Sunday, March 29, 2026
Sunday, March 29, 2026

Madhu Bangarappa ಮೃತ ಚಂದ್ರಶೇಖರ್ ಕುಟುಂಬಕ್ಕೆ ₹ 25 ಲಕ್ಷ ಸಹಾಯ ಧನ ನೀಡಿಕೆ- ಮಧು ಬಂಗಾರಪ್ಪ

Date:

Madhu Bangarappa ಇತ್ತೀಚೆಗೆ ಆತ್ಮಹತ್ಯೆಗೆ ಶರಣಾಗಿದ್ದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಶಿವಮೊಗ್ಗ ನಿವಾಸಿ ದಿವಂಗತ ಚಂದ್ರಶೇಖರನ್ ಅವರ ಕುಟುಂಬಕ್ಕೆ ಮುಖ್ಯಮಮತ್ರಿ ಸಿದ್ದರಾಮಯ್ಯ 25 ಲಕ್ಷ ರೂಪಾಯಿಗಳ ಸಹಾಯಧನವನ್ನು ನೀಡಿದ್ದಾರೆ.

ಚಂದ್ರಶೇಖರ್ ಆತ್ಮಹತ್ಯೆ ನಂತರ ಅವರ ನಿವಾಸಕ್ಕೆ ತೆರಳಿದ್ದ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ವೈಯಕ್ತಿಕವಾಗಿ ಹಾಗೂ ಸರ್ಕಾರದಿಂದ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಭರವಸೆ ನೀಡಿದ್ದರು.

ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ಮನವಿ ಮಾಡಿದ್ದೆನು. ಮನವಿಗೆ ಸ್ಪಂದಿಸಿದ ಸಿದ್ದರಾಮಯ್ಯ ಚೆಕ್ ಹಸ್ತಾಂತರಿಸಿದರು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ದೌರ್ಜನ್ಯ ನಿಷೇಧ ಕಾಯ್ದೆಯಡಿ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿರುವ ಹಿನ್ನಲೆಯಲ್ಲಿ ೮.೨೫ ಲಕ್ಷ ರೂಗಳನ್ನು ದಿವಂಗತ ಚಂದ್ರಶೇಖರನ್‌ರ ಪತ್ನಿ ಕವಿತಾ ಅವರಿಗೆ ಈಗಾಗಲೇ ಮಂಜೂರು ಮಾಡಿದ್ದಾರೆ.

Madhu Bangarappa ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಅಭಿವೃದ್ಧಿ ನಿಗಮದಿಂದ ಪಾವತಿಸಬೇಕಾದ ಸಂಬಳ ಮತ್ತು ರಜೆಗೆ ಸಂಬಂಧಿಸಿದಂತೆ ೧,೪೧,೩೬೧ ರೂಗಳನ್ನು ಕವಿತಾ ಅವರ ಬ್ಯಾಂಕ್ ಖಾತೆಗೆ ಪಾವತಿಸಲಾಗಿದೆ.
ಮೃತರ ಮಗನಿಗೆ ಉದ್ಯೋಗ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದು, ಈ ಕುರಿತು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆಂದು ಸಚಿವರು ತಿಳಿಸಿದ್ದಾರೆ.

ಈ ವೇಳೆ ಬೋವಿ ಪೀಠದ ಜಗದ್ಗುರು ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್, ಶಾಸಕ ಚನ್ನಬಸಪ್ಪ (ಚನ್ನಿ) ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote SeethaRamanjaneya Temple ವೈಭವದಿಂದ ನಡೆದ ಶ್ರೀಆಂಜನೇಯಸ್ವಾಮಿ ರಥೋತ್ಸವ

Kote SeethaRamanjaneya Temple ಪುರಾತನವಾದ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಪ್ರತಿವರ್ಷದಂತೆ...

Department of Kannada and Culture ಶ್ರೀಅಗ್ನಿಬನ್ನಿರಾಯಸ್ವಾಮಿಯವರ ಇತಿಹಾಸವನ್ನ ನಾವೆಲ್ಲಾ ತಿಳಿದುಕೊಳ್ಳಬೇಕು- ಆನಂದ್.

Department of Kannada and Culture ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು...

Rotary Club Shimoga ಚಿನ್ನ,ಬೆಳ್ಳಿ ಧಾರಣೆ ವ್ಯತ್ಯಾಸಕ್ಕೆ ಜಾಗತಿಕ ಸಮಸ್ಯೆಗಳೇ ಕಾರಣ- ಸೆಂಥಿಲ್ ವೆಲನ್.

Rotary Club Shimoga ಚಿನ್ನ ಮತ್ತು ಬೆಳ್ಳಿ ಕಷ್ಟಕಾಲದಲ್ಲಿ ಅಪತ್ಬಾಂದವ ರೀತಿಯಲ್ಲಿ ವರ್ತಿಸುತ್ತದೆ....

S. N. Channabasappa ಮಾದಕ ದ್ಯವ್ಯ ವ್ಯಸನ ವಿರೋಧಿ ಕ್ರಮಗಳಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಿ- ಎಸ್.ಎನ್.ಚನ್ನಬಸಪ್ಪ.

S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ...