Wednesday, October 2, 2024
Wednesday, October 2, 2024

Samanvaya Trust ಸಮನ್ವಯ ಟ್ರಸ್ಟ್ ನಿಂದ ವೈ.ಎಸ್.ಭುವನೇಶ್ವರಿ ಅವರಿಗೆ ಪರಿಸರ ಕುಟುಂಬ ಪ್ರಶಸ್ತಿ

Date:

Samanvaya Trust ಪರಿಸರದ ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ನಗರದ ಚನ್ನಪ್ಪ ಲೇಔಟ್‌ನ ನಿವಾಸಿ, ಪರಿಸರ ಸ್ನೇಹಿ ಮೆಸ್‌ನ ವೈ.ಎಸ್.ಭುವನೇಶ್ವರಿ ಅವರ ಕುಟುಂಬಕ್ಕೆ ಸಮನ್ವಯ ಟ್ರಸ್ಟ್ ವತಿಯಿಂದ ಪರಿಸರ ಕುಟುಂಬ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಮನ್ವಯ ಟ್ರಸ್ಟ್ ನೇತೃತ್ವದಲ್ಲಿ ಹಾಗೂ ಐಎಎಸ್ ಅಧಿಕಾರಿ ಕೆ.ಎ.ದಯಾನಂದ ಮಾರ್ಗದರ್ಶನದಲ್ಲಿ ಪರಿಸರ ಸ್ನೇಹಿ ಕುಟುಂಬಗಳನ್ನು ಗುರುತಿಸಿ ಪರಿಸರ ಪ್ರಶಸ್ತಿ ನೀಡಿ ಗೌರವಿಸುವ ಕೆಲಸವನ್ನು ಟ್ರಸ್ಟ್ ನಿರಂತರವಾಗಿ ಮಾಡುತ್ತಿದ್ದು, ಈ ಬಾರಿ ಚನ್ನಪ್ಪ ಲೇಔಟ್‌ನ ಭುವನೇಶ್ವರಿ ಅವರ ಕುಟಂಬಕ್ಕೆ ಪ್ರಶಸ್ತಿ ವಿತರಿಸಲಾಯಿತು.
Samanvaya Trust ವೈ.ಎಸ್.ಭುವನೇಶ್ವರಿ ಅವರು ವಿಶೇಷವಾಗಿ ಪರಿಸರದ ಕಾಳಜಿ ಹೊಂದಿದ್ದು, ಪರಿಸರ ಸಂರಕ್ಷಣೆಯ ಕಾಯಕದಲ್ಲಿ ನಿರತರಾಗಿದ್ದಾರೆ. ಪರಿಸರ ದಿನಾಚರಣೆಯಂದು ನೂರಾರು ಸಸಿಗಳನ್ನು ಸಾರ್ವಜನಿಕರಿಗೆ ವಿತರಣೆ ಮಾಡುತ್ತಾರೆ. ಸಮಾಜಮುಖಿ ಸೇವೆಗಳಲ್ಲಿಯೂ ಕೆಲಸ ಮಾಡುತ್ತಿರುವ ಭುವನೇಶ್ವರಿ ಅವರ ಸೇವೆ ಗುರುತಿಸಿ ಸಮನ್ವಯ ಟ್ರಸ್ಟ್ ಪರಿಸರ ಪ್ರಶಸ್ತಿ ನೀಡಿ ಗೌರವಿಸಿದೆ.
ಸಮನ್ವಯ ಟ್ರಸ್ಟ್ ಕಾರ್ಯ ನಿರ್ವಾಹಕ ನಿರ್ದೇಶಕ ಸಮನ್ವಯ ಕಾಶಿ ನೇತೃತ್ವದ ತಂಡವು ಶಿವಮೊಗ್ಗದ ಪರಿಸರ ಸ್ನೇಹಿ ಕುಟುಂಬಗಳನ್ನು ಗುರುತಿಸಿ ಗೌರವಿಸುವ ವಿಶೇಷ ಕಾರ್ಯಕ್ರಮ ನಡೆಸುತ್ತಿದೆ. ಪರಿಸರದ ಕಾಳಜಿಯನ್ನು ಮನೆ ಮನೆಗೆ ತಲುಪಿಸುವ ಆಶಯದಿಂದ ರಾಜ್ಯದಲ್ಲಿಯೇ ನಡೆಸುತ್ತಿರುವ ವಿಶೇಷ ಪ್ರಯತ್ನ ಇದಾಗಿದೆ.
ಉದ್ಯಮಿ ಎಸ್.ಎಂ.ಬಾಲಕೃಷ್ಣ ಅವರು ಪರಿಸರ ಕುಟುಂಬ ಪ್ರಶಸ್ತಿಯನ್ನು ವೈ.ಎಸ್.ಭುವನೇಶ್ವರಿ ಅವರಿಗೆ ನೀಡಿದರು. ಸಮನ್ವಯ ಕಾಶಿ, ಸಮನ್ವಯ ಸಲಹಾ ಸಮಿತಿ ಸದಸ್ಯ ಯತೀಶ್, ಟ್ರಸ್ಟ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...