Thursday, September 17, 2026
Thursday, September 17, 2026

Mysore Dasara ಹಿರಿಯ ಸಾಹಿತಿ ಹಂಪನಾ ಅವರಿಂದ ದಸರಾ ಉದ್ಘಾಟನೆ- ಸಿದ್ಧರಾಮಯ್ಯ

Date:

Mysore Dasara ಸಾಹಿತಿ ಹಂ.ಪ. ನಾಗರಾಜಯ್ಯ ಅವರಿಂದ ಈ ಬಾರಿಯ ದಸರಾ ಉತ್ಸವಕ್ಕೆ ಚಾಲನೆ ದೊರೆಯಲಿದ್ದು, ದಸರಾ ಉತ್ಸವವನ್ನು ಜನರ ಉತ್ಸವದಂತೆ ಆಚರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಅಕ್ಟೋಬರ್, 3 ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉತ್ಸವಕ್ಕೆ ಚಾಲನೆ ನೀಡಲಾಗುವುದು. ಈ ಬಾರಿ ಹಂ.ಪ. ನಾಗರಾಜಯ್ಯ ನವರು ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ. ಅಂದು ದಸರಾ ಉದ್ಘಾಟನೆ, ವಸ್ತುಪ್ರದರ್ಶನ, ದಸರಾ ಕ್ರೀಡಾ ಉತ್ಸವ ಉದ್ಘಾಟನೆ, ಕುಸ್ತಿ ಪಂದ್ಯಾವಳಿ, ಸಾಂಸ್ಕೃತಿಕ ಕಾರ್ಯಕ್ರಮ, ಸಿನಿಮೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು. ದಸರಾ ಉತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಸರ್ವ ಸಿದ್ಧತೆಗಳನ್ನು ಮಾಡುತ್ತಿದ್ದಾರೆ.

Mysore Dasara ದಸರಾ ಮಹೋತ್ಸವದಲ್ಲಿ ಉತ್ತಮ ರಸ್ತೆ, ವಿದ್ಯುತ್ ಅಲಂಕಾರ ಸೇರಿದಂತೆ ಗುಣಮಟ್ಟದ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ದಸರಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಇತ್ತೀಚೆಗೆ ನಾಗಮಂಗಲದ ಘಟನೆ, ಪೊಲೀಸರ ಕರ್ತವ್ಯ ಲೋಪದಿಂದ ನಡೆದಿದ್ದು, ಎಚ್ಚರಿಕೆ ವಹಿಸಿದ್ದರೆ ಅನಾಹುತ ನಡೆಯುತ್ತಿರಲಿಲ್ಲ. ಆ ರೀತಿಯ ಲೋಪಗಳು ದಸರಾ ಸಂದರ್ಭದಲ್ಲಿ ನಡೆಯಬಾರದೆಂದು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಾಮಾಜಿಕ ತಾಣದಲ್ಲಿ ಅನಿಸಿಕೆ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...