Tuesday, February 3, 2026
Tuesday, February 3, 2026

Sirsi Police ಎಟಿಎಂ ಕಾರ್ಡ್ ಮೂಲಕ ವಂಚಿಸುತ್ತಿದ್ದ ಶಿರಾಳಕೊಪ್ಪದ ಮಹಿಳೆ ಶಿರಸಿಯಲ್ಲಿ ಬಂಧನ

Date:

Sirsi Police ಶಿರಾಳಕೊಪ್ಪದ ಬಂಕಾಪುರ ಕಾಲೋನಿಯ ಮಹಿಳೆ ಒಬ್ಬಳು ಎಟಿಎಂ ಗ್ರಾಹಕರನ್ನು ವಂಚಿಸಿ ಅವರ ಖಾತೆಯಿಂದ ಹಣ ಎಗರಿಸುತ್ತಿದ್ದ ಘಟನೆಯನ್ನು ಶಿರಸಿ ಪೊಲೀಸರು ಪತ್ತೆ ಮಾಡಿ ಆಕೆಯನ್ನು ಬಂಧಿಸಿದ್ದಾರೆ ಆಕೆಯಿಂದ ಸುಮಾರು ಎರಡು ನೂರು ಎಟಿಎಂ ಕಾರ್ಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಶಿರಸಿ ಸುತ್ತಮುತ್ತ ಕಾರ್ಯಾಚರಣೆ ನಡೆಸುತ್ತಿದ್ದ ಈ ಮಹಿಳೆಯ ಹೆಸರು ಕೌಸರ್ ಬಾನು ಎಂದಾಗಿದ್ದು , ಐವರು ಮಕ್ಕಳೊಂದಿಗೆ ಶಿರಸಿಯಲ್ಲಿ ಬಾಡಿಗೆ ಮನೆ ಮಾಡಿ ವಾಸಿಸುತ್ತಿದ್ದಳು. ಸದಾ ಎಟಿಎಂ ಸುತ್ತಮುತ್ತ ಸುಳಿದಾಡುತ್ತಿದ್ದ ಈಕೆ ಅಲ್ಲಿ ಹಣ ತೆಗೆಯಲು ಬರುವ ಗ್ರಾಮೀಣ ಜನರ ಮತ್ತು ವಯೋವೃದ್ಧರನ್ನು ಗುರಿ ಮಾಡಿಕೊಂಡು ಅವರನ್ನು ಮೋಸಗೊಳಿಸಿ ನಂತರ ಅವರ ಎಟಿಎಂ ಕಾರ್ಡ್ನಿಂದ ಹಣ ತೆಗೆದುಕೊಡುವ ನಾಟಕ ಮಾಡುತ್ತಿದ್ದಳು. ನಿಮ್ಮ ಕಾರ್ಡಿನಿಂದ ಹಣ ಬರುತ್ತಿಲ್ಲ ಎಂದು ನಂಬಿಸುತ್ತಿದ್ದಳು. ಈ ವೇಳೆ ಅವರಿಗೆ ಕಾರ್ಡನ್ನು ಗೊತ್ತಾಗದಂತೆ ಬದಲಿಸುತ್ತಿದ್ದಳು. ಅವರು ಹೋದ ನಂತರ ಅವರ ಕಾರ್ಡಿನಿಂದ ಹಣ ತೆಗೆಯುತ್ತಿದ್ದಳು. ಇದೇ ರೀತಿ ಸುಮಾರು ಜನರು ಹಣ ಕಳೆದುಕೊಂಡ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು.
Sirsi Police ಪೊಲೀಸರು ಬ್ಯಾಂಕುಗಳ ಎಟಿಎಂ ಸುತ್ತಮುತ್ತ ಮಾರು ವೇಷದಲ್ಲಿ ನಿಂತು ಮತ್ತು ಸಿ ಸಿ ಕ್ಯಾಮೆರಾ ಗಳನ್ನು ಪರಿಶೀಲಿಸಿ ಈಕೆಯನ್ನು ಪತ್ತೆ ಮಾಡಿ ಬಂಧಿಸಿದ್ದಾರೆ . ಎಲ್ಲಾ ಘಟನೆಗಳಲ್ಲೂ ಈಕೆ ಒಬ್ಬಳೇ ಭಾಗಿಯಾಗಿರುವುದು ಪೊಲೀಸರಿಗೆ ಕಂಡುಬಂದಿದೆ ಈಕೆಯನ್ನು ಇನ್ನಷ್ಟು ವಿಚಾರಣೆ ನಡೆಸಿ ಬ್ಯಾಗ್ ಪರಿಶೀಲಿಸಿದಾಗ ಸುಮಾರು 2೦೦ರಷ್ಟು ಎಟಿಎಂ ಕಾರ್ಡ್ ಗಳು ಪತ್ತೆಯಾಗಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...