Thursday, August 6, 2026
Thursday, August 6, 2026

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

Date:

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನೀಡಿದ್ದ ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ.

ನನ್ನ ವಿರುದ್ದ ರಾಜಕೀಯ ದ್ವೇಷ ಸಾಧನೆಗಾಗಿ ವಿರೋಧ ಪಕ್ಷಗಳು ಸುಳ್ಳು ದೂರನ್ನು ಸೃಷ್ಟಿಸಿ ನನ್ನ ಕುಟುಂಬವನ್ನು ವಿವಾದಕ್ಕೆ ಎಳೆದು ತಂದಿರುವುದು ರಾಜ್ಯದ ಜನತೆಗೂ ತಿಳಿದಿದೆ.

ಈ ಅನ್ಯಾಯಕ್ಕೆ ತಲೆಬಾಗದೆ ಹೋರಾಟ ಮಾಡಬೇಕೆಂಬುದು ನನ್ನ ನಿಲುವಾಗಿತ್ತು.

ಆದರೆ ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ.

CM Siddharamaih ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ
ನನಗೆ ವಿಷಾದ ಇದೆ.

ಹೀಗಿದ್ದರೂ ನಿವೇಶನಗಳನ್ನು ಹಿಂದಿರುಗಿಸಿದ ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....

DC Shivamogga ಮುಂದಿನ 61 ವಾರಗಳಿಗೆ ಜಾನುವಾರುಗಳ ಅಗತ್ಯ ಮೇವಿಗೆ ಕೊರತೆಯಿಲ್ಲ : ಪ್ರಭುಲಿಂಗ ಕವಳಿಕಟ್ಟಿ

DC Shivamogga ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್...