Monday, February 2, 2026
Monday, February 2, 2026

Sagara Ganapati Festival 2024 ದೇಹದಲ್ಲಿ ಶಕ್ತಿಯಿರುವತನಕ ” ಬೆಂಕಿಯಾಟ ಕಲೆ” ತರಬೇತಿ ಮುಂದುವರೆಸುವೆ- ಎಂ.ಜಿ.ಚಂದ್ರಕಾಂತ್

Date:

Sagara Ganapati Festival 2024 ಸಾಗರ ನಗರದ 8ನೇ ವಾರ್ಡ್ ಶ್ರೀನಗರದಲ್ಲಿ 48ನೇ ವರ್ಷದ ಗಣೇಶ ವಿಸರ್ಜನೆ ಭಾನುವಾರ ಅದ್ದೂರಿಯಾಗಿ ನಡೆಯಿತು …

ಗಮನ ಸೆಳೆದ ಬೆಂಕಿಯಾಟ ಪ್ರದರ್ಶನ
ಹಲವು ವರ್ಷಗಳಿಂದ ಸಾಗರದ ಶ್ರೀನಗರ ಯುವಜನ ಸಂಘ ನಡೆಸಿಕೊಂಡು ಬರುತ್ತಿದ್ದ ಬೆಂಕಿಯಾಟ
ಪ್ರದರ್ಶನವನ್ನು ಶ್ರೀನಗರದಲ್ಲಿ, ಸಾಗರ ನಗರ ಪೊಲೀಸ್ ಸ್ಟೇಷನ್ ವೃತ್ತ, ನಗರದ ಹೃದಯ ಭಾಗ ಸಾಗರ್ ಹೋಟೆಲ್ ಸರ್ಕಲ್ ನಲ್ಲಿ ಸಾರ್ವಜನಿಕರು ಕಣ್ತುಂಬಿ ಕೊಂಡರು ಸಾಗರದ ಇತಿಹಾಸದಲ್ಲಿ ಬೆಂಕಿಯಟ್ಟ ಪ್ರಾರಂಭವಾಗಿದ್ದು ಹೂವಿನ ಗೋಪಾಲಣ್ಣ ಅವರ ಕಾಲದಲ್ಲಿ ಇದು ಮೂಲತಃ ಮಂಗಳೂರಿನಲ್ಲಿ ಪ್ರಾರಂಭವಾಗಿರುವಂತದ್ದು ಪ್ರಥಮವಾಗಿ ಸಾಗರದ ಹಿಂದೂ ಮಹಾಸಭಾ ಗಣಪತಿಯಲ್ಲಿ ಪ್ರದರ್ಶನಗೊಂಡಿತು ನಂತರ ಶ್ರೀನಗರ ಯುವಜನ ಸಂಘಕ್ಕೆ ಹಸ್ತಾಂತರವಾಯಿತು
ಆಧುನಿಕ ಫಿಟ್ನೆಸ್ ಸೆಂಟರ್‍ಗಳ ಭರಾಟೆಯ ನಡುವೆಯೂ, ಪ್ರಾಚೀನ, ಸಾಂಪ್ರದಾಯಿಕ ವ್ಯಾಯಾಮ ಶಾಲೆಗಳು ಇಂದಿಗೂ ತಮ್ಮ ಅಸ್ತಿತ್ವವನ್ನು ಉಳಿಸಿಕೊಂಡಿದೆ. ವ್ಯಾಯಾಮಗಳಿಗೆ, ದೇಹದಾಢ್ರ್ಯ ಪ್ರದರ್ಶನದ ಜೊತೆಗೆ ವ್ಯಾಯಾಮ ಶಾಲೆಗಳು ಆಕರ್ಷಕ ಹಾಗು ಸಾಹಸಮಯ ಪ್ರದರ್ಶನಕ್ಕೂ ಹೆಸರುವಾಸಿಯಾಗಿವೆ ಯಾವುದೇ ಫಲಾಪೇಕ್ಷೆ ಇಲ್ಲದೆ ಈ ಸಾಹಸಮಯ ಪ್ರದರ್ಶನಗಳನ್ನು ತಾಲೀಮು ಪ್ರದರ್ಶನಕಾರರು ನೀಡುತ್ತಾರೆ. ಆದರೂ ತಾಲೀಮು ಪ್ರದರ್ಶನವನ್ನು ದೇಹದಲ್ಲಿ ಶಕ್ತಿ ಇರುವ ತನಕ ಮುಂದುವರಿಸಿಕೊಂಡು ಹೋಗಬೇಕೆಂಬ ಇಚ್ಛೆ ಇದೆ ಎನ್ನುತ್ತಾರೆ ಸಾಗರದ ಎಂ ಜಿ ಚಂದ್ರಕಾಂತ್ ಈಗಲೂ ತರಬೇತಿಯನ್ನು ನೀಡುತ್ತಿದ್ದಾರೆ

Sagara Ganapati Festival 2024 ತಾಲೀಮಿನಲ್ಲಿ ಸುಮಾರು 42 ಪ್ರಕಾರದ ತಾಲೀಮು ಪ್ರದರ್ಶನಗಳಿದ್ದು, ಸಿಂಗಲ್ ಬಾಣ, ಡಬಲ್ ಬಾಣ, ಬಣ್ಣೋಟ್ಟಿಗಳನ್ನು ವಿವಿಧ ದಿಕ್ಕುಗಳಲ್ಲಿ ತಿರುಗಿಸೋದು. ಈ ಬಣ್ಣೋಟ್ಟಿಗಳ ತುದಿಗೆ ಸೀಮೆ ಎಣ್ಣೆಯಿಂದ ಅದ್ದಿದ ಬಟ್ಟೆಯನ್ನು ಕಟ್ಟಿ ಅದಕ್ಕೆ ಬೆಂಕಿ ಹಚ್ಚಿ ಎಲ್ಲಾ ದಿಕ್ಕುಗಳಿಗೆ ಎಂಟು ಬಾರಿ ತಿರುಗಿ, ಮೈ ಕೈಗಳಿಗೆ ಕೊಂಚವೂ ಕೂಡಾ ಬೆಂಕಿಯ ಕೆನ್ನಾಲಿಗೆ ತಾಕದಂತೆ ಬೀಸುವ ಸಾಹಸ ತಾಲೀಮಿನಲ್ಲಿ ಎಲ್ಲರ ಮನಸೆಳೆಯುವ ಒಂದು ಪ್ರಕಾರದ ಪ್ರದರ್ಶನವಾಗಿದೆ.

ಸಾಂಪ್ರದಾಯಿಕ ವ್ಯಾಯಾಮ ಶಾಲೆಗಳ ಸಂಖ್ಯೆ ಕ್ಷೀಣಿಸುತ್ತಿರುವ ನಡುವೆ ತಾಲೀಮು ತಂಡಗಳೂ ಇಂದು ಬೆರಳೆಣಿಕೆಯ ಸಂಖ್ಯೆಗೆ ಬಂದಿದೆ. ಅದನ್ನು ಮುಂದುವರಿಸಿಕೊಂಡು ಹೋಗಬೇಕಾದ ಅಗತ್ಯತೆ ಇಂದಿನ ಯುವ ಜನಾಂಗ ಮಾಡಬೇಕಿದೆ ಎಂದು ಶ್ರೀನಗರ ಯುವಜನ ಸಂಘದ ಉಪಾಧ್ಯಕ್ಷರಾದ ದಯಾನಂದ್ ನಾಯಕ್ ಹೇಳುತ್ತಾರೆ….
ಸೂರಜ್ ನಾಯರ್

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...