Friday, March 20, 2026
Friday, March 20, 2026

Sagara Ganapati Festival 2024 ದೇಹದಲ್ಲಿ ಶಕ್ತಿಯಿರುವತನಕ ” ಬೆಂಕಿಯಾಟ ಕಲೆ” ತರಬೇತಿ ಮುಂದುವರೆಸುವೆ- ಎಂ.ಜಿ.ಚಂದ್ರಕಾಂತ್

Date:

Sagara Ganapati Festival 2024 ಸಾಗರ ನಗರದ 8ನೇ ವಾರ್ಡ್ ಶ್ರೀನಗರದಲ್ಲಿ 48ನೇ ವರ್ಷದ ಗಣೇಶ ವಿಸರ್ಜನೆ ಭಾನುವಾರ ಅದ್ದೂರಿಯಾಗಿ ನಡೆಯಿತು …

ಗಮನ ಸೆಳೆದ ಬೆಂಕಿಯಾಟ ಪ್ರದರ್ಶನ
ಹಲವು ವರ್ಷಗಳಿಂದ ಸಾಗರದ ಶ್ರೀನಗರ ಯುವಜನ ಸಂಘ ನಡೆಸಿಕೊಂಡು ಬರುತ್ತಿದ್ದ ಬೆಂಕಿಯಾಟ
ಪ್ರದರ್ಶನವನ್ನು ಶ್ರೀನಗರದಲ್ಲಿ, ಸಾಗರ ನಗರ ಪೊಲೀಸ್ ಸ್ಟೇಷನ್ ವೃತ್ತ, ನಗರದ ಹೃದಯ ಭಾಗ ಸಾಗರ್ ಹೋಟೆಲ್ ಸರ್ಕಲ್ ನಲ್ಲಿ ಸಾರ್ವಜನಿಕರು ಕಣ್ತುಂಬಿ ಕೊಂಡರು ಸಾಗರದ ಇತಿಹಾಸದಲ್ಲಿ ಬೆಂಕಿಯಟ್ಟ ಪ್ರಾರಂಭವಾಗಿದ್ದು ಹೂವಿನ ಗೋಪಾಲಣ್ಣ ಅವರ ಕಾಲದಲ್ಲಿ ಇದು ಮೂಲತಃ ಮಂಗಳೂರಿನಲ್ಲಿ ಪ್ರಾರಂಭವಾಗಿರುವಂತದ್ದು ಪ್ರಥಮವಾಗಿ ಸಾಗರದ ಹಿಂದೂ ಮಹಾಸಭಾ ಗಣಪತಿಯಲ್ಲಿ ಪ್ರದರ್ಶನಗೊಂಡಿತು ನಂತರ ಶ್ರೀನಗರ ಯುವಜನ ಸಂಘಕ್ಕೆ ಹಸ್ತಾಂತರವಾಯಿತು
ಆಧುನಿಕ ಫಿಟ್ನೆಸ್ ಸೆಂಟರ್‍ಗಳ ಭರಾಟೆಯ ನಡುವೆಯೂ, ಪ್ರಾಚೀನ, ಸಾಂಪ್ರದಾಯಿಕ ವ್ಯಾಯಾಮ ಶಾಲೆಗಳು ಇಂದಿಗೂ ತಮ್ಮ ಅಸ್ತಿತ್ವವನ್ನು ಉಳಿಸಿಕೊಂಡಿದೆ. ವ್ಯಾಯಾಮಗಳಿಗೆ, ದೇಹದಾಢ್ರ್ಯ ಪ್ರದರ್ಶನದ ಜೊತೆಗೆ ವ್ಯಾಯಾಮ ಶಾಲೆಗಳು ಆಕರ್ಷಕ ಹಾಗು ಸಾಹಸಮಯ ಪ್ರದರ್ಶನಕ್ಕೂ ಹೆಸರುವಾಸಿಯಾಗಿವೆ ಯಾವುದೇ ಫಲಾಪೇಕ್ಷೆ ಇಲ್ಲದೆ ಈ ಸಾಹಸಮಯ ಪ್ರದರ್ಶನಗಳನ್ನು ತಾಲೀಮು ಪ್ರದರ್ಶನಕಾರರು ನೀಡುತ್ತಾರೆ. ಆದರೂ ತಾಲೀಮು ಪ್ರದರ್ಶನವನ್ನು ದೇಹದಲ್ಲಿ ಶಕ್ತಿ ಇರುವ ತನಕ ಮುಂದುವರಿಸಿಕೊಂಡು ಹೋಗಬೇಕೆಂಬ ಇಚ್ಛೆ ಇದೆ ಎನ್ನುತ್ತಾರೆ ಸಾಗರದ ಎಂ ಜಿ ಚಂದ್ರಕಾಂತ್ ಈಗಲೂ ತರಬೇತಿಯನ್ನು ನೀಡುತ್ತಿದ್ದಾರೆ

Sagara Ganapati Festival 2024 ತಾಲೀಮಿನಲ್ಲಿ ಸುಮಾರು 42 ಪ್ರಕಾರದ ತಾಲೀಮು ಪ್ರದರ್ಶನಗಳಿದ್ದು, ಸಿಂಗಲ್ ಬಾಣ, ಡಬಲ್ ಬಾಣ, ಬಣ್ಣೋಟ್ಟಿಗಳನ್ನು ವಿವಿಧ ದಿಕ್ಕುಗಳಲ್ಲಿ ತಿರುಗಿಸೋದು. ಈ ಬಣ್ಣೋಟ್ಟಿಗಳ ತುದಿಗೆ ಸೀಮೆ ಎಣ್ಣೆಯಿಂದ ಅದ್ದಿದ ಬಟ್ಟೆಯನ್ನು ಕಟ್ಟಿ ಅದಕ್ಕೆ ಬೆಂಕಿ ಹಚ್ಚಿ ಎಲ್ಲಾ ದಿಕ್ಕುಗಳಿಗೆ ಎಂಟು ಬಾರಿ ತಿರುಗಿ, ಮೈ ಕೈಗಳಿಗೆ ಕೊಂಚವೂ ಕೂಡಾ ಬೆಂಕಿಯ ಕೆನ್ನಾಲಿಗೆ ತಾಕದಂತೆ ಬೀಸುವ ಸಾಹಸ ತಾಲೀಮಿನಲ್ಲಿ ಎಲ್ಲರ ಮನಸೆಳೆಯುವ ಒಂದು ಪ್ರಕಾರದ ಪ್ರದರ್ಶನವಾಗಿದೆ.

ಸಾಂಪ್ರದಾಯಿಕ ವ್ಯಾಯಾಮ ಶಾಲೆಗಳ ಸಂಖ್ಯೆ ಕ್ಷೀಣಿಸುತ್ತಿರುವ ನಡುವೆ ತಾಲೀಮು ತಂಡಗಳೂ ಇಂದು ಬೆರಳೆಣಿಕೆಯ ಸಂಖ್ಯೆಗೆ ಬಂದಿದೆ. ಅದನ್ನು ಮುಂದುವರಿಸಿಕೊಂಡು ಹೋಗಬೇಕಾದ ಅಗತ್ಯತೆ ಇಂದಿನ ಯುವ ಜನಾಂಗ ಮಾಡಬೇಕಿದೆ ಎಂದು ಶ್ರೀನಗರ ಯುವಜನ ಸಂಘದ ಉಪಾಧ್ಯಕ್ಷರಾದ ದಯಾನಂದ್ ನಾಯಕ್ ಹೇಳುತ್ತಾರೆ….
ಸೂರಜ್ ನಾಯರ್

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...