Thursday, March 19, 2026
Thursday, March 19, 2026

High Court of Himachal Pradesh ಸರ್ಕಾರಿ ಶಾಲೆಯಲ್ಲೇ ಮಗನ ಮದುವೆ ಮಾಡಿದ ಶಿಕ್ಷಕಿ :ವಿಭಿನ್ನ ಶಿಕ್ಷೆ ನೀಡಿದ ಹಿಮಾಚಲ ಪ್ರದೇಶ ಹೈಕೋರ್ಟ್

Date:

High Court of Himachal Pradesh ಹಿಂದಿನ ದಿನಗಳಲ್ಲಿ ಮನೆ ಮುಂಭಾಗದಲ್ಲೇ ಚಪ್ಪರ ಹಾಕಿ ಮದುವೆ ಸಮಾರಂಭವನ್ನ ನೆರವೇರಿಸುತ್ತಿದ್ದರು. ಕಾಲ ಬದಲಾದಂತೆ ಇತ್ತೀಚಿನ ದಿನಗಳಲ್ಲಿ ಮದುವೆ ಸಮಾರಂಭ ಇನ್ನಿತರ ಕಾರ್ಯಕ್ರಮಗಳನ್ನ ಚೌಟ್ರಿಗಳಲ್ಲಿ ಕಲ್ಯಾಣ ಮಂಟಪಗಳಲ್ಲಿ ನಡೆಸುತ್ತಾರೆ. ಆದರೆ ಇಲ್ಲೊಬ್ಬ ಶಿಕ್ಷಕಿ ತನ್ನ ಮಗನ ಮದುವೆಯನ್ನ ಸರ್ಕಾರಿ ಶಾಲೆ ಆವರಣದಲ್ಲಿ ನೆರವೇರಿಸಿ ಇದೀಗ ಹೈಕೋರ್ಟ್ ನಿಂದ ಶಿಕ್ಷೆಗೆ ಗುರಿಯಾಗಿದ್ದಾರೆ.

ಈ ಘಟನೆ ನಡೆದಿರುವುದು ಹಿಮಾಚಲ ಪ್ರದೇಶದ ಹಮೀಪುರ ಜಿಲ್ಲೆಯ ಸುಲ್ಯಾಂವ್ ಗ್ರಾಮದಲ್ಲಿ. ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ತನ್ನ ಮಗನ ಮದುವೆಯನ್ನು ಆಯೋಜಿಸಿದ ಶಿಕ್ಷಕಿಗೆ ವಿಚಿತ್ರ ಶಿಕ್ಷೆಯನ್ನು ನೀಡುವ ಮೂಲಕ ಹಿಮಾಚಲ ಪ್ರದೇಶ ಹೈಕೋರ್ಟ್ ಗಮನ ಸೆಳೆದಿದೆ.

ಹಿಮಾಚಲ ಪ್ರದೇಶ ಹೈಕೋರ್ಟ್ನ ಅಜಯ ಮೋಹನ್ ಗೋಯಲ್ ಅವರಿದ್ದ ನ್ಯಾಯಪೀಠ ಈ ಪ್ರಕರಣದ ವಿಚಾರಣೆ ನಡೆಸಿದ್ದು, ತಪ್ರೊಪ್ಪಿಕೊಂಡ ಶಿಕ್ಷಕಿಗೆ ನಾಲ್ಕು ವಾರಗಳ ಒಳಗೆ ಶಾಲೆಗೆ ಎರಡು ನೀರಿನ ಶುದ್ದೀಕರಣ ಯಂತ್ರ ಅಳವಡಿಸಲು ಸೂಚಿಸಿದೆ.

ಹಿಮಾಚಲ ಪ್ರದೇಶದ ಹಮೀಪುರ ಜಿಲ್ಲೆಯ ಸುಲ್ಯಾಂವ್ ಗ್ರಾಮದಲ್ಲಿನ ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ತಮ್ಮ ಮಗನ ವಿವಾಹವನ್ನು ಸರ್ಕಾರಿ ಶಾಲೆಯಲ್ಲಿ ಆಯೋಜಿಸಿದ್ದರು. ಈ ಸಮಾರಂಭದಲ್ಲಿ ಮುಖ್ಯ ಶಿಕ್ಷಕಿ ಸಹಿತ ಎಲ್ಲ ಶಿಕಕರು, ಸಿಬ್ಬಂದಿ ಹಾಜರಿದ್ದರು. ಈ ಮದುವೆ ಸಮಾರಂಭದ ಬಗ್ಗೆ ಶಶಿಕಾಂತ್ ಎಂಬವರು ಶಿಕ್ಷಣ ಇಲಾಖೆಗೆ ಇ ಮೇಲ್ ಮೂಲಕ ದೂರು ಸಲ್ಲಿಸಿದ್ದರು.

ಅಲ್ಲದೆ, ಮುಖ್ಯಮಂತ್ರಿ ಸಹಾಯವಾಣಿಗೆ ಕರೆ ಮಾಡಿ ದೂರು ದಾಖಲಿಸಿದ್ದರು.

High Court of Himachal Pradesh ಶಿಕ್ಷಣ ಇಲಾಖೆ ಅಧಿಕಾರಿಗಳು ತಪಾಸಣೆಗಾಗಿ ಶಾಲೆಗೆ ಭೇಟಿ ನೀಡಿದ್ದು, ಮದುವೆ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿತ್ತು. ಆದರೆ, ಅಧಿಕಾರಿಗಳು ಯಾವ ಕ್ರಮವನ್ನೂ ಕೈಗೊಂಡಿರಲಿಲ್ಲ. ಈ ಘಟನೆ ಮತ್ತು ನಡೆಸಿದ ತನಿಖೆಯ ಬಗ್ಗೆ ಆರ್ಟಿಐ ಮೂಲಕ ಮಾಹಿತಿ ಪಡೆದ ಶಶಿಕಾಂತ್ ಹೈಕೋರ್ಟ್ಲ್ಲಿ ಅರ್ಜಿ ಸಲ್ಲಿಸಿ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ಹಿಮಾಚಲ ಹೈಕೋರ್ಟ್, ಶಿಕ್ಷಕಿ ತಪ್ಪೊಪ್ಪಿಕೊಂಡರೂ ಎರಡು ಶುದ್ಧ ನೀರಿನ ಯಂತ್ರವನ್ನು ಅಳವಡಿಸುವಂತೆ ಆದೇಶ ಹೊರಡಿಸಿದೆ. ಆದೇಶವನ್ನು ನಾಲ್ಕು ವಾರಗಳಲ್ಲಿ ಪಾಲಿಸಿ ಹೈಕೋರ್ಟ್ ಕಚೇರಿಗೆ ವರದಿ ನೀಡುವಂತೆ ನಿರ್ದೇಶನ ನೀಡಿ ಅರ್ಜಿಯನ್ನು ಇತ್ಯರ್ಥಗೊಳಿಸಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...