Wednesday, October 2, 2024
Wednesday, October 2, 2024

Youth Empowerment and Sports ದಸರಾ ಹಿನ್ನೆಲೆ ಶಿವಮೊಗ್ಗದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ

Date:

Youth Empowerment and Sports ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ 2024-25 ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.23 ಮತ್ತು 24 ರಂದು ಬೆಳಗ್ಗೆ 9.30ಕ್ಕೆ ನಗರದ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು, ಸೆ. 23 ರಂದು ಬೆಳಗ್ಗೆ 10.00ಕ್ಕೆ ಉದ್ಘಾಟನೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಈ ಕ್ರೀಡಾಕೂಟದಲ್ಲಿ ಅಥ್ಲೇಟಿಕ್ಸ್, ವಾಲಿಬಾಲ್, ಫುಟ್‌ಬಾಲ್, ಖೋಖೋ, ಕಬಡ್ಡಿ, ಬ್ಯಾಸ್ಕೆಟ್‌ಬಾಲ್, ಕುಸ್ತಿ, ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್‌ಬಾಲ್, ಟೇಬಲ್ ಟೆನ್ನಿಸ್, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್, ಯೋಗ ಮತ್ತು ಆಯ್ಕೆಯ ಕ್ರೀಡೆಗಳು ಟೆನ್ನಿಸ್, ನೆಟ್‌ಬಾಲ್, ಈಜು ಕ್ರೀಡೆಗಳನ್ನು ಆಯೋಜಿಸಿದ್ದು, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯುಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವೀತಿಯ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮಸ್ಥಾನ ಪಡೆದವರು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದಿರುತ್ತಾರೆ.

Youth Empowerment and Sports ಅರ್ಹತೆ ಪಡೆದ ಕ್ರೀಡಾಪಟುಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಕ್ರೀಡಾಕೂಟ ನಡೆಯುವ ದಿನಾಂಕದಂದು ಬೆಳಗ್ಗೆ 10.00 ರೊಳಗಾಗಿ ನೆಹರೂ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಂಡು ಹೆಸರನ್ನು ನೋಂದಾಯಿಸಿಕೊಳ್ಳುವುದು. ತಾಲೂಕುಗಳಿಂದ ಭಾಗವಹಿಸುವ ತಾಲೂಕು ವಿಜೇತ ಕ್ರೀಡಾಪಟುಗಳಿಗೆ ಶಿವಮೊಗ್ಗಕ್ಕೆ ಬಂದುಹೋಗುವ ಸಾಮಾನ್ಯ ಪ್ರಯಾಣಭತ್ಯೆ ನೀಡಲಿದ್ದು ಮಧ್ಯಾಹ್ನದ ಉಪಹಾರದ ವ್ಯವಸ್ಥೆ ಕಲ್ಪಿಸಲಾಗಿದೆ, ಕ್ರೀಡಾಪಟುಗಳು ಆಧಾರ್‌ಕಾರ್ಡ್ ಕಡ್ಡಾಯ ತರಬೇಕು. ಯಾವುದೇ ತಂಡ/ಸ್ಪರ್ಧಿ ಸಂಘಟಕರ/ತೀರ್ಪುಗಾರರ ವಿರುದ್ಧ ಪ್ರತಿಭಟನೆ ಮಾಡಿದರೆ ಅಂತಹ ತಂಡ/ಸ್ಪರ್ಧಿಯನ್ನು ಕ್ರೀಡಾಕೂಟದಿಂದ ನಿಷೇಧಿಸಲಾಗುವುದು. ಯಾವುದೇ ತಂಡ ತೀರ್ಪಿನ ಬಗ್ಗೆ ಅಥವಾ ಸ್ಪರ್ಧೆಗೆ ಸಂಬಂಧಿಸಿ ಯಾವುದೇ ವಿಚಾರಗಳಿಗೆ ಮೇಲ್ಮನವಿಯನ್ನು ರೂ.500/- ಶುಲ್ಕದೊಂದಿಗೆ ಕ್ರೀಡಾ ಸಂಘಟನಾ ಸಮಿತಿ ಅಧ್ಯಕ್ಷರಿಗೆ ಸಲ್ಲಿಸಬಹುದಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಮಾಹಿತಿಗಾಗಿ ಇಲಾಖೆಯ ದೂ.ಸಂ.: 08182-223328 ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...