Friday, September 27, 2024
Friday, September 27, 2024

Girish Kasaravalli Book ಪ್ರಸ್ತುತ ಸಿನಿಮಾವು ಮಾರುಕಟ್ಟೆ ಸಂಸ್ಕೃತಿಯಲ್ಲಿ ಕಳೆದುಹೋಗಿದೆ- ಗಿರೀಶ್ ಕಾಸರವಳ್ಳಿ

Date:

Girish Kasaravalli Book ವಿದ್ಯಾರ್ಥಿಗಳ ಯೋಚನಾ ಲಹರಿ ತಿಳಿದುಕೊಂಡು ಮಾನವೀಯ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಕೆಲಸ ಆಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.
ಸಿನಿಮೊಗೆ-ಶಿವಮೊಗ್ಗ ಚಿತ್ರ ಸಮಾಜ, ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಶಾಖೆ, ರಾಷ್ಟ್ರೀಯ ಶಿಕ್ಷಣ ಸಮಿತಿ, ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದಿಂದ ಆಯೋಜಿಸಿದ್ದ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರ ಚಿತ್ರಗಳ ಪ್ರದರ್ಶನ, ಸಂವಾದ ಹಾಗೂ ಬಿಂಬ ಬಿಂಬನ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿ, ಮುಂದಿನ ಪೀಳಿಗೆ ಉತ್ತಮ ಚಿಂತನೆಗಳನ್ನು ನೀಡುವ ಅವಶ್ಯಕತೆ ಇದೆ. ಇಲ್ಲವಾದರೆ ಯುವಪೀಳಿಗೆ ಮಾನವೀಯ ಮೌಲ್ಯಗಳನ್ನು ಕಳೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.
ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಮಾತನಾಡಿ, ಸಾಹಿತ್ಯ ಕೃತಿಗಳನ್ನು ಸಿನಿಮಾ ಮಾಡುವ ವೇಳೆಯಲ್ಲಿ ಅನೇಕ ಸವಾಲುಗಳು ಎದುರಾಗುತ್ತವೆ. ಧ್ವನಿ, ಬೆಳಕು, ಶಬ್ಧ ಎಲ್ಲವೂ ಪೂರಕವಾಗಿರಬೇಕು. ಪ್ರೇಕ್ಷಕನಿಗೆ ಅನುಭವವಾದರೆ ಸಿನಿಮಾ ಸಫಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಪ್ರಸ್ತುತ ಸಿನಿಮಾ ಮಾಧ್ಯಮವು ಮಾರುಕಟ್ಟೆ ಸಂಸ್ಕೃತಿಯಲ್ಲಿ ಕಳೆದುಹೋಗಿದೆ. ಮಾರುಕಟ್ಟೆ ಸಂಸ್ಕೃತಿಯಲ್ಲಿ ವ್ಯಾಪಾರದ ದೃಷ್ಟಿಕೋನದಲ್ಲಿ ವಿವಿಧ ಸಂಗತಿಗಳನ್ನು ಬಂಡವಾಳ ಮಾಡಿಕೊಳ್ಳಲಾಗುತ್ತಿದೆ ಎಂದರು.
ಕಲಾತ್ಮಕ ಸಿನಿಮಾಗಳ ಕುರಿತು ಮಾತನಾಡಿ, ಸಿನಿಮಾ ನಿರ್ಮಿಸುವಲ್ಲಿ ಸಮಸ್ಯೆ ಇರುವುದಿಲ್ಲ. ಆದರೆ ಅದನ್ನು ಜನರಿಗೆ ತಲುಪಿಸುವ ವ್ಯವಸ್ಥೆಯಲ್ಲಿ ಸಮಸ್ಯೆ ಇರುತ್ತದೆ. ಮೌಲ್ಯಾಧರಿತ ಶಿಕ್ಷಣ ಎಲ್ಲರಿಗೂ ದೊರೆತಾಗ ಕಲಾತ್ಮಕ ಚಿತ್ರಗಳ ಬಗ್ಗೆಯೂ ಆಲೋಚನೆ ಬೆಳೆಯುತ್ತದೆ ಎಂದು ತಿಳಿಸಿದರು.
Girish Kasaravalli Book ರಂಗಕರ್ಮಿ ಕೆ.ಜೆ.ಕೃಷ್ಣಮೂರ್ತಿ ಮಾತನಾಡಿ, ಗಿರೀಶ್ ಕಾಸರವಳ್ಳಿ ಅವರು ಶ್ರೇಷ್ಠ ನಿರ್ದೇಶಕರಾಗಿದ್ದು, ಮುಖಾಮುಖಿ ಸಂವಾದ ನಡೆಸುವುದು ವಿಶೇಷ ಸಂಗತಿ. ವಿನಯಪೂರ್ವ ವ್ಯಕ್ತಿತ್ವ ಹೊಂದಿದ್ದಾರೆ. ಎಲ್ಲರ ಅಭಿಪ್ರಾಯಗಳಿಗೂ ವಿಶೇಷ ಮನ್ನಣೆ ನೀಡುತ್ತಾರೆ ಎಂದು ಹೇಳಿದರು.
ಪ್ರಮುಖರಾದ ಎಚ್.ಯು.ವೈದ್ಯನಾಥ್, ಗೋಪಾಲಕೃಷ್ಣ ಪೈ, ಕೆ.ಚಿದಾನಂದ್, ಜಿ.ವಿಜಯಕುಮಾರ್, ಹರೀಶ್ ಕಾರ್ಣಿಕ್, ಹುಚ್ಚರಾಯಪ್ಪ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hassan Manikya Prakashana ಶಿವಮೊಗ್ಗದ ಕವಿ ಶಿ.ಜು.ಪಾಶಾ ಅವರಿಗೆ “ಜನ್ನ ಕಾವ್ಯ ಪ್ರಶಸ್ತಿ”

Hassan Manikya Prakashana ಹಾಸನದ ಮಾಣಿಕ್ಯ ಪ್ರಕಾಶನ(ರಿ) ರಾಜ್ಯಮಟ್ಟದ ಜನ್ನ ಕಾವ್ಯ...

Vajreshwari Co Operative Society ಶ್ರೀವಜ್ರೇಶ್ವರಿ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ

Vajreshwari Co Operative Society ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ...

Inner Wheel Shivamogga ದುರ್ಬಲರಿಗೆ ನೆರವು ನೀಡಿದಾಗ ಸೇವೆ ಸಾರ್ಥಕ- ಶಿಲ್ಪ ಗೋಪಿನಾಥ್

Inner Wheel Shivamogga ನಾವು ಮಾಡುವ ಸೇವೆ ಸಾರ್ಥಕಗೊಳ್ಳಬೇಕಾದರೆ...

National Education Committee ಬೆಳಗುತ್ತಿ & ಮಲ್ಲಿಗೇನಹಳ್ಳಿಯಲ್ಲಿ ಗಮನ ಸೆಳೆದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

National Education Committee ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿರಂಗಪ್ರಯೋಗದ...