Tuesday, October 1, 2024
Tuesday, October 1, 2024

Gandhi Jayanti ಸಾಗರ ತಾಲ್ಲೂಕಿನಲ್ಲಿ ಯಶಸ್ವಿಯಾಗಿ ನಡೆದ ಸ್ವಚ್ಛತಾ ಹಿ ಸೇವಾ ಚಟುವಟಿಕೆ

Date:

Gandhi Jayanti ಭಾರತ ಸರ್ಕಾರದ, ಯುವ ವ್ಯವಹಾರ ಮತ್ತು ಕ್ರೀಡಾ ಇಲಾಖೆಯು ರಾಷ್ಟ್ರದಾದ್ಯಂತ ಮೈ ಭಾರತ್ ನ ಸ್ವಚ್ಛ ಭಾರತ್ ಮಿಷನ್-‌ ನಯಾ ಸಂಕಲ್ಪದ ಯೋಜನೆಯಲ್ಲಿ ಸ್ವಭಾವ್‌ ಸ್ವಚ್ಛತಾ, ಸಂಸ್ಕಾರ್‌ ಸ್ವಚ್ಛತೆ ಎಂಬ ಶೀರ್ಷಿಕೆಯಡಿಯಲ್ಲಿ ಅಕ್ಟೊಬರ್ 2 ರಂದು ಗಾಂಧಿ ಜಯಂತಿಯ ಪ್ರಯುಕ್ತ ಸೆಪ್ಟೆಂಬರ್‌ 17 ರಿಂದ 2ನೇ ಅಕ್ಟೋಬರ್‌ 2024 ವರೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಭದಲ್ಲಿ ನೆಹರು ಯುವ ಕೇಂದ್ರ ಶಿವಮೊಗ್ಗ ಮತ್ತು ನಗರ ಸಭೆ, ಸಾಗರ ,ಎನ್.ಸಿ.ಸಿ, ಎಲ್. ಬಿ ಅಂಡ್ ಎಸ್. ಬಿ ಕಾಲೇಜ್. ಎನ್.ಎಸ್.ಎಸ್‌, ಶ್ರೀಮತಿ. ಇಂದಿರಾಗಾಂಧಿ ಪ್ರಥಮ ದರ್ಜೆ ಮಹಿಳಾ ಕಾಲೇಜು,. ಸರಕಾರಿ ಪ್ರಥಮ ದರ್ಜೆ ಕಾಲೇಜು, ಸಾಗರ ಸ್ವತಂತ್ರ ಪದವಿ ಪೂರ್ವ ಕಾಲೇಜು,ಹ್ಯುಮಾನಿಟಿ ಯೂತ್ ಕ್ಲಬ್ ಇವರ ಸಹಯೋಗದೊಂದಿಗೆ ದಿನಾಂಕ 30.09.2024 ರಂದು” ಸ್ವಚ್ಛತ ಹೀ ಸೇವಾ ” ಕಾರ್ಯಕ್ರಮವನ್ನು ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿದ್ದು, ಸ್ವಚ್ಛತಾ ಅಭಿಯಾನದ ಮೂಲಕ ಯಶಸ್ವಿಗೊಳಿಸಲಾಯಿತು.

ಈ ಕಾರ್ಯಕ್ರಮವನ್ನು ಸಾಗರ ನಗರಸಭೆಯ ಪೌರಯುಕ್ತರಾದ ಶ್ರೀ ನಾಗಪ್ಪ ಸರ್ ಅವರು ಉದ್ಘಾಟಿಸಿ ಗಾಂಧೀಜಿ ಕಂಡ ಸ್ವಚ್ಚ ಭಾರತದ ಕನಸನ್ನು ನಾವೆಲ್ಲರೂ ಸೇರಿ ಸಂಪೂರ್ಣಗೊಳಿಸಲು ಇನ್ನಷ್ಟು ಪ್ರಯತ್ನ ಪಡೋಣ, ನಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಎಂದು ತಿಳಿಸಿದರು.

ಶ್ರೀ. ಉಲ್ಲಾಸ್‌ ಕೆ.ಟಿ.ಕೆ ಯುವ ಸಮನ್ವಯಅಧಿಕಾರಿಗಳು, ನೆಹರು ಯುವ ಕೇಂದ್ರ ಶಿವಮೊಗ್ಗ ಸ್ವಚ್ಛತಾ ಸಂಕಲ್ಪದ ಬಗ್ಗೆ ಸ್ವಚ್ಛತಾ ಅಭಿಯಾನದ ಕುರಿತು ಮಾಹಿತಿಯನ್ನು ನೀಡಿ, ಮುಂದಿನ ದಿನಗಳಲ್ಲಿ ನಮ್ಮ ಸುತ್ತಮುತ್ತ ಇರುವ ಜಾಗವನ್ನು ಸ್ವಚ್ಛವಾಗಿಡಲು ನಾವುಗಳೆ ಮೊದಲಿಗರಾಗಬೇಕು.ಮತ್ತು ಬೇರೆಯವರ ಜೊತೆ ಕೈಜೋಡಿಸಿ ಪರಿಸರವನ್ನು ಸ್ವಚ್ಛವಾಗಿರಿಸಬೇಕು , ಎಂಬ ಮಾಹಿತಿಯನ್ನು ನೀಡಿದರು.

Gandhi Jayanti ಈ ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯ ಅಭಿಯಂತರರಾದ ಶ್ರೀ ಶೈಲೇಶ್ ರವರು ಮತ್ತು ನೂತನ್ ಎನ್ ಸಿ, ಸಿ. ಗಿರೀಶ್ ಶೆಟ್, ಹರೀಶ್, ಗಣೇಶ್, ಆಟೋ ಲೆಫ್ಟಿನೆಂಟ್ ದೀಪ ಎಲ್ಲಾ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಈ ಸಮಯದಲ್ಲಿ ಸಾಗರ ತಾಲ್ಲೂಕಿನ ಬಸ್ಟ್ಯಾಂಡ್‌, ಕೋರ್ಟ್‌ ಸರ್ಕಲ್‌, ನಗರಸಭೆ ಆವರಣವನ್ನು ಸ್ವಚ್ಛಗೊಳಿಸಲಾಯಿತು.ಹಾಗೂ ನಮ್ಮ ದೇಶ ಸ್ವಚ್ಛ ದೇಶ ಎಂಬ ಘೋಷವಾಕ್ಯವನ್ನು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...

Karnataka State Farmers Association ಆನೆದಾಳಿಗೆ ಮೃತಪಟ್ಟ ಪುರದಾಳ್ ನಿವಾಸಿಗೆ ₹25 ಲಕ್ಷ ಪರಿಹಾರ ನೀಡಲು ಆಗ್ರಹ

Karnataka State Farmers Association ಶಿವಮೊಗ್ಗ ನಗರದ ಅಂಚಿನಲ್ಲಿರುವ ಪುರದಾಳ್...

Shakahari Film ಶಾಖಾಹಾರಿ ಚಿತ್ರಕ್ಕೆ ಕಾನೂನು ಜಯ

Shakahari Film ಶಿವಮೊಗ್ಗದ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಿಸಿದ್ದ ಶಾಖಾಹಾರಿ...