Friday, September 27, 2024
Friday, September 27, 2024

Inner Wheel Shivamogga ದುರ್ಬಲರಿಗೆ ನೆರವು ನೀಡಿದಾಗ ಸೇವೆ ಸಾರ್ಥಕ- ಶಿಲ್ಪ ಗೋಪಿನಾಥ್

Date:

Inner Wheel Shivamogga ನಾವು ಮಾಡುವ ಸೇವೆ ಸಾರ್ಥಕಗೊಳ್ಳಬೇಕಾದರೆ ಅಗತ್ಯವಿರುವಲ್ಲಿ ಮಾತ್ರ ಸೇವೆ ಮಾಡಬೇಕು ದುರ್ಬಲರಿಗೆ ಸಹಾಯ ಹಸ್ತ ನೀಡಿದಾಗ ತೃಪ್ತಿ ಸಿಗುತ್ತದೆ ಎಂದು ಇನ್ನರ್ ವೀಲ್ ಸಂಸ್ಥೆಯ ಸದಸ್ಯರು ಹಾಗೂ ಸ್ವೇದ ಸಂಸ್ಥೆ ಯ ಕಾರ್ಯದರ್ಶಿ ಶಿಲ್ಪ ಗೋಪಿನಾಥ್ ಅಭಿಮತ ವ್ಯಕ್ತಪಡಿಸಿದರು.

ಇನ್ನರ್ ವೀಲ್ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಎರಡು ಕಾಲು ಅಂಗವಿಕಲತೆಯಿಂದ ಬಳಲುತ್ತಿರುವ ಗಾಡಿ ಕೊಪ್ಪದ ಅಜಯ್ ಹಿರೇಮಠ ಅವರಿಗೆ ಸುವ್ಯವಸ್ಥಿತವಾದ ವೀಲ್ ಚೇರನ್ನು ಶಿಲ್ಪ ಗೋಪಿನಾಥ್ ವೇದ ನಾಗರಾಜ್ ಇವರ ಸಹಕಾರದಿಂದ 15000 ಬೆಲೆ ಬಾಳುವ ವೀಲ್ ಚೇರ್ ಹಾಗೂ ಅಗತ್ಯ ವಸ್ತುಗಳನ್ನು ನೀಡಿ ಅವರ ಜೀವನ ಉತ್ತಮವಾಗಲಿ ಎಂದು ಹಾರೈಸಿದರು. ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ ವಿಜಯಕುಮಾರ್ ಅವರು ಮಾತನಾಡುತ್ತಾ ಶಿವಮೊಗ್ಗ ಪೂರ್ವ ಇನ್ನರ್ವಿಲ್ ಸಮಸ್ತೆ ಈಗಾಗಲೇ ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ವರಿಗೆ ಧನಸಹಾಯ ಮತ್ತು ಆರೋಗ್ಯದತ್ತ ಹೆಚ್ಚು ಗಮನ ಹರಿಸಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಔಷಧಿ ವಿತರಣೆ ಹಾಗೂ ಬಡ ಮಕ್ಕಳಿಗೆ ನೋಟ್ ಪುಸ್ತಕ ಬ್ಯಾಗ್ ಗಳನ್ನು ವಿತರಿಸುವುದರ ಮುಖಾಂತರ ಸಾಧಕರನ ಗುರುತಿಸಿ ಗೌರವಿಸುತ್ತಾ ಬಂದಿದ್ದಾರೆ ಜಿಲ್ಲೆಯಲ್ಲಿ ಒಂದು ಮಾದರಿ ಸಂಸ್ಥೆಯಾಗಿ ಹೊರಹೊಮ್ಮಿದೆ ಎಂದು ಅಭಿನಂದಿಸಿದರು.

Inner Wheel Shivamogga ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇನ್ನರ್ ವೀಲ್ ಶಿವಮೊಗ್ಗ ಸಂಸ್ಥೆಯ ಅಧ್ಯಕ್ಷರಾದ ವಾಗ್ದೇವಿ ಬಸವರಾಜ್ ಅವರು ವಹಿಸಿ. ಸ್ನೇಹ ಪ್ರೀತಿ ಸೇವೆಗಾಗಿ ಇನ್ನರ್ವಿಲ್ ಸಂಸ್ಥೆ ಇವತ್ತು ಪ್ರಪಂಚಾದ್ಯಂತ ತನ್ನ ಸೇವೆಗಳ ಮುಖಾಂತರ ಮನುಕುಲವನ್ನು ತಲುಪಿದೆ ಈ ನಿಟ್ಟಿನಲ್ಲಿ ಈಗಾಗಲೇ ಶಾಲಾ ಕಾಲೇಜುಗಳಿಗೆ ಬೆಂಚು ಡೆಸ್ಕ್ ಗಳನ್ನು ನೀಡಿ ಶಿಕ್ಷಣಕ್ಕೆ ಉತ್ತೇಜನ ಕೊಟ್ಟಿದ್ದೇವೆ. ಹಾಗೂ ಮಹಿಳೆಯರ ಆರೋಗ್ಯದ ಬಗ್ಗೆ ಅರಿವಿನ ಕಾರ್ಯಕ್ರಮಗಳನ್ನು ಮೂಡಿಸುತ್ತಾ ಬಂದಿದ್ದೇವೆ ಗ್ರಾಮೀಣ ಪ್ರದೇಶದಲ್ಲಿ ಅತಿ ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬಂದಿದ್ದೇವೆ ಎಂದು ನುಡಿದರು. ವೀಲ್ ಚೇರ್ ವಿತರಣಾ ಕಾರ್ಯಕ್ರಮದಲ್ಲಿ ಇನ್ನರ್ವೀಲ್ ನ ಮಾಜಿ ಅಧ್ಯಕ್ಷರಾದ ಬಿಂದು ವಿಜಯ ಕುಮಾರ್ ಮಾತನಾಡಿದರು ಕಾರ್ಯದರ್ಶಿ ಲತಾ ಸೋಮಣ್ಣ.. ಜಗದೀಶ್. ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hassan Manikya Prakashana ಶಿವಮೊಗ್ಗದ ಕವಿ ಶಿ.ಜು.ಪಾಶಾ ಅವರಿಗೆ “ಜನ್ನ ಕಾವ್ಯ ಪ್ರಶಸ್ತಿ”

Hassan Manikya Prakashana ಹಾಸನದ ಮಾಣಿಕ್ಯ ಪ್ರಕಾಶನ(ರಿ) ರಾಜ್ಯಮಟ್ಟದ ಜನ್ನ ಕಾವ್ಯ...

Vajreshwari Co Operative Society ಶ್ರೀವಜ್ರೇಶ್ವರಿ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ

Vajreshwari Co Operative Society ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ...

National Education Committee ಬೆಳಗುತ್ತಿ & ಮಲ್ಲಿಗೇನಹಳ್ಳಿಯಲ್ಲಿ ಗಮನ ಸೆಳೆದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

National Education Committee ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿರಂಗಪ್ರಯೋಗದ...

Athletics Association Committee ರಾಜ್ಯಮಟ್ಟದ ಹಿರಿಯ & ಕಿರಿಯರ ಅಥ್ಲೆಟಿಕ್ಸ್ ಪಂದ್ಯಾವಳಿಯ ವಿಜೇತರಿಗೆ ಅಭಿನಂದನೆ

ಮೈಸೂರಿನಲ್ಲಿ ನಡೆದ ರಾಜ್ಯ ಕಿರಿಯರ ಹಾಗೂ ಹಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ನಗರದ...