Monday, February 2, 2026
Monday, February 2, 2026

Rotary Shivamogga ರೋಟರಿಯ ವಿವಿಧ ಕಾಳಜಿಗಳಲ್ಲಿ ಪರಿಸರವೂ ಒಂದು- ಸಿ.ಎ.ದೇವಾನಂದ್

Date:

Rotary Shivamogga ರೋಟರಿ ಸಂಸ್ಥೆಯ ಮುಖ್ಯ ಉದ್ದೇಶಗಳಲ್ಲಿ ಪರಿಸರ ಕಾಳಜಿಯೂ ಒಂದು. ಇದರೊಂದಿಗೆ ಸಂಪೂರ್ಣ ಸಹಕಾರದೊಂದಿಗೆ ತೊಡಗಿಸಿಕೊಳ್ಳುವುದಾಗಿ ರೋಟರಿ ಜಿಲ್ಲೆ – 3182 ರ ಗವರ್ನರ್ ರೋ. ಸಿ.ಎ.ದೇವಾನಂದ್ ತಿಳಿಸಿದರು.

ನಗರದ ಗಾಡಿಕೊಪ್ಪ ಪುರದಾಳು ರಸ್ತೆಯಲ್ಲಿರುವ ತುಂಗೆ ಮೇಲ್ದಂಡೆ ಕಾಲುವೆ ಪಕ್ಕದಲ್ಲಿರುವ ರೋಟರಿ ಬಯೋ ಡೈವರ್ಸಿಟಿ ಎರಡನೇ ಹಂತದ ಪಾರ್ಕ್ ಯನ್ನು ಶನಿವಾರÀ ಉದ್ಘಾಟಿಸಿ, ಕಾರ್ಯಕ್ರಮದ ಪೂರ್ವಭಾವಿಯಾಗಿ ಸಸಿ ನೆಡುವುದರ ಮೂಲಕ ಚಾಲನೆ ನೀಡಿ, ಮಾತನಾಡಿದ ಅವರು, ರೋ. ಡಾ. ಪಿ.ನಾರಾಯಣ್ ಅವರು ಈ ಪ್ರಾಜೆಕ್ಟ್‍ನ ಮುಂದುವರಿಸುವ ಬಗ್ಗೆ ಬೇಕಾದ ಎಲ್ಲಾ ವ್ಯವಸ್ಥೆ ಮಾಡುವುದಾಗಿ ರೋಟರಿ ಸಂಸ್ಥೆಗಳ ಪರವಾಗಿ ಭರವಸೆ ನೀಡಿದರು.

ರೋಟರಿ ಶಿವಮೊಗ್ಗ ನಾರ್ಥ್‍ನ ರೋ. ಎಸ್.ಉಮೇಶ್ ಹಾಗೂ ರೋ. ಆನಂದ್ ಮೂರ್ತಿಯವರ ಕೊಡುಗೆಯನ್ನು ಶ್ಲಾಘಿಸಿದರು.

Rotary Shivamogga ಪ್ರಾಸ್ತಾವಿಕ ಮಾತನಾಡಿದ ರೋಟರಿ ಬಯೋಡೈವರ್ಸಿಟಿ ಅಧ್ಯಕ್ಷ ರೋ. ಎ.ಎಸ್.ಚಂದ್ರಶೇಖರ್, ರೋಟರಿ ಅಂತರಾಷ್ಟ್ರೀಯ ನಿಧಿಯಿಂದ 60000 ಅಮೇರಿಕನ್ ಡಾಲರ್ ನಿಧಿ ಮಂಜೂರಾತಿ ಹಾಗೂ ರೋಟರಿ ಕ್ಲಬ್ ಶಿವಮೊಗ್ಗ ಮೊಡೆಸ್ಟಾ ಕ್ಯಾಲಿಫೋರ್ನಿಯ ಇವರ ಸಹಯೋಗ ಪ್ರಾಸ್ತಾಪಿಸಿದರು. ಈ ಯೋಜನೆ ರಟರಿ ಕ್ಲಬ್ ಶಿವಮೊಗ್ಗ ಉತ್ತರ ಇವರ ಸಹಯೋಗದಲ್ಲಿ ಶಿವಮೊಗ್ಗದ ಎಲ್ಲಾ ಇತರ 7 ರೋಟರಿ ಕ್ಲಬ್‍ಗಳ ಸಹಭಾಗಿತ್ವದಲ್ಲಿ ನಡೆಯುತ್ತಿದ್ದು, ಸಹಕಾರ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಲ್ಲಾ ಪ್ರತಿನಿಧಿಗಳು, ರೋಟರಿ ಕಾರ್ಯವನ್ನು ಶ್ಲಾಘಿಸಿ, ಸರ್ಕಾರದ ವತಿಯಿಂದ ಎಲ್ಲಾ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಈ ನಿಟ್ಟಿನಲ್ಲಿ ಸೂಕ್ತ ಸಲಹೆ ಸೂಚನೆಯನ್ನು ನೀಡಿದರು.

ತುಂಗಾ ಮೇಲ್ದಂಡೆ ಯೋಜನೆ ಅಧಿಕಾರಿ ನಟರಾಜ ಪಾಟೀಲ್ ಭಾಗವಹಿಸಿ, ಇಲಾಖೆಯ ಪರವಾಗಿ ಸಹಕಾರ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಎಂ ಎಲ್ ಸಿ ಡಾ. ಧನಂಜಯ ಸರ್ಜಿ, ಡಿ.ಎಸ್.ಅರುಣ್, ಶಾಸಕ ಎಸ್.ಎನ್.ಚನ್ನಬಸಪ್ಪ ಹಾಗೂ ಮಾಜಿ ಎಂ ಎಲ್ ಸಿ, ಉದ್ಯಮಿ ರುದ್ರೇಗೌಡರು, ಮಾಜಿ ಜಿಲ್ಲಾ ಗವರ್ನರ್‍ಗಳಾದ ರೋ. ಜಿ.ಎನ್.ಪ್ರಕಾಶ್ ಹಾಗೂ ರೋ.ಹೆಚ್.ಸಿ.ರವಿ ಉಪಸ್ಥಿತರಿದ್ದರು. ರೋಟರಿ ಅಸಿಸ್ಟೆಂಟ್ ಗವರ್ನರ್ ರೋ. ಎಸ್.ಆರ್.ನಾಗರಾಜ್ ವಂದನಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ ಎಲ್ಲಾ ಕ್ಲಬ್‍ನ ಸದಸ್ಯರೂ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಿದರು. ರೋ.ವಿಜಯಕುಮಾರ್, ರೋ. ರವೀಂದ್ರನಾಥ್ ಐತಾಳ್ ಅವರು ಕಾರ್ಯಕ್ರಮ ಆಯೋಜನೆಯಲ್ಲಿ ಸಹಕರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...