Wednesday, August 12, 2026
Wednesday, August 12, 2026

ದಾವಣಗೆರೆಯಲ್ಲಿ ಕಾಲೇಜಿಗೆ ನುಗ್ಗಿದ “ಭುಸ್ ನಾಗಪ್ಪ”

Date:

ನಾಗರಹಾವೊಂದು ಕಾಲೇಜಿನ ಅಡುಗೆ ಮನೆಯಲ್ಲಿನ ಪಾತ್ರೆಯಲ್ಲಿ ಅವಿತು ಕೂತಿದ್ದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಹೊರವಲಯದ ಬಾಡಾ ಕ್ರಾಸ್ ಬಳಿಯ ಜೈನ್ ಕಾಲೇಜಿನಲ್ಲಿ ಹಾವು ಕಂಡುಬಂದಿದೆ.

ನಾಗರಹಾವನ್ನು ಕಂಡ ವಿದ್ಯಾರ್ಥಿಗಳು ಆತಂಕದಿಂದ ಹೊರಗೆ ಓಡಿ ಬಂದಿದ್ದರು. ಪಾತ್ರೆಯಲ್ಲಿ ಕೂತಿದ್ದ ಹಾವನ್ನು ನೋಡಿದ ಅಡುಗೆ ಸಿಬ್ಬಂದಿಯೂ ಕೂಡ ಕೆಲಕಾಲ ಭಯಭೀತರಾಗಿದ್ದರು.

ಬಳಿಕ ಕಾಲೇಜಿನ ಸಿಬ್ಬಂದಿ ಸ್ನೇಕ್ ಬಸವರಾಜ್ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಸ್ನೇಕ್ ಬಸವರಾಜ್ ಹಾವನ್ನು ಸೆರೆಹಿಡಿದು ರಕ್ಷಿಸಿದ್ದಾರೆ. ನಾಲ್ಕು ಅಡಿ ಉದ್ದದ ನಾಗರಹಾವು ಇದಾಗಿದೆ. ಹಾವನ್ನು ಬಸವರಾಜ್ ರಕ್ಷಣೆ ಮಾಡಿದ ಬಳಿಕ ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ನಿಟ್ಟುಸಿರು ಬಿಟ್ಟರು.

ದಾವಣಗೆರೆ ನಗರದ ಆರ್ಟಿಓ ಕಚೇರಿ ಬಳಿಯ ಮಲ್ಲೇಶಪ್ಪ ಎಂಬವರ ಮನೆಯಲ್ಲಿ ಕೂಡ ನಾಗರಹಾವು ಬೀಡುಬಿಟ್ಟಿತ್ತು. ಇಟ್ಟಿಗೆಗಳಲ್ಲಿ ಅವಿತುಕೊಂಡಿದ್ದ ನಾಗಪ್ಪನನ್ನು ಸ್ನೇಕ್ ಬಸವರಾಜ್ ಅವರೇ ರಕ್ಷಣೆ ಮಾಡಿದ್ದಾರೆ. ಒಂದೇ ದಿನ ಎರಡು ಹಾವುಗಳನ್ನು ರಕ್ಷಣೆ ಮಾಡುವಲ್ಲಿ ಬಸವರಾಜ್ ಯಶಸ್ವಿಯಾಗಿದ್ದಾರೆ.

ಹಾವುಗಳನ್ನು ಆನಗೋಡು ಕಾಡಿಗೆ ಬಿಡುವುದಾಗಿ ಬಸವರಾಜ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...