Tuesday, December 16, 2025
Tuesday, December 16, 2025

Karnataka Drama Academy ನಾಡಿನ ಮುಖ್ಯಮಂತ್ರಿಗಳ ಸ್ವಹಸ್ತದಿಂದ ಪ್ರಶಸ್ತಿ ಪಡೆದದ್ದು ನನ್ನ ಜೀವನದ ಅಮೂಲ್ಯ ದಿನ- ರಮೇಶ್ ಬೇಗಾರ್

Date:

Karnataka Drama Academy ಕರ್ನಾಟಕ ನಾಟಕ ಅಕಾಡೆಮಿ ವತಿಯಿಂದ 2022 – 23 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಯನ್ನು ಮಲೆನಾಡ ಪ್ರಸಿದ್ಧ ರಂಗಭೂಮಿ ಮತ್ತು ಚಲನಚಿತ್ರ ನಿರ್ದೇಶಕ ರಮೇಶ್ ಬೇಗಾರ್ ಇವರಿಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನಿಸಿದರು.
ಇತ್ತೀಚಿಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ದಲ್ಲಿ ನಾಟಕ ಅಕಾಡೆಮಿ ಆಯೋಜಿಸಿದ್ದ ವರ್ಣ ರಂಜಿತ ಕಾರ್ಯಕ್ರಮ ದಲ್ಲಿ ರಮೇಶ್ ಪ್ರಶಸ್ತಿ ಪುರಸ್ಕೃತರಾದರು.
Karnataka Drama Academy ಈ ಕಾರ್ಯಕ್ರಮ ದಲ್ಲಿ ಮುಖ್ಯಮಂತ್ರಿಯವರಲ್ಲದೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಮಾಜಿ ಸಚಿವೆ ನಟಿ ಉಮಾಶ್ರೀ ಮತ್ತು ನಾಟಕ ಅಕಾಡೆಮಿ ಅಧ್ಯಕ್ಷ ಕೆ ವಿ ನಾಗರಾಜ್ ಮೂರ್ತಿ ಉಪಸ್ಥಿತರಿದ್ದರು.
ಪ್ರಶಸ್ತಿ ಯು 25 ಸಾವಿರ ನಗದು, ಪ್ರಶಸ್ತಿ ಪತ್ರ ಮತ್ತು ಕಂಚಿನ ನಟರಾಜ ಪ್ರತಿಮೆಯನ್ನು ಒಳಗೊಂಡಿದೆ.
ಈ ಸಂದರ್ಭದಲ್ಲಿ ಮಾಧ್ಯಮ ಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ರಮೇಶ್ ಬೇಗಾರ್ ಪ್ರಶಸ್ತಿ ಯು ನನ್ನೊಂದಿಗೆ 4 ದಶಕ ಗಳಿಂದ ಹೆಜ್ಜೆ ಹಾಕಿದ ಕಲಾವಿದ ಮಿತ್ರ ರ ಕೊಡುಗೆಯಾಗಿದೆ. ಅವರ ಮತ್ತು ಮಲೆನಾಡ ಕಲಾ ಪೋಷಕರ ಅಮೋಘ ಸಹಕಾರದಿಂದ ಪ್ರಶಸ್ತಿ ಲಭಿಸಿದೆ. ನಾಡಿನ ಮುಖ್ಯಮಂತ್ರಿ ಗಳಿಂದಲೇ ಪ್ರಶಸ್ತಿ ಸ್ವೀಕರಿಸಿದ್ದು ಜೀವನದ ಅಮೂಲ್ಯ ದಿನ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...