಪಿಯುಸಿ ಅವಧಿಯು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪರ್ವಕಾಲವಾಗಿದೆ, ದೇಶದಲ್ಲಿ ವಾರ್ಷಿಕ ಸುಮಾರು ಒಂದುವರೆ ಕೋಟಿ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆ ಎದುರಿಸುತ್ತಿದ್ದು ಕರ್ನಾಟಕದಲ್ಲಿ 6,98,000 ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆ ಎದುರಿಸುತ್ತಾರೆ.

Dr. H B Manjunath ಪದವಿಯ ನಂತರ ಉದ್ಯೋಗ ಅರಸುವುದಕ್ಕಿಂತ ಉದ್ಯೋಗ ದಾತರಾಗುವುದು ವೈಯುಕ್ತಿಕ ಭವಿಷ್ಯಕ್ಕೂ ರಾಷ್ಟ್ರದ ಭವಿಷ್ಯಕ್ಕೂ ಉತ್ತಮ ಎಂದರು. ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನ ವಜ್ರ ಮಹೋತ್ಸವ ವಿದ್ಯಾಪೀಠ ಹಾಗೂ ಕಾಲೇಜಿನ ಉಪಾಧ್ಯಕ್ಷ ಆರ್ ಎಲ್ ಪ್ರಭಾಕರ್ ರವರ ಅಧ್ಯಕ್ಷತೆಯಲ್ಲಿ ಆಡಳಿತ ಮಂಡಳಿಯ ಕಾಸಲ್ ಎಸ್ ಸತೀಶ್, ಆರ್ ಜಿ ನಾಗೇಂದ್ರ ಪ್ರಸಾದ್, ಜೆ ವಿ ಗೋಪಾಲಕೃಷ್ಣ ಶ್ರೇಷ್ಟಿ, ಡಾ. ಬಿ ಪಿ ಕುಮಾರ್, ಆರ್ ಸಿ ಹಾಲಪ್ಪ ಶೆಟ್ಟಿ, ಪ್ರಾಂಶುಪಾಲ ಎಸ್ ಪ್ರದೀಪ್ ಕುಮಾರ್, ವಿದ್ಯಾರ್ಥಿ ಸಂಘದ ಮುರಳಿಧರ ಹೆಚ್, ನರೇಂದ್ರ ಗೌಡ ಜಿ, ಸಮೀರ್ ಆರ್ ಉಪಸ್ಥಿತಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಗೌರವಿಸಲಾಯಿತು. ಕುವೆಂಪು ಕನ್ನಡ ಭವನದಲ್ಲಿ ಏರ್ಪಾಡಾಗಿದ್ದ ಕಾರ್ಯಕ್ರಮದ ನಿರೂಪಣೆಯನ್ನು ಅಧ್ಯಾಪಕ ವರ್ಗದ ಸಂಗೀತಾ, ಉಷಾ, ಪ್ರಸನ್ನ ರವರು ಮಾಡಿದರೆ ಪ್ರಾರ್ಥನೆಯನ್ನು ಗಗನ ಶ್ರೀ ಹಾಡಿದರು, ವಂದನೆಗಳನ್ನು ಮಂಜುನಾಥ ಸಮರ್ಪಿಸಿದರು. ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...