Thursday, February 5, 2026
Thursday, February 5, 2026

Karki movie “ಕರ್ಕಿ” ಸಿನಿಮಾ ಕ್ಲಾಸ್ & ಮಾಸ್ ಪ್ರೇಕ್ಷಕರನ್ನ ಸೆಳೆದಿದೆ- ಪಳನಿ

Date:

Karki movie ಥರ್ಡ್ ಐ ಮೀಡಿಯಾ ಬ್ಯಾನರಿನಲ್ಲಿ ನಿರ್ಮಿಸಿರುವ ಕರ್ಕಿ ಚಲನಚಿತ್ರ ಸೆ. 20ರಂದು ಬಿಡುಗಡೆಯಾಗಿದು ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ ಎಂದು ನಿರ್ಮಾಪಕ ಪ್ರಕಾಶಕ ಪಳನಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಿನಿಮಾ ಸುಮಾರು 60 ಕೇಂದ್ರಗಳಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಕ್ಲಾಸ್ ಮತ್ತು ಮಾಸ್ ಎರಡೂ ಥರದ ಆಡಿಯನ್ಸಗಳನ್ನು ಸೆಳೆದಿದೆ.

ಸಿನಿಮಾ ತುಂಬಿದ ಪ್ರದರ್ಶನ ಕಾಣುತ್ತಿದ್ದು, ನಿಧಾನವಾಗಿ ಸಿನಿಮಾ ನೋಡಲು ಚಿತ್ರಮಂದಿರಗಳತ್ತ ಧಾವಿಸುತ್ತಿರುವ ಪ್ರೇಕ್ಷಕರ ಸಂಖ್ಯೆಯಲ್ಲೂ ಗಣನೀಯವಾಗಿ ಹೆಚ್ಚಿದೆ ಎಂದರು.

Karki movie ಸಿನಿಮಾಕ್ಕೆ ತಮಿಳಿನ ಖ್ಯಾತ ನಿರ್ದೇಶಕ ಪವಿತ್ರನ್ ಆಕ್ಷನ್ ಕಟ್ ಹೇಳಿದ್ದಾರೆ. ತಮಿಳಿನ ‘ಪರಿಯೂರಮ್ ಪೆರುಮಾಳ್’ ಸಿನಿಮಾದ ರಿಮೇಕ್ ಆಗಿರುವ ಕನ್ನಡದ ‘ಕರ್ಕಿ’ ಸಿನಿಮಾಕ್ಕೆ ತಮಿಳಿನ ನಿರ್ದೇಶಕ ಪವಿತ್ರನ್ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಮೂಲ ಸಿನಿಮಾ ತಮಿಳಿನಾದರೂ ‘ಕರ್ಕಿ’ ಸಿನಿಮಾವನ್ನು ಕನ್ನಡದ ಪರಿಸರಕ್ಕೆ ತಕ್ಕಂತೆ ಚಿತ್ರಿಸಿ ತೆರೆಮೇಲೆ ತಂದಿರುವುದು ಈ ಸಿನಿಮಾದ ವಿಶೇಷ ಎಂದರು.

‘ಕರ್ಕಿ ಸಿನೆಮಾದಲ್ಲಿ
ನಾಯಕ ನಟ ಜಯಪಕಾಶ್ (ಜೆ. ಪಿ) ರೆಡ್ಡಿ ಅವರಿಗೆ ಮಲೆಯಾಳಿ ಬೆಡಗಿ ಮೀನಾಕ್ಷಿ ನಾಯಕಿಯಾಗಿ ಜೋಡಿಯಾಗಿದ್ದಾರೆ. ಉಳಿದಂತೆ ಸಾಧುಕೋಕಿಲ, ಬಲರಾಜವಾಡಿ, ಯತಿರಾಜ್, ಮಿಮಿಕ್ರಿ ಗೋಪಿ, ಸ್ವಾತಿ, ಸವಿತಾ, ವಾಲೆ ಮಂಜು, ಜೋಸೈಮನ್ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ ಎಂದರು.

ಬಾಲನಟನಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದ, ಈಗಾಗಲೇ ‘ವಾಟ್ಸಪ್, ಲವ್, ‘ರಾಜರಾಣಿ’ ಸೇರಿದಂತೆ ಕೆಲ ಸಿನೆಮಾಗಳಲ್ಲಿ ನಾಯಕ ನಟನಾಗಿ ಅಭಿನಯಿಸಿದ ಜಯಪ್ರಕಾಶ್(ಜೆ.ಪಿ)ರೆಡ್ಡಿ, ‘ಕರ್ಕಿ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ಈ ಸಿನೆಮಾದಲ್ಲಿ ಕಾನೂನು ಪದವಿಧರನಾಗಬೇಕು ಎಂಬ ಕನಸು ಇಟ್ಟುಕೊಂಡ ಹಳ್ಳಿ ಹುಡುಗನ ಪಾತ್ರದಲ್ಲಿ ಜೆ. ಪಿ ಅಭಿನಯಿಸಿದ್ದಾರೆ ಎಂದರು
ಹೃಷಿಕೇಶ ಛಾಯಾಗ್ರಹಣ, ಶ್ರೀ, ಕ್ರೇಜಿ ಮೈಂಡ್ಸ್ ಸಂಕಲನವಿದೆ. ಸಿನಿಮಾದ ಆರು ಹಾಡುಗಳಿಗೆ ಕವಿರಾಜ್ ಸಾಹಿತ್ಯವಿದ್ದು, ಅರ್ಜುನ. ಜನ್ಯ ಸಂಗೀತ ಸಂಯೋಜಿಸಿದ್ದಾರೆ ಎಂದರು.

ಶಿವಮೊಗ್ಗ, ದಾವಣಗೆರೆ, ಬಂಗಾರಪೇಟೆ, ಕೋಲಾರ, ಬಾಗಲಕೋಟೆ ಸುತ್ತಮುತ್ತ ‘ಕರ್ಕಿ’ ಸಿನೆಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ ಎಂದು ವಿವರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...