Tuesday, October 1, 2024
Tuesday, October 1, 2024

Ayanur Manjunath ಬಿಎಸ್ ವೈ ಹೆಸರು ಕೆಡಿಸುತ್ತಿರುವವರೇ ಅವರ ಮಕ್ಕಳು- ಆಯನೂರು ಮಂಜುನಾಥ್

Date:

Ayanur Manjunath ನಾನು ಆಡಿದ ಮಾತಿಗೆ ಕ್ಷಮೆ ಕೇಳುವುದಿಲ್ಲ. ಯಡಿಯೂರಪ್ಪ ವಿರುದ್ಧ ನಾನು ಮಾತಾಡಿಲ್ಲ. ಹೆಸರು ಕೆಡಿಸುತ್ತಿರುವವರೇ ಬಿಎಸ್‌ವೈ ಅವರ ಮಕ್ಕಳು. ನಾನು ಕೆಐಡಿಬಿ ಭೂಮಿ, ಪತ್ರಕರ್ತರ ಸೈಟು, ಟೋಲ್ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜೇಂದ್ರ ಮತ್ತು ರಾಘವೇಂದ್ರ ಅವರ ವಿರುದ್ಧ ಆರೋಪ ಮಾಡಿದ್ದೆ. ಅದನ್ನು ಗಮನಿಸದೆ ಮಾಜಿ ಶಾಸಕರಾದ ಹಾಲಪ್ಪ, ರುದ್ರೇಗೌಡರು ಸುದ್ದಿಗೋಷ್ಠಿ ನಡೆಸಿ ನಾನು ಕ್ಷಮೆ ಕೇಳಬೇಕು ಎಂದು ಹೇಳಿದ್ದಾರೆ.

ನನ್ನ ಪ್ರಶ್ನೆಯನ್ನೇ ಅವರಿಬ ಬರೂ ಅರ್ಥೈಸಿಕೊಳ್ಳದೆ ಕ್ಷಮೆ ಕೇಳಬೇಕು ಎನ್ನುತ್ತಿರುವುದು ದಿಕ್ಕುತಪ್ಪಿಸುವ ಯತ್ನವಾಗಿದೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದ್ದಾರೆ.

ಪ್ರೆಸ್ ಟ್ರಸ್ಟಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಯಾವತ್ತೂ ಯಡಿಯೂರಪ್ಪನವರ ಪರವಾಗಿ ನಿಲುವು ತಾಳದ ಹರತಾಳು ಹಾಲಪ್ಪನವರು ನಾನು ಕ್ಷಮೆ ಕೇಳಬೇಕು ಎಂದಿದ್ದಾರೆ.ಈ ಹಿಂದೆ ಬಿಎಸ್ ವೈ ವಿರುದ್ಧ ವಾಗ್ದಾಳಿ ನಡೆಸಿದಾಗ, ನಾನು ಮತ್ತು ರೇಣುಕಾಚಾರ್ಯ ಬಿಟ್ಟರೆ ಯಾವ ನಾಯಕರು ಮಾತನಾಡಲಿಲ್ಲ. ಆಗ ಹಾಲಪ್ಪ ಎಲ್ಲಿದ್ದರು ಎಂದು ತಿರುಗೇಟು ನೀಡಿದರು.

Ayanur Manjunath ರಾಘವೇಂದ್ರ ಮತ್ತು ವಿಜೇಂದ್ರ ಅವರ ಭ್ರಷ್ಠಾಚಾರದ ಬಗ್ಗೆ ಮಾತನಾಡಿದರೆ ಸಮಂಜಸವಾದ ಉತ್ತರ ನೀಡಲಿಲ್ಲ. ಹಾಲಪ್ಪನ ಬಂಗಾರಪ್ಪನವರನ್ನ ಬಿಟ್ಟು ಬಂದು ಬಂಗಾರಪ್ಪನವರ ಬಗ್ಗೆ ಮಾತನಾಡಿಲ್ಲ ಎಂದು ಹೇಳಿದ್ದಾರೆ. ಸರಿ. ಒಪ್ಪಿಕೊಳ್ಳುವೆ. ಬಂಗಾರಪ್ಪ ಬಗ್ಗೆ ಅವರು ಮಾತನಾಡಿಲ್ಲ. ಆದರೆ ಆಗ ಮಧು ಬಂಗಾರಪ್ಪ ಮತ್ತು ಕುಮಾರ್ ಬಂಗಾರಪ್ಪ ವಿರುದ್ಧ ಮಾತನಾಡಿಲ್ಲವೇ? ಹಾಗೆ ನಾನು ಸಹ ರಾಘವೇಂದ್ರ ಮತ್ತು ವಿಜೇಂದ್ರ ಬಗ್ಗೆ ಮಾತನಾಡಿದ್ದೇನೆಂದು ಸಮರ್ಥಿಸಿಕೊಂಡರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shakahari Film ಶಾಖಾಹಾರಿ ಚಿತ್ರಕ್ಕೆ ಕಾನೂನು ಜಯ

Shakahari Film ಶಿವಮೊಗ್ಗದ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಿಸಿದ್ದ ಶಾಖಾಹಾರಿ...

Mahatma Gandhi ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ, ಫಲಿತಾಂಶ ಪ್ರಕಟ

Mahatma Gandhi ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ...

Yaduveer Wadiyar ಶಿವಮೊಗ್ಗ ಹಬ್ಬ ಯಶಸ್ವಿಗೊಳಿಸಿ- ಸಂಸದ ಯದುವೀರ್

Yaduveer Wadiyar ಪ್ರವಾಸೋದ್ಯಮ ಹಾಗೂ ಜಿಲ್ಲೆಯ ಉದ್ಯಮಿಗಳ ಪ್ರೋತ್ಸಾಹಿಸುವ ದೃಷ್ಟಿಯಿಂದ...

Shivamogga Cycle Club ಸೈಕಲ್ ಅಭ್ಯಾಸವು ಜನಸಾಮಾನ್ಯರ ವ್ಯಾಯಾಮಶಾಲೆ- ಎನ್.ಗೋಪಿನಾಥ್

Shivamogga Cycle Club ಸೈಕಲ್ ಅಭ್ಯಾಸ ಮಾಡುವುದರಿಂದ ಹೃದಯ ಸಂಬಂಧಿ...