Monday, February 2, 2026
Monday, February 2, 2026

Navaratri Festival ಶಿವಮೊಗ್ಗ ವಿವೇಕಾನಂದ ಬಡಾವಣೆಯ ನಾಗಸುಬ್ರಹ್ಮಣ್ಯ ದೇಗುಲದಲ್ಲಿ ನವರಾತ್ರಿ ಉತ್ಸವ

Date:

Navaratri Festival ಶಿವಮೊಗ್ಗ ನಗರದ ವಿವೇಕಾನಂದ ಬಡಾವಣೆಯ ನಾಗಸುಬ್ರಹ್ಮಣ್ಯ ದೇವಸ್ಥಾನದಲ್ಲಿ 16ನೇ ನವರಾತ್ರಿ ಉತ್ಸವವನ್ನು ಅ.3ರಿಂದ 11ರವರೆಗೆ ಹಮ್ಮಿಕೊಳ್ಳಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ದೇವಸ್ಥಾನದ ಅರ್ಚಕ ಸಂದೇಶ್ ಉಪಾಧ್ಯ,
ನಗರದ ಏಕೈಕ ನಾಗಕ್ಷೇತ್ರವಾದ ನಾಗಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ 03 ರ, ಗುರುವಾರ ಸಂಜೆ 6ಕ್ಕೆ ಕರ್ನಾಟಕ ಕಲಾಶ್ರೀ ಪ್ರಶಸ್ತಿ ಪುರಸ್ಕೃತೆ, ವಿದುಷಿ ಪುಷ್ಪಾ ಕೃಷ್ಣಮೂರ್ತಿ ಕಾರ್ಯಕ್ರಮವನ್ನು ಉದ್ಘಾಟಿಸುವರು.

ದೇವಸ್ಥಾನದ ಅಧ್ಯಕ್ಷ ಹೆಚ್. ರಾಮಲಿಂಗಪ್ಪನವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಈ ಬಾರಿಯೂ ದೇವಿಯ 9ನೇ ಅವತಾರವಾದ ಚಾಮುಂಡ ದೇವಿಯ ರೂಪದಲ್ಲಿ ಕಂಗೊಳಿಸಲಿದ್ದಾಳೆ.

ಶಿವಮೊಗ್ಗ ಶಿಲ್ಪಿ ಪ್ರವೀಣ್ ಕವೇಟ್ಕರ್ ದೇವಿಯ ವಿಗ್ರಹವನ್ನು ನಿರ್ಮಿಸಿದ್ದಾರೆ ಎಂದರು.
ಪ್ರತಿದಿನ ಬೆಳಿಗ್ಗೆ 8.30 ರಿಂದ ಚಂಡಿಕಾಯಾಗ ಪ್ರಾರಂಭಗೊಂಡು ಮಧ್ಯಾಹ್ನ 12.30ಕ್ಕೆ ಮಹಾಮಂಗಳಾರತಿ ಮತ್ತು 5.00 ಘಂಟೆಯಿಂದ ಸ್ಥಳಿಯ ಭಜನಾ ಮಹಾಪೂರ್ಣಾಹುತಿಯೊಂದಿಗೆ ಮುಕ್ತಾಯಗೊಳ್ಳಲಿದೆ.

Navaratri Festival ಸಾಯಂಕಾಲ ಮಂಡಳಿಯಿಂದ ಲಲಿತಾ ಸಹಸ್ರನಾಮ, ಸೌಂದರ್ಯ ಲಹರಿ ಹಾಗೂ 5.30ರಿಂದ ನಗರ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಮತ್ತು 6.30ರಿಂದ ನಗರದ ಸುಪ್ರಸಿದ್ದ ಕಲಾವಿದರುಗಳಿಂದ ಭರತನಾಟ್ಯ, ಯಕ್ಷಗಾನ, ಸಂಗೀತ ಸೇವೆ, ಸುಗಮ ಸಂಗೀತ ಕಾರ್ಯಕ್ರಮ, ಭಾವಗೀತೆ, ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ.

ರಾತ್ರಿ 8.30ಕ್ಕೆ ಮಹಾಮಂಗಳಾರತಿ ನಂತರ ತೀರ್ಥ-ಪ್ರಸಾದ ವಿನಿಯೋಗ ಇರುತ್ತದೆ ಎಂದು ವಿವರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...