Thursday, March 19, 2026
Thursday, March 19, 2026

International Democracy Day ಡಾ.ಅಂಬೇಡ್ಕರ್ ದೊಡ್ಡ ತತ್ವಜ್ಞಾನಿ.ಅವರಿಲ್ಲದಿದ್ದರೆ ಈ ದೇಶ ಉಳಿಯುತ್ತಿರಲಿಲ್ಲ- ಪ್ರೊ.ಶರತ್ ಅನಂತಮೂರ್ತಿ

Date:

International Democracy Day ಪ್ರಜಾಪ್ರಭುತ್ವ’ ಆದರ್ಶವಾದ ಸಾರ್ವತ್ರಿಕ ಮೌಲ್ಯ – ಪ್ರೊ. ಶರತ್ ಅನಂತಮೂರ್ತಿ
ಮಾನವೀಯ ಮೌಲ್ಯಗಳ ನಿಧಿಯಾದ ಪ್ರಜಾಪ್ರಭುತ್ವ ವ್ಯವಸ್ಥೆ ಮಾನವರೆಲ್ಲರೂ ಒಂದೇ ಎಂಬುದನ್ನು ಸಾರುತ್ತದೆ. ಸರ್ವರೂ ಸಮಾನರು ಎಂಬ ಅರಿವೇ ಪ್ರಜಾಪ್ರಭುತ್ವದ ತಳಹದಿ. ಪ್ರಜಾಪ್ರಭುತ್ವವನ್ನು ವಿಶ್ವಸಂಸ್ಥೆ ಅತ್ಯಂತ ಶ್ರೇಷ್ಠ ಮೌಲ್ಯವೆಂದು ಪರಿಗಣಿಸಿದೆ. ಪ್ರಜಾಪ್ರಭುತ್ವ ಆದರ್ಶವಾದ ಸಾರ್ವತ್ರಿಕ ಮೌಲ್ಯವೆಂದು ಕುಲಪತಿಗಳಾದ ಪ್ರೊ. ಶರತ್ ಅನಂತಮೂರ್ತಿ ಅವರು ಅಭಿಪ್ರಾಯಪಟ್ಟರು. ಅವರು ಕುವೆಂಪು ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದಲ್ಲಿ ಏರ್ಪಡಿಸಿದ್ದ ‘ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂಬೇಡ್ಕರ್ ಬಹುದೊಡ್ಡ ತತ್ವಜ್ಞಾನಿ. ಅವರು ಇಲ್ಲದಿದ್ದರೆ ಈ ದೇಶ ಉಳಿಯುತ್ತಿರಲಿಲ್ಲ. ಅವರಿಂದ ರಚನೆಯಾದ ಸಂವಿಧಾನವೇ ಒಂದು ಕ್ರಾಂತಿಕಾರಕ ದಾಖಲೆ. ಆಧುನಿಕತೆಯನ್ನು ತಂದುಕೊಟ್ಟ ಮಹಾವ್ಯಕ್ತಿ. ಅಂಬೇಡ್ಕರ್ ಅವರ ‘ಜಾತಿವಿನಾಶ’ ಕೃತಿಯನ್ನು ಎಲ್ಲರೂ ಕಡ್ಡಾಯವಾಗಿ ಓದಬೇಕೆಂದು ತಿಳಿಸಿದರು. ತದನಂತರ ಭಾರತ ಸಂವಿಧಾನ ಪ್ರಸ್ತಾವನೆಯನ್ನು ಬೋಧಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದವರಿಗೆಲ್ಲ ನೆನಪಿನ ಕಾಣಿಕೆಯಾಗಿ ‘ಪೆನ್ನು’ಗಳನ್ನು ವಿತರಿಸಿದರು.
International Democracy Day ಶಿಕ್ಷಣ ನಿಕಾಯದ ಡೀನರು, ಶಿಕ್ಷಣ ವಿಭಾಗದ ಮುಖ್ಯಸ್ಥರು ಅದ ಪ್ರೊ. ಜಗನ್ನಾಥ್ ಕೆ. ಡಾಂಗೆ, ಅವರು ಉಪಸ್ಥಿತರಿದ್ದರು. ಡಾ. ಬಿ.ಅರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ. ನೆಲ್ಲಿಕಟ್ಟೆ ಎಸ್. ಸಿದ್ದೇಶ್ ‘ಪ್ರಜಾಪ್ರಭುತ್ವ’ ವ್ಯವಸ್ಥೆ ಬೆಳೆದು ಬಂದ ಬಗೆಯನ್ನು ಪರಿಚಯಿಸಿ, ವಂದಿಸಿದರು. ಪಾಂಡುರವರು ಪ್ರಾರ್ಥಿಸಿದರು. ಸಂದೀಪ್ ಸ್ವಾಗತಿಸಿದರು. ಸಂಪತ್‌ಕುಮಾರ್ ಎಂ. ನಿರೂಪಿಸಿದರು. ಡಾ. ಗೋವಿಂದರಾಜ್, ಡಾ. ಎಂ. ರವಿಕುಮಾರ್, ಡಾ. ಎನ್.ಬಿ. ತಿಪ್ಪೇಸ್ವಾಮಿ, ಡಾ. ಅಶೋಕ್ ಲಮಾಣಿ, ಮೊದಲಾದ ಅಧ್ಯಾಪಕರು, ಅಧ್ಯಾಪಕೇತರ ನೌಕರರು, ಸಂಶೋಧಕರು, ವಿದ್ಯಾರ್ಥಿಗಳು ಭಾಗವಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...