Saturday, April 26, 2025
Saturday, April 26, 2025

Rotary Club Shivamogga ಹೊಸ ಆಲೋಚನೆಗಳ ಮೂಲಕ ವಿದ್ಯಾರ್ಥಿಗಳಿಂದ ಉತ್ತಮ ದೇಶ ನಿರ್ಮಾಣ ಸಾಧ್ಯ- ಡಾ.ಶುಭಾ ಮರವಂತೆ

Date:

Rotary Club Shivamogga ಸದೃಢ ದೇಶ ನಿರ್ಮಾಣ ಮಾಡುವಲ್ಲಿ ಶಿಕ್ಷಣ ಮಹತ್ತರ ಪಾತ್ರ ವಹಿಸುತ್ತದೆ. ಎಲ್ಲರೂ ಶಿಕ್ಷಣ ಪಡೆಯುವುದು ತುಂಬಾ ಅವಶ್ಯಕ ಎಂದು ಪ್ರಾಧ್ಯಾಪಕಿ ಡಾ. ಶುಭಾ ಮರವಂತೆ ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ನಿಂದ ಮಹರ್ಷಿ ಹಾತಿರಾಮ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನ ಅಕ್ಷರ ಕಾಂಪೋಸಿಟ್ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮೂಲ ಶಿಕ್ಷಣ ಮತ್ತು ಸಾಕ್ಷರತೆ ಕುರಿತು ಮಾತನಾಡಿ, ಶಿಕ್ಷಣ ಪ್ರತಿಯೊಬ್ಬರ ಹಕ್ಕು. ಹೆಣ್ಣು ಮಗುವಿಗೆ ಶಿಕ್ಷಣ ನೀಡುವುದು ಇಡೀ ಕುಟುಂಬಕ್ಕೆ ಶಿಕ್ಷಣ ನೀಡಿದಂತೆ ಎಂದು ತಿಳಿಸಿದರು.

ಶಿಕ್ಷಣ ಪಡೆಯುವುದರಿಂದ ಭವಿಷ್ಯದಲ್ಲಿ ನಿಮ್ಮ ಆಸಕ್ತಿ ಇರುವ ಕ್ಷೇತ್ರದಲ್ಲಿ ಯಶಸ್ಸು ಗಳಿಸಲು ಸಹಕಾರಿಯಾಗುತ್ತದೆ. ಹೊಸ ಹೊಸ ಆಲೋಚನೆಗಳ ಮೂಲಕ ಉತ್ತಮ ದೇಶ ನಿರ್ಮಾಣ ಮಾಡುವಲ್ಲಿ ನಿಮ್ಮ ಕೊಡುಗೆ ನೀಡಬಹುದಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ರೋಟರಿ ಸಂಸ್ಥೆಯು ಮಾಡುತ್ತಿರುವ ಸೇವಾ ಕಾರ್ಯಗಳು ಶ್ಲಾಘನೀಯ ಎಂದರು.

ರೋಟರಿ ಕ್ಲಬ್ ಸೆಂಟ್ರಲ್ ಅಧ್ಯಕ್ಷ ಜಿ.ಕಿರಣ್ ಕುಮಾರ್ ಅವರು ರೋಟರಿ ಸೇವೆಗಳ ಕುರಿತು ಮಾತನಾಡಿ, ರೋಟರಿ ಸಂಸ್ಥೆಯು ಯಾವುದೇ ಫಲಾಪೇಕ್ಷೆಯಿಲ್ಲದೇ ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಶಿಕ್ಷಣ, ಆರೋಗ್ಯ, ಪರಿಸರ ಸಂರಕ್ಷಣೆ ಕಾರ್ಯದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನ ಮಾಡುತ್ತಿದೆ ಎಂದು ತಿಳಿಸಿದರು.

Rotary Club Shivamogga ಕಾಲೇಜಿನ ಪ್ರಾಚಾರ್ಯ ಪ್ರೊ. ಎಚ್.ಟಿ. ಗಿರೀಶ್ ಮಾತನಾಡಿ, ರೋಟರಿ ಸೇವಾ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ 150 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸಂಸ್ಥೆಯ ಕಾರ್ಯದರ್ಶಿ, ಮಾಜಿ ಶಾಸಕ ಅಶೋಕ್ ನಾಯಕ್, ರೋಟರಿ ಕ್ಲಬ್ ಸೆಂಟ್ರಲ್ ಕಾರ್ಯದರ್ಶಿ ಬಿ.ವಿ.ಈಶ್ವರ್, ರವಿ ಕೋಟೋಜಿ, ಧರ್ಮೇಂದ್ರ ಸಿಂಗ್, ಜೆ.ಪಿ.ಚಂದ್ರು, ಕಾರ್ಯಕ್ರಮ ಸಂಯೋಜಕರಾದ ಬಸವರಾಜ್, ರಾಜಶ್ರೀ ಬಸವರಾಜ್, ದೀಪಾ ಜಯಶೀಲ ಶೆಟ್ಟಿ, ಅನ್ಸ್ ಕ್ಲಬ್ಬಿನ ಅಧ್ಯಕ್ಷೆ ಗೀತಾ ಜಗದೀಶ್, ಕಾರ್ಯದರ್ಶಿ ಶುಭಾ ಚಿದಾನಂದ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM siddharamaih ಪಹಲ್ಗಾಮ್ ದುರ್ಘಟನೆ‌ ಗುಪ್ತಚರ ವ್ಯವಸ್ಥೆಯ ವೈಫಲ್ಯ- ಮುಖ್ಯಮಂತ್ರಿ ಸಿದ್ಧರಾಮಯ್ಯ

CM siddharamaih ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ...

Dr. Rajkumar ಡಾ.ರಾಜ್ ಅವರಿಗಿದ್ದಷ್ಟು ಅಭಿಮಾನಿಗಳು ಬೇರೆ ಯಾವ ನಟರಿಗೂ ಇಲ್ಲ: ವಿ.ಮೂರ್ತಿ

Dr. Rajkumar ವರನಟ ನಟಸಾರ್ವಭೌಮ ಕನ್ನಡದ ಮೇರು ನಟ ಡಾಕ್ಟರ್ ರಾಜಕುಮಾರ್...

Acharya Tulsi National College of Commerce ರಕ್ತದಾನಿಗಳು ಸಮಾಜದ ನೈಜ ಹೀರೋಗಳು- ಡಾ.ಪಿ.ನಾರಾಯಣ್

Acharya Tulsi National College of Commerce ಎಲ್ಲಾ ದಾನಗಳಿಗಿಂತ ರಕ್ತದಾನ...