Monday, December 15, 2025
Monday, December 15, 2025

Pragathi Apple Education ಸೆ.19 ರಂದು ಡಾ.ಸಿ.ಆರ್.ಚಂದ್ರಶೇಖರ್ ಅವರ ” ಓದುವ ಖುಷಿ- ಪರೀಕ್ಷಾ ಸಂಭ್ರಮ” ಪುಸ್ತಕ ಬಿಡುಗಡೆ.

Date:

Pragathi Apple Education 12 ವರ್ಷಕ್ಕೂ ಹೆಚ್ಚು ಕಾಲದಿಂದ ಪಿಯು ವಿಜ್ಞಾನ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿವಮೊಗ್ಗದ ಪ್ರಗತಿ ಆಪಲ್ ಎಜ್ಯುಕೇಷನ್ ವತಿಯಿಂದ ಸೆ.19 ಮತ್ತು 20 ರಂದು ಅಂಬೇಡ್ಕರ್ ಭವನದಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಿರುವ ಉಪನ್ಯಾಸ ಕಾರ್ಯಕ್ರಮ ಮತ್ತು ವಿವಿಧ ನೂತನ ಸ್ಕಾಲರ್‌ಶಿಪ್ ಯೋಜನೆಗಳಿಗೆ ಚಾಲನೆ ಮತ್ತು ಪ್ರಗತಿ ಸ್ಕಾಲರ್ಶಿಪ್ ಸಹಕಾರ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಗತಿ ಆಪಲ್ ಎಜ್ಯುಕೇಷನ್ ಸಂಸ್ಥಾಪಕ ಹಾಗೂ ಅಧ್ಯಕ್ಷ ವಿಜಯಕುಮಾರ್ ಬಳಿಗಾರ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸೆ.19ರಂದು ಬೆಳಿಗ್ಗೆ 10 ಗಂಟೆಗೆ ಹೈಸ್ಕೂಲ್ & ಪಿಯು ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಓದುವ ಖುಷಿ, ಪರೀಕ್ಷಾ ಸಂಭ್ರಮ ಎನ್ನುವ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯ್ತಿ ಸಿಇಒ ಹೇಮಂತ ಎನ್. ಉದ್ಘಾಟಿಸಲಿದ್ದಾರೆ, ಮುಖ್ಯ ಉಪನ್ಯಾಸಕರಾಗಿ ಪದ್ಮಶ್ರೀ ಪುರಸ್ಕೃತ ಡಾ. ಸಿ.ಆರ್. ಚಂದ್ರಶೇಖರ್ ಆಗಮಿಸಲಿದ್ದು, ಶಿಕ್ಷಣ ಕ್ಷೇತ್ರದ ಅನೇಕರು ಭಾಗವಹಿಸಲಿದ್ದಾರೆ ಎಂದರು.

Pragathi Apple Education ಡಾ.ಸಿ.ಆರ್.ಚಂದ್ರಶೇಖರ್ ಅವರು ಬರೆದಿರುವ ಓದುವ ಖುಷಿ,ಪರೀಕ್ಷಾ ಸಂಭ್ರಮ ಪುಸ್ತಕದ ೧೧ನೇ ಆವೃತ್ತಿಯನ್ನು ರಾಮಕೃಷ್ಣ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಶೋಭಾ ವೆಂಕಟರಾಮಣ ಬಿಡುಗಡೆ ಮಾಡುವರು. ಈ ಪುಸ್ತಕವನ್ನು ಮಕ್ಕಳಿಗೆ ಉಚಿತವಾಗಿ ವಿತರಣೆ ಮಾಡಲಾಗುವುದು. ನಂತರ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಮೊದಲಗೋಷ್ಠಿ, ಮಧ್ಯಾಹ್ನ 2:30 ರಿಂದ ಪಿಯು ವಿಜ್ಞಾನ ಕಾಲೇಜುಗಳ ವಿದ್ಯಾರ್ಥಿಗಳಿಗೆ 2ನೇ ಗೋಷ್ಠಿ ನಡೆಯಲಿದೆ. ಸಂಜೆ 5 ಗಂಟೆಗೆ ಪರೀಕ್ಷೆ ಮತ್ತು ಪೋಷಕರ ಜವಾಬ್ದಾರಿ ಕುರಿತು ಡಾ.ಸಿ.ಆರ್.ಚಂದ್ರಶೇಖರ್, ಪರೀಕ್ಷೆ ಮತ್ತು ಆಹಾರ ಕುರಿತು ಮಕ್ಕಳ ತಜ್ಞ ಡಾ.ಸಿ.ಜಿ.ರಾಘವೇಂದ್ರ ವೈಲಾಯ ಉಪನ್ಯಾಸ ನೀಡಲಿದ್ದಾರೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...