Monday, March 23, 2026
Monday, March 23, 2026

Chamber Of Commerce Shivamogga ರೈಲ್ವೆ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮನವಿ

Date:

Chamber Of Commerce Shivamogga ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಅಗತ್ಯವಿರುವ ರೈಲ್ವೆ ಸೌಕರ್ಯಗಳನ್ನು ಒದಗಿಸುವಂತೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದರು.

ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಅವರ ನಿವಾಸದಲ್ಲಿ ಸಮಾಲೋಚನೆ ನಡೆಸಿದ ನಂತರ ಮನವಿ ಸಲ್ಲಿಸಿದ ಸಂಘದ ಪದಾಧಿಕಾರಿಗಳು, ಶಿವಮೊಗ್ಗ-ತುಮಕೂರು ಪ್ಯಾಸೆಂಜರ್ ರೈಲು ಸಂಚಾರವನ್ನು ಬೆಂಗಳೂರಿನವರೆಗೂ ವಿಸ್ತರಿಸಬೇಕು ಹಾಗೂ ಪುನಃ ವಾಪಸ್ ಬೆಂಗಳೂರು-ಶಿವಮೊಗ್ಗ ಪ್ಯಾಸೆಂಜರ್ ರೈಲು ಸಂಚಾರ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.

ಶಿವಮೊಗ್ಗ-ಬೆಂಗಳೂರು ಜನಶತಾಬ್ಧಿ ರೈಲು ಸಂಚಾರವನ್ನು ಬೆಳಗ್ಗೆ 5.45ಕ್ಕೆ ನಿಗದಿಪಡಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕು. ಅನಗತ್ಯ ಸ್ಥಳಗಳಲ್ಲಿ ರೈಲು ಸಂಚಾರ ನಿಲ್ಲಿಸಬಾರದು. ಪ್ರಯಾಣಿಕರ ಅನುಕೂಲಕ್ಕಾಗಿ ಶಿವಮೊಗ್ಗ-ಯಶವಂತಪುರ ರೈಲು ಸಂಚಾರ ಮಧ್ಯಾಹ್ನ 3ಕ್ಕೆ ಆರಂಭಿಸಬೇಕು. ಯಶವಂತಪುರ-ಶಿವಮೊಗ್ಗ ರೈಲು ವಾರಕ್ಕೆ ಮೂರು ದಿನ ಬದಲಾಗಿ ಪ್ರತಿ ದಿನ ಸಂಚರಿಸಲು ಕ್ರಮ ಕೈಗೊಳ್ಳಬೇಕು ಹಾಗೂ ಚೆನ್ನೆವರೆಗೂ ಸಂಚಾರ ವಿಸ್ತರಿಸಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಶಿವಮೊಗ್ಗ-ರೇಣಿಗುಂಟ-ಚೆನ್ನೈ ರೈಲು ಸಂಚಾರ ಮೂರು ತಿಂಗಳ ಹಿಂದೆ ಸ್ಥಗಿತಗೊಂಡಿದ್ದು, ಪುನಃ ವಾರದಲ್ಲಿ ಎರಡು ಅಥವಾ ಮೂರು ಬಾರಿ ಸಂಚಾರ ಆರಂಭಿಸಬೇಕು. ತಿರುಪತಿ ಪ್ರಯಾಣಿಕರಿಗೂ ಅನುಕೂಲವಾಗಲಿದೆ. ಕುವೆಂಪು ಎಕ್ಸ್ಪ್ರೆಸ್ ರೈಲು ವೇಗ ಹೆಚ್ಚಿಸಲು ಕ್ರಮ ವಹಿಸಿ ಸಂಚಾರ ಸಮಯ ಕಡಿಮೆಗೊಳಿಸಬೇಕು. ಕೋಟೆಗಂಗೂರು ಕೋಚಿಂಗ್ ಡಿಪೋ ಕಾಮಗಾರಿ ವೇಗಗೊಳಿಸಬೇಕು ಎಂದು ಮನವಿ ಮಾಡಿದರು.

Chamber Of Commerce Shivamogga ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಆಟೋ ಸಂಚಾರ ಸಮರ್ಪಕ ಆಗುವಂತೆ ಕ್ರಮ ವಹಿಸಬೇಕು. ರೈಲು ಆಗಮಿಸುವ ಸಂದರ್ಭದಲ್ಲಿ ಉಂಟಾಗುತ್ತಿರುವ ಟ್ರಾಫಿಕ್ ಸಮಸ್ಯೆಯನ್ನು ಪರಿಹರಿಸಲು ಕ್ರಮ ಕೈಗೊಳ್ಳುವಂತೆ ರೈಲ್ವೆ ಪೊಲೀಸರಿಗೆ ಸೂಚಿಸಬೇಕು. ಪಾರ್ಕಿಂಗ್ ಜಾಗದಲ್ಲಿ ಸರಿಯಾದ ಶೆಲ್ಟರ್ ಇಲ್ಲ, ಬೆಳಕಿನ ವ್ಯವಸ್ಥೆ ಇಲ್ಲ. ಅಗತ್ಯವಿರುವ ಮೂಲಸೌಕರ್ಯ ಒದಗಿಸಬೇಕು ಎಂದು ಮನವಿಯಲ್ಲಿ ತಿಳಿಸಿದರು.

ಮಾಜಿ ಎಂಎಲ್‌ಸಿ ಎಸ್.ರುದ್ರೇಗೌಡ, ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಡಾ. ಧನಂಜಯ ಸರ್ಜಿ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್, ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ರೈಲ್ವೆ ಸಮಿತಿ ಅಧ್ಯಕ್ಷ ಎಸ್.ಎಸ್.ಉದಯಕುಮಾರ್, ಖಜಾಂಚಿ, ಆರ್.ಮನೋಹರ, ಮಾಜಿ ಅಧ್ಯಕ್ಷರಾದ ಮಹೇಂದ್ರಪ್ಪ, ಅಶ್ವತ್ಥನಾರಾಯಣ ಶೆಟ್ಟಿ, ನಿರ್ದೇಶಕರಾದ ಪಿ.ರುದ್ರೇಶ್, ಗಣೇಶ್ ಅಂಗಡಿ, ವಿನೋದ್‌ಕುಮಾರ್, ಜಿ.ವಿ.ಕಿರಣ್‌ಕುಮಾರ್, ಸಿ.ಎ.ಶರತ್, ಎನ್.ಪಿ.ಶಂಕರ್, ಡಾ. ಲಕ್ಷ್ಮೀದೇವಿ ಗೋಪಿನಾಥ್, ಸಂಘದ ನಿರ್ದೇಶಕರು, ಪದಾಧಿಕಾರಿಗಳು, ಉದ್ಯಮಿಗಳು ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...