Friday, September 27, 2024
Friday, September 27, 2024

State karate championship ರಾಜ್ಯಮಟ್ಟದ ಜೂಡೋ ಕರಾಟೆ ಸ್ಪರ್ಧೆಯಲ್ಲಿ ಶಿಕಾರಿಪುರದ ಸರ್ಕಾರಿ ಹಾಸ್ಟೆಲ್ ವಿದ್ಯಾರ್ಥಿಗಳ ಹೆಮ್ಮೆಯ ಸಾಧನೆ

Date:

State karate championship ಇಲ್ಲಿನ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಜೂಡೋ ಕ್ರೀಡಾಕೂಟದಲ್ಲಿ
ಶಿಕಾರಿಪುರದ ಡಾ.ಬಿ ಆರ್ ಅಂಬೇಡ್ಕರ್ ಪರಿಶಿಷ್ಟಜಾತಿ/ಪಂಗಡಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದ ೧೦ ವಿದ್ಯಾರ್ಥಿಗಳು ಚಿನ್ನ ಮತ್ತು ಬೆಳ್ಳಿಪದಕಗಳನ್ನು ಗಳಿಸಿದ್ದಾರೆ. ಕರ್ನಾಟಕದಲ್ಲಿ ಜೂಡೋ ಮತ್ತು ಕರಾಟೆ ತರಭೇತಿ ನೀಡುತ್ತಿರುವ ಮೊಟ್ಟಮೊದಲ ವಿದ್ಯಾರ್ಥಿನಿಲಯ ಇದಾಗಿದ್ದು, ನಿಲಯದ ವಿದ್ಯಾರ್ಥಿಳ ಈ ಸಾಧನೆ ಶಿವಮೊಗ್ಗ ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ಜಿಲ್ಲಾ ಮಟ್ಟದ ಜುಡೋ ಮತ್ತು ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿಲಯದ ೨೦ ವಿದ್ಯಾರ್ಥಿಗಳಲ್ಲಿ ಗೌತಮ್, ಪವನ, ಅಭಿ. ಬೀರೇಶ್, ಪವನ ಕೆ. ಇವರುಗಳು ಪ್ರಥಮ ಬಹುಮಾನ ವಾಗಿ ಚಿನ್ನದ ಪದಕ ಗಳಿಸಿದ್ದರೆ, ಗಗನ್, ಉಲ್ಲಾಸ್, ವಿಘ್ನೇಶ್, ಗಣೇಶ್ ಜಾನುಲಮಾಣಿ ಮತ್ತು ಕಾರ್ತಿಕ್ ಓ. ಅವರುಗಳು ದ್ವೀತಿಯ ಸ್ಥಾನಪಡೆದು ಬೆಳ್ಳಿ ಪದಕಗಳನ್ನು ಗಳಿಸಿದ್ದಾರೆ.
ಚಿನ್ನದ ಪದಕ ವಿಜೇತ ವಿದ್ಯಾರ್ಥಿಗಳು ಇದೇ ತಿಂಗಳ ದಿ:೧೮, ೧೯ ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಜೂಡೋ ಕರಾಟೆ ಕ್ರೀಡಾಕೂಟದಲ್ಲಿ ಭಾಗವಹಿಸಿವರು.
State karate championship ಏಕಲವ್ಯ ಜೂಡೋ ಮತ್ತು ಕರಾಟೆ ತರಭೇತಿ ಸಂಸ್ಥೆಯ ಮಿಥುನ್ ಡಿ.ಬಿ ಇವರ ಸಾರಥ್ಯದಲ್ಲಿ ತರಭೇತಿ ನೀಡಲಾಗಿದ್ದು, ಕೇವಲ ಎರಡು ತಿಂಗಳ ಅವಧಿಯಲ್ಲಿ ನಮ್ಮ ನಿಲಯಾರ್ಥಿಗಳು ಎರಡು ಮೂರು ವರ್ಷಗಳಿಂದ ತರಬೇತಿ ಪಡೆದ ಎದುರಾಳಿಗಳನ್ನು ಮಣಿಸಿ ಅದ್ಭುತ ವಿಜಯ ಸಾಧಿಸಿರುತ್ತಾರೆ.
ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿರುವ ವಾರ್ಡನ್ ನೃಪತುಂಗಾನಾಯ್ಕ್ ಅವರು ಇದಕ್ಕೆ ಪ್ರೋತ್ಸಾಹಿಸಿದ ರಾಜ್ಯ ಸರ್ಕಾರಕ್ಕೆ , ಪೋಷಕರಿಗೆ ,ಮತ್ತು ವಿದ್ಯಾರ್ಥಿನಿಲಯದ ಅಡುಗೆ ಸಿಬ್ಬಂದಿಗಳಿಗೆ ವಿದ್ಯಾರ್ಥಿನಿಲಯ ದ ವಾರ್ಡನ್ ನೃಪತುಂಗಾನಾಯ್ಕ್ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hassan Manikya Prakashana ಶಿವಮೊಗ್ಗದ ಕವಿ ಶಿ.ಜು.ಪಾಶಾ ಅವರಿಗೆ “ಜನ್ನ ಕಾವ್ಯ ಪ್ರಶಸ್ತಿ”

Hassan Manikya Prakashana ಹಾಸನದ ಮಾಣಿಕ್ಯ ಪ್ರಕಾಶನ(ರಿ) ರಾಜ್ಯಮಟ್ಟದ ಜನ್ನ ಕಾವ್ಯ...

Vajreshwari Co Operative Society ಶ್ರೀವಜ್ರೇಶ್ವರಿ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ

Vajreshwari Co Operative Society ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ...

Inner Wheel Shivamogga ದುರ್ಬಲರಿಗೆ ನೆರವು ನೀಡಿದಾಗ ಸೇವೆ ಸಾರ್ಥಕ- ಶಿಲ್ಪ ಗೋಪಿನಾಥ್

Inner Wheel Shivamogga ನಾವು ಮಾಡುವ ಸೇವೆ ಸಾರ್ಥಕಗೊಳ್ಳಬೇಕಾದರೆ...

National Education Committee ಬೆಳಗುತ್ತಿ & ಮಲ್ಲಿಗೇನಹಳ್ಳಿಯಲ್ಲಿ ಗಮನ ಸೆಳೆದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

National Education Committee ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿರಂಗಪ್ರಯೋಗದ...