Friday, September 27, 2024
Friday, September 27, 2024

RM Manjunath Gowda ವಾಣಿಜ್ಯ ಬ್ಯಾಂಕುಗಳು ದಿವಾಳಿಯಾಗುವ ಹೊತ್ತಿನಲ್ಲಿ ಸಹಕಾರ ಸಂಘಗಳುದೇಶದ ಆರ್ಥಿಕ ಸ್ಥಿತಿ ಸ್ಥಿಮಿತಕ್ಕೆ ತಂದಿವೆ – ಆರ್.ಎಂ.ಮಂಜುನಾಥಗೌಡ

Date:

RM Manjunath Gowda ಆರ್ಥಿಕವಾಗಿ ಬಲವುಳ್ಳವರು, ಬಡವರಿಗೆ ಸಾಲವನ್ನು ನೀಡುವ ಮೂಲಕ ಆರ್ಥಿಕ ಸವಾರಿಯನ್ನು ಮಾಡುತ್ತಿದ್ದರು. ಇದನ್ನು ತಪ್ಪಿಸುವ ಸಲುವಾಗಿಯೇ ಶತಮಾನಗಳ ಹಿಂದೆ ಉದಯಿಸಿದ ಸಂಘವೇ ಸಹಕಾರಿ ಸಂಘ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಹೇಳಿದರು.
ನಗರದ ಕುವೆಂಪು ರಂಗ ಮಂದಿರದಲ್ಲಿ ಭಗೀರಥ ಸಹಕಾರ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ೧೧೯ವರ್ಷಗಳ ಹಿಂದೆ ಹಾಲುಮತ ಸಮಾಜದ ಮುಖಂಡರೊಬ್ಬರು ಸಹಕಾರ ಸಂಘವನ್ನು ಸ್ಥಾಪಿಸುವ ಮೂಲಕ ಬಡವರಿಗೆ ಹಾಗೂ ಮಧ್ಯಮ ವರ್ಗದವರಿಗೆ ಹಣಕಾಸಿನ ನೆರವಿನ ಹಸ್ತವನ್ನು ಚಾಚಿದರು ಎಂದು ಸಹಕಾರ ಸಂಘದ ಇತಿಹಾಸವನ್ನು ಸ್ಮರಿಸಿದರು.
ವಾಣಿಜ್ಯ ಬ್ಯಾಂಕ್‌ಗಳೇ ದಿವಾಳಿಯಾಗುವ ಈ ಹೊತ್ತಿನಲ್ಲಿ ದೇಶದ ಆರ್ಥಿಕ ಸ್ಥಿತಿಯನ್ನು ಸೀಮಿತದಲ್ಲಿ ಇಟ್ಟುಕೊಳ್ಳಲು ಸಹಕಾರ ಸಂಘಗಳು ಕಾರಣವಾಗಿದೆ. ಅಷ್ಟೇ ಅಲ್ಲದೇ ಬಡವರಿಗೆ ಆರ್ಥಿಕ ಸಹಾಯ ಮಾಡಿ ಅವರ ಜೀವನ ಬದ್ಧತೆಯನ್ನು ಹೆಚ್ಚಿಸುತ್ತಿವೆ ಎಂದರು.
ಕೆಲವು ವರ್ಷಗಳ ಹಿಂದೆ ವಿಶ್ವದಲ್ಲಿ ಆರ್ಥಿಕ ಹಿಂಜರಿಕೆ ಉಂಟಾದ ಸಂದರ್ಭದಲ್ಲಿ ಅನೇಕ ರಾಷ್ಟ್ರಗಳಲ್ಲಿ ಆರ್ಥಿಕ ಸಂಕಷ್ಟ ಉಂಟಾಯಿತು. ಆದರೆ ಭಾರತದಂತಹ ರಾಷ್ಟ್ರದಲ್ಲಿ ಈ ಸಮಸ್ಯೆ ಉಲ್ಬಣಿಸಲಿಲ್ಲ. ಕಾರಣ ಇಲ್ಲಿನ ಸಹಕಾರ ವ್ಯವಸ್ಥೆ ಆರ್ಥಿಕ ಸಂಕಷ್ಟಕ್ಕೆ ಆಸ್ಪದ ನೀಡಲಿಲ್ಲ ಎಂದರು.
ವಾಣಿಜ್ಯ ಬ್ಯಾಂಕ್‌ಗಳು ಬಂಡವಾಳಶಾಹಿಗಳತ್ತ ಮುಖ ಮಾಡುತ್ತಿವೆ. ಆದರೆ ಸಹಕಾರ ಸಂಘಗಳು ಬಡವರತ್ತ ಸಾಗಿವೆ. ಎನ್.ಮಂಜುನಾಥ್ ಅವರು ತಮ್ಮ ಭಗಿರಥ ಪ್ರಯತ್ನದಿಂದ ಸಹಕಾರ ಸಂಘವನ್ನು ಕಟ್ಟಿದ್ದಾರೆ. ಇದಕ್ಕಾಗಿ ಅವರು ಬಹಳ ಕಷ್ಟ ಪಟ್ಟಿದ್ದಾರೆ. ಒಂದು ಸಹಕಾರ ಸಂಘದ ಉದ್ಘಾಟನಾ ಸಮಾರಂಭಕ್ಕೆ ಇಷ್ಟೊಂದು ಜನರು ಭಾಗವಹಿಸುರುವುದು ನನ್ನ ಅನುಭವದಲ್ಲಿ ಇದೇ ಮೊದಲಾಗಿದೆ ಎಂದರು.
ಸಮಾಜದ ಋಣ ತೀರಿಸುವ ಕೆಲಸವನ್ನು ಸಹಕಾರ ಸಂಘ ಸ್ಥಾಪಿಸುವ ಮೂಲಕ ಎನ್.ಮಂಜುನಾಥ್ ಕೈಗೊಂಡಿದ್ದಾರೆ. ೭೦೦ಕ್ಕೂ ಅಧಿಕ ಸದಸ್ಯರನ್ನು ೧೫ ಲಕ್ಷ ಬಂಡವಾಳವನ್ನು ಹೊಂದುವ ಮೂಲಕ ಸಹಕಾರ ಸಂಘ ಸ್ಥಾಪಿಸುವುದು ಪ್ರಸ್ತುತ ದಿನಮಾನಗಳಲ್ಲಿ ಸುಲಭದ ಮಾತಲ್ಲ. ಸಮಾಜದಲ್ಲಿನ ಬಡವರಿಗೆ ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶದಿಂದ ಈ ಸಂಘ ಮುಂದಿನ ದಿನಗಳಲ್ಲಿ ಯಶಸ್ಸಿನ ಹಾದಿಯನ್ನು ತುಳಿಯಲಿ ಎಂದು ಆಶಿಸಿದರು.
ಪ್ರತಿಭಾ ಪುರಸ್ಕಾರ ನೆರವೇರಿಸಿದ ಶಾಸಕ ಡಾ|| ಧನಂಜಯ ಸರ್ಜಿ ಮಾತನಾಡಿ, ಪ್ರತಿಯೊಬ್ಬರು ಜೀವನದಲ್ಲಿ ಮುಂದೆ ಬರಬೇಕಾದರೆ ಹಾಗೂ ಯಶಸ್ಸನ್ನು ಸಾಧಿಸಬೇಕಾದರೆ ಭಗೀರಥ ಪ್ರಯತ್ನ ಮಾಡಲೇಬೇಕು ಎಂದರು.
ಒಂದು ಸಮಾಜ ಮುಂದೆ ಬರಬೇಕಾದರೆ ಅಥವಾ ಉನ್ನತಿಯನ್ನು ಕಾಣಬೇಕಾದರೆ ಆ ಸಮಾಜದಲ್ಲಿ ವಿದ್ಯಾವಂತರು ಹೆಚ್ಚಾಗಬೇಕು. ಇಂದು ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿದ್ದು ಒಳ್ಳೆಯ ಬೆಳವಣಿಗೆ. ಮುಂದಿನ ದಿನಗಳಲ್ಲಿ ಸಮಾಜದ ಮಕ್ಕಳು ಇನ್ನೂ ಹೆಚ್ಚಿನ ಸಾಧನೆಯನ್ನು ಮಾಡಲಿ ಎಂದರು.
RM Manjunath Gowda ಎಲ್ಲರ ಬೆಳವಣಿಗೆಗೆ ಸಹಕಾರ ಸಂಘಗಳು ಅಗತ್ಯವಾಗಿ ಬೇಕು. ಈ ಹಿನ್ನೆಲೆಯಲ್ಲಿ ಎನ್.ಮಂಜುನಾಥ್‌ರವರು ಶ್ರಮಪಟ್ಟು, ಸಹಕಾರ ಸಂಘವನ್ನು ಸ್ಥಾಪನೆ ಮಾಡಿದ್ದಾರೆ. ಅವರ ಶ್ರಮ ಮುಂದಿನ ಪೀಳಿಗೆಗೆ ನಿರಂತರವಾಗಿ ಫಲಕೊಡುವಂತಾಗುತ್ತದೆ ಎಂದು ಹೇಳಿದರು.
ಲೋಗೋ ಬಿಡುಗಡೆ ಮಾಡಿದ ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ ಮಾತನಾಡಿ, ಆರ್ಥಿಕ ಶಕ್ತಿ ನೀಡುವ ಸಂಸ್ಕೃತಿ ಭಾರತೀಯರ ಪ್ರತೀಕ. ಅನಾದಿಕಾಲದಿಂದಲೂ ನಮ್ಮಲ್ಲಿ ಆರ್ಥಿಕ ಸಹಕಾರವನ್ನು ನೀಡುವಂತಹ ಪದ್ದತಿ ಇದೆ. ಅದರ ಮುಂದುವರಿದ ಭಾಗವೇ ಸಹಕಾರ ಸಂಘಗಳು ಎಂದು ಹೇಳಿದರು.
ಪ್ರಸ್ತುತ ಆರಂಭವಾಗಿರುವ ಭಗೀರಥ ಸಹಕಾರ ಸಂಘ ಶಾಶ್ವತವಾಗಿ ಉಳಿಯಲಿ. ಶತಮಾನೋತ್ಸವವನ್ನು ಕಾಣುವ ನಿಟ್ಟಿನಲ್ಲಿ ಸಂಘ ಯಶಸ್ಸಿನ ಹಾದಿಯಲ್ಲಿ ಸಾಗಲಿ ಎಂದು ಹಾರೈಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶ್ರೀಭಗೀರಥ ಸಹಕಾರ ಸಂಘದ ಅಧ್ಯಕ್ಷ ಎನ್.ಮಂಜುನಾಥ್ ಸಂಘಟನೆ ಮಾಡುವುದು ಎಷ್ಟೊಂದು ಕಷ್ಟ ಎಂದು ಅರ್ಥವಾಗುತ್ತಿದೆ. ಸಮಾಜದ ಜನರ ಬಹುದಿನದ ಕನಸಾದ ಈ ಸಂಘ ಇಂದು ನನಸಾಗಿದೆ ಎಂದರು.
ಆರಂಭದಲ್ಲಿ ೪೭೧ ಸದಸ್ಯರನ್ನ ಹೊಂದಿದ್ದ ಸಂಘ ಪ್ರಸ್ತುತ ೭೦೦ಕ್ಕೂ ಹೆಚ್ಚು ಸದಸ್ಯರನ್ನ ಹೊಂದಿ ೧೫ಲಕ್ಷ ಮೂಲ ಬಂಡವಾಳವನ್ನ ಸಂಗ್ರಹಿಸಿದೆ. ೧೨೫೦ ರೂಗಳ ಶೇರನ್ನು ಪಡೆಯುವ ಮೂಲಕ ಸಂಘದ ಸದಸ್ಯತ್ವವನ್ನು ಪಡೆದಿದ್ದಾರೆ ಮುಂದಿನ ಎರಡು ವರ್ಷಗಳಲ್ಲಿ ೫೦೦೦ಕ್ಕೂ ಹೆಚ್ಚು ಸದಸ್ಯರನ್ನ ಮಾಡುವ ಗುರಿ ಹೊಂದಲಾಗಿದೆ ಆರಂಭದ ದಿನಗಳಲ್ಲಿ ೨೫ ಸಾವಿರ ವರೆಗೆ ಜಾಮೀನು ಸಾಲ ಹಾಗೂ ವಾಹನ ಸಾಲವನ್ನು ಕೊಡಲು ಉದ್ದೇಶಿಸಲಾಗಿದೆ ಎಂದು ಹೇಳಿದರು
ಶಿವಮೊಗ್ಗ ಜಿಲ್ಲೆಯಲ್ಲಿ ೪೮ ಹಳ್ಳಿಗಳಿಂದ ಷೇರುದಾರರನ್ನು ಸಹಕಾರ ಸಂಘ ಹೊಂದಿದೆ ಎಂದ ಅವರು, ಅನೇಕ ಕುಟುಂಬಗಳು ಆರ್ಥಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದಿದ್ದು ಈ ಕುಟುಂಬಗಳಿಗೆ ಆರ್ಥಿಕ ಬಲವನ್ನ ತುಂಬುವ ಸಲುವಾಗಿ ಈ ಸಂಘವನ್ನ ಸ್ಥಾಪಿಸಲಾಗಿದೆ ಎಂದರು.
ಸಮಾರಂಭದಲ್ಲಿ ೫೦ವರ್ಷಗಳ ಕಾಲ ವೈವಾಹಿಕ ಜೀವನ ನಡೆಸಿದ ದಂಪತಿಗಳಿಗೆ ಹಾಗೂ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಶೇ.೯೦ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮಾಂತರ ಶಾಸಕಿ ಶಾರದಾಪೂರ‍್ಯನಾಯ್ಕ್, ನಿವೃತ್ತ ನ್ಯಾಯಾಧೀಶ ಬಿಲ್ಲಪ್ಪ, ಜಗನ್ನಾಥ್ ಸಾಗರ್, ಸಂಘದ ಉಪಾಧ್ಯಕ್ಷ ವಸಂತ್ ಹೋಬಳಿದಾರ್, ನಿರ್ದೇಶಕರುಗಳಾದ ಸುಧಾಕರ್, ರವಿ, ಲೋಕೇಶ್, ಹನುಮಂತಪ್ಪ, ವೆಂಕಟೇಶ್, ರಮೇಶ್ , ಶ್ರೀನಿವಾಸ್, ಶಾಂತಮ್ಮ, ಅರ್ಚನ, ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hassan Manikya Prakashana ಶಿವಮೊಗ್ಗದ ಕವಿ ಶಿ.ಜು.ಪಾಶಾ ಅವರಿಗೆ “ಜನ್ನ ಕಾವ್ಯ ಪ್ರಶಸ್ತಿ”

Hassan Manikya Prakashana ಹಾಸನದ ಮಾಣಿಕ್ಯ ಪ್ರಕಾಶನ(ರಿ) ರಾಜ್ಯಮಟ್ಟದ ಜನ್ನ ಕಾವ್ಯ...

Vajreshwari Co Operative Society ಶ್ರೀವಜ್ರೇಶ್ವರಿ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ

Vajreshwari Co Operative Society ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ...

Inner Wheel Shivamogga ದುರ್ಬಲರಿಗೆ ನೆರವು ನೀಡಿದಾಗ ಸೇವೆ ಸಾರ್ಥಕ- ಶಿಲ್ಪ ಗೋಪಿನಾಥ್

Inner Wheel Shivamogga ನಾವು ಮಾಡುವ ಸೇವೆ ಸಾರ್ಥಕಗೊಳ್ಳಬೇಕಾದರೆ...

National Education Committee ಬೆಳಗುತ್ತಿ & ಮಲ್ಲಿಗೇನಹಳ್ಳಿಯಲ್ಲಿ ಗಮನ ಸೆಳೆದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

National Education Committee ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿರಂಗಪ್ರಯೋಗದ...