Monday, December 15, 2025
Monday, December 15, 2025

Ayanur Manjunath ಬಿಎಸ್ ವೈ ಹೆಸರು ಕೆಡಿಸುತ್ತಿರುವವರೇ ಅವರ ಮಕ್ಕಳು- ಆಯನೂರು ಮಂಜುನಾಥ್

Date:

Ayanur Manjunath ನಾನು ಆಡಿದ ಮಾತಿಗೆ ಕ್ಷಮೆ ಕೇಳುವುದಿಲ್ಲ. ಯಡಿಯೂರಪ್ಪ ವಿರುದ್ಧ ನಾನು ಮಾತಾಡಿಲ್ಲ. ಹೆಸರು ಕೆಡಿಸುತ್ತಿರುವವರೇ ಬಿಎಸ್‌ವೈ ಅವರ ಮಕ್ಕಳು. ನಾನು ಕೆಐಡಿಬಿ ಭೂಮಿ, ಪತ್ರಕರ್ತರ ಸೈಟು, ಟೋಲ್ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜೇಂದ್ರ ಮತ್ತು ರಾಘವೇಂದ್ರ ಅವರ ವಿರುದ್ಧ ಆರೋಪ ಮಾಡಿದ್ದೆ. ಅದನ್ನು ಗಮನಿಸದೆ ಮಾಜಿ ಶಾಸಕರಾದ ಹಾಲಪ್ಪ, ರುದ್ರೇಗೌಡರು ಸುದ್ದಿಗೋಷ್ಠಿ ನಡೆಸಿ ನಾನು ಕ್ಷಮೆ ಕೇಳಬೇಕು ಎಂದು ಹೇಳಿದ್ದಾರೆ.

ನನ್ನ ಪ್ರಶ್ನೆಯನ್ನೇ ಅವರಿಬ ಬರೂ ಅರ್ಥೈಸಿಕೊಳ್ಳದೆ ಕ್ಷಮೆ ಕೇಳಬೇಕು ಎನ್ನುತ್ತಿರುವುದು ದಿಕ್ಕುತಪ್ಪಿಸುವ ಯತ್ನವಾಗಿದೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದ್ದಾರೆ.

ಪ್ರೆಸ್ ಟ್ರಸ್ಟಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಯಾವತ್ತೂ ಯಡಿಯೂರಪ್ಪನವರ ಪರವಾಗಿ ನಿಲುವು ತಾಳದ ಹರತಾಳು ಹಾಲಪ್ಪನವರು ನಾನು ಕ್ಷಮೆ ಕೇಳಬೇಕು ಎಂದಿದ್ದಾರೆ.ಈ ಹಿಂದೆ ಬಿಎಸ್ ವೈ ವಿರುದ್ಧ ವಾಗ್ದಾಳಿ ನಡೆಸಿದಾಗ, ನಾನು ಮತ್ತು ರೇಣುಕಾಚಾರ್ಯ ಬಿಟ್ಟರೆ ಯಾವ ನಾಯಕರು ಮಾತನಾಡಲಿಲ್ಲ. ಆಗ ಹಾಲಪ್ಪ ಎಲ್ಲಿದ್ದರು ಎಂದು ತಿರುಗೇಟು ನೀಡಿದರು.

Ayanur Manjunath ರಾಘವೇಂದ್ರ ಮತ್ತು ವಿಜೇಂದ್ರ ಅವರ ಭ್ರಷ್ಠಾಚಾರದ ಬಗ್ಗೆ ಮಾತನಾಡಿದರೆ ಸಮಂಜಸವಾದ ಉತ್ತರ ನೀಡಲಿಲ್ಲ. ಹಾಲಪ್ಪನ ಬಂಗಾರಪ್ಪನವರನ್ನ ಬಿಟ್ಟು ಬಂದು ಬಂಗಾರಪ್ಪನವರ ಬಗ್ಗೆ ಮಾತನಾಡಿಲ್ಲ ಎಂದು ಹೇಳಿದ್ದಾರೆ. ಸರಿ. ಒಪ್ಪಿಕೊಳ್ಳುವೆ. ಬಂಗಾರಪ್ಪ ಬಗ್ಗೆ ಅವರು ಮಾತನಾಡಿಲ್ಲ. ಆದರೆ ಆಗ ಮಧು ಬಂಗಾರಪ್ಪ ಮತ್ತು ಕುಮಾರ್ ಬಂಗಾರಪ್ಪ ವಿರುದ್ಧ ಮಾತನಾಡಿಲ್ಲವೇ? ಹಾಗೆ ನಾನು ಸಹ ರಾಘವೇಂದ್ರ ಮತ್ತು ವಿಜೇಂದ್ರ ಬಗ್ಗೆ ಮಾತನಾಡಿದ್ದೇನೆಂದು ಸಮರ್ಥಿಸಿಕೊಂಡರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...