Thursday, March 19, 2026
Thursday, March 19, 2026

Pragathi Apple Education ಸೆ.19 ರಂದು ಡಾ.ಸಿ.ಆರ್.ಚಂದ್ರಶೇಖರ್ ಅವರ ” ಓದುವ ಖುಷಿ- ಪರೀಕ್ಷಾ ಸಂಭ್ರಮ” ಪುಸ್ತಕ ಬಿಡುಗಡೆ.

Date:

Pragathi Apple Education 12 ವರ್ಷಕ್ಕೂ ಹೆಚ್ಚು ಕಾಲದಿಂದ ಪಿಯು ವಿಜ್ಞಾನ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿವಮೊಗ್ಗದ ಪ್ರಗತಿ ಆಪಲ್ ಎಜ್ಯುಕೇಷನ್ ವತಿಯಿಂದ ಸೆ.19 ಮತ್ತು 20 ರಂದು ಅಂಬೇಡ್ಕರ್ ಭವನದಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಿರುವ ಉಪನ್ಯಾಸ ಕಾರ್ಯಕ್ರಮ ಮತ್ತು ವಿವಿಧ ನೂತನ ಸ್ಕಾಲರ್‌ಶಿಪ್ ಯೋಜನೆಗಳಿಗೆ ಚಾಲನೆ ಮತ್ತು ಪ್ರಗತಿ ಸ್ಕಾಲರ್ಶಿಪ್ ಸಹಕಾರ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಗತಿ ಆಪಲ್ ಎಜ್ಯುಕೇಷನ್ ಸಂಸ್ಥಾಪಕ ಹಾಗೂ ಅಧ್ಯಕ್ಷ ವಿಜಯಕುಮಾರ್ ಬಳಿಗಾರ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸೆ.19ರಂದು ಬೆಳಿಗ್ಗೆ 10 ಗಂಟೆಗೆ ಹೈಸ್ಕೂಲ್ & ಪಿಯು ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಓದುವ ಖುಷಿ, ಪರೀಕ್ಷಾ ಸಂಭ್ರಮ ಎನ್ನುವ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯ್ತಿ ಸಿಇಒ ಹೇಮಂತ ಎನ್. ಉದ್ಘಾಟಿಸಲಿದ್ದಾರೆ, ಮುಖ್ಯ ಉಪನ್ಯಾಸಕರಾಗಿ ಪದ್ಮಶ್ರೀ ಪುರಸ್ಕೃತ ಡಾ. ಸಿ.ಆರ್. ಚಂದ್ರಶೇಖರ್ ಆಗಮಿಸಲಿದ್ದು, ಶಿಕ್ಷಣ ಕ್ಷೇತ್ರದ ಅನೇಕರು ಭಾಗವಹಿಸಲಿದ್ದಾರೆ ಎಂದರು.

Pragathi Apple Education ಡಾ.ಸಿ.ಆರ್.ಚಂದ್ರಶೇಖರ್ ಅವರು ಬರೆದಿರುವ ಓದುವ ಖುಷಿ,ಪರೀಕ್ಷಾ ಸಂಭ್ರಮ ಪುಸ್ತಕದ ೧೧ನೇ ಆವೃತ್ತಿಯನ್ನು ರಾಮಕೃಷ್ಣ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಶೋಭಾ ವೆಂಕಟರಾಮಣ ಬಿಡುಗಡೆ ಮಾಡುವರು. ಈ ಪುಸ್ತಕವನ್ನು ಮಕ್ಕಳಿಗೆ ಉಚಿತವಾಗಿ ವಿತರಣೆ ಮಾಡಲಾಗುವುದು. ನಂತರ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಮೊದಲಗೋಷ್ಠಿ, ಮಧ್ಯಾಹ್ನ 2:30 ರಿಂದ ಪಿಯು ವಿಜ್ಞಾನ ಕಾಲೇಜುಗಳ ವಿದ್ಯಾರ್ಥಿಗಳಿಗೆ 2ನೇ ಗೋಷ್ಠಿ ನಡೆಯಲಿದೆ. ಸಂಜೆ 5 ಗಂಟೆಗೆ ಪರೀಕ್ಷೆ ಮತ್ತು ಪೋಷಕರ ಜವಾಬ್ದಾರಿ ಕುರಿತು ಡಾ.ಸಿ.ಆರ್.ಚಂದ್ರಶೇಖರ್, ಪರೀಕ್ಷೆ ಮತ್ತು ಆಹಾರ ಕುರಿತು ಮಕ್ಕಳ ತಜ್ಞ ಡಾ.ಸಿ.ಜಿ.ರಾಘವೇಂದ್ರ ವೈಲಾಯ ಉಪನ್ಯಾಸ ನೀಡಲಿದ್ದಾರೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...