Monday, February 2, 2026
Monday, February 2, 2026

Agumbe Ghat News ಆಗುಂಬೆ ಸುರಂಗ ಮಾರ್ಗ ! ಆಗಲಿದೆಯೆ? ಈ ಮಾಹಿತಿ ಓದಿ

Date:

Agumbe Ghat News ಮಲ್ಪೆ – ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ-169 ಎ ಚತುಷ್ಪಥ ಯೋಜನೆಯಲ್ಲಿ, ಆಗುಂಬೆ ಘಾಟ್‌ನಲ್ಲಿ ಸುರಂಗ ಮಾರ್ಗ ನಿರ್ಮಾಣದ ಕಾರ್ಯ ಸಾಧ್ಯತೆಯ ಕುರಿತಂತೆ ವರದಿ ಸಲ್ಲಿಸಲು, ಕೇಂದ್ರ ಭೂ ಸಾರಿಗೆ ಸಚಿವಾಲಯದ ಡೈರೆಕ್ಟರ್ ಜನರಲ್ ಧರ್ಮೇಂದ್ರ ಸಾರಂಗಿ ಅವರು, ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಈ ಕುರಿತಂತೆ ಅವರು ಸೆ. 28 ರಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ಧರ್ಮೇಂದ್ರ ಸಾರಂಗಿ ಅವರು, ಸೆ. 27 ರಂದು ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪರಿಶೀಲನೆಗೆ ಆಗಮಿಸಿದ್ದರು. ಈ ವೇಳೆ ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ಅವರನ್ನು ಭೇಟಿಯಾಗಿ ಚರ್ಚಿಸಲಾಯಿತು’ ಎಂದು ಸಂಸದರು ತಿಳಿಸಿದ್ದಾರೆ.
ಆಗುಂಬೆ ಘಾಟ್ ರಸ್ತೆಗೆ ಪರ್ಯಾಯವಾಗಿ, ಮೇಗರವಳ್ಳಿಯಿಂದ ಸೋಮೇಶ್ವರದವರೆಗೆ 4 ಪಥದ ಸುರಂಗ ಮಾರ್ಗದ ರಸ್ತೆ ನಿರ್ಮಾಣ ಮಾಡಲು ಡಿಪಿಆರ್ ಸಿದ್ದಪಡಿಸಲು ಅನುಮತಿ ನೀಡಲಾಗಿದೆ. ಈ ಸಂಬಂಧ ಯೋಜನೆ ಅನುಷ್ಠಾನದ ಸಾಧ್ಯಾಸಾಧ್ಯತೆಗಳ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಸಂಸದರು ಹೇಳಿದ್ದಾರೆ.
ಚರ್ಚೆ :
Agumbe Ghat News ಸಿಗಂದೂರು ಸೇತುವೆ ಶಿವಮೊಗ್ಗ – ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ ಸಾಗರ ನಗರದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಕುರಿತಂತೆ ಚರ್ಚೆ ನಡೆಸಲಾಯಿತು.
ಹಾಗೆಯೇ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿರುವ, ಶಿವಮೊಗ್ಗ – ಆನಂದಪುರ ನಡುವೆ ನಾಲ್ಕು ಪಥದ ರಸ್ತೆ ನಿರ್ಮಾಣ, ನೆಲ್ಲಿಸರದಿಂದ ತೀರ್ಥಹಳ್ಳಿವರೆಗಿನ ಚತುಷ್ಪಥ ಮಾರ್ಗ, ಬೈಂದೂರು – ನಾಗೋಡಿವರೆಗಿನ ದ್ವಿಪಥ ಮಾರ್ಗ, ಹೊಸೂರು ಹಾಗೂ ತಾಳಗುಪ್ಪ ರೈಲ್ವೆ ಮೇಲ್ಸೇತುವೆ ಕಾಮಗಾರಿಗಳ ಬಗ್ಗೆ ಭೂ ಸಾರಿಗೆ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಲಾಯಿತು ಎಂದು ಸಂಸದರು ತಿಳಿಸಿದ್ಧಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...