Friday, March 20, 2026
Friday, March 20, 2026

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Date:

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ ಎಂದು ಯೋಗ ಗುರು ಚಂದ್ರಶೇಖರಯ್ಯ ಅಭಿಪ್ರಾಯಪಟ್ಟರು.
ಶಿವಗಂಗಾ ಯೋಗ ಕೇಂದ್ರದ ಕೃಷಿನಗರ ಶಾಖೆಯಲ್ಲಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನದ ಆಚರಣೆಯಲ್ಲಿ ಮಾತನಾಡಿ, ರಾಷ್ಟ್ರಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡಿ ಅಹಿಂಸಾ ಮಾರ್ಗದಲ್ಲಿ ಸ್ವಾತಂತ್ರ್ಯದ ಹೋರಾಟದಲ್ಲಿ ಭಾಗಿಯಾಗಿದ್ದರು. ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಯುವಜನರು ಅರಿತುಕೊಳ್ಳಬೇಕು ಎಂದು ತಿಳಿಸಿದರು.
ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರ ಪ್ರಾಮಾಣಿಕತೆ, ಸರಳ ಜೀವನಶೈಲಿ ಹಾಗೂ ದೂರದೃಷ್ಟಿಯ ಆಲೋಚನೆಗಳು ನಮಗೆಲ್ಲರಿಗೂ ದಾರಿದೀಪ ಎಂದರು.
Chamber Of Commerce ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಗಾಂಧೀಜಿ ಅವರು ಕಂಡ ರಾಮ ರಾಜ್ಯ, ಸ್ವಚ್ಛತೆಯ ಬಗ್ಗೆ ನಾವೆಲ್ಲರೂ ಶ್ರಮಿಸಬೇಕು. ಎಲ್ಲ ದೇಶಗಳಿಗಿಂತ ನಮ್ಮ ದೇಶ ಬಹಳ ವ್ಯವಸ್ಥಿತವಾಗಿ ಭದ್ರತೆ ಹಾಗೂ ಸುರಕ್ಷತೆಯಿಂದ ಕೂಡಿದೆ. ಇಂದು ನಮ್ಮ ಮಕ್ಕಳಿಗೆ ಸಂಸ್ಕಾರದ ಅರಿವು ಮೂಡಿಸಬೇಕಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಯೋಗ ಶಿಕ್ಷಕಿ ನಾಗರತ್ನಮ್ಮ ಚಂದ್ರಶೇಖರ್ ಲಾಲ್ ಬಹದ್ದೂರ್ ಶಾಸ್ತ್ರಿಜಿ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು. ಗಾಂಧೀಜಿ ಅವರ ಭಜನೆಗಳನ್ನ ಹಾಡುತ್ತ ಎಲ್ಲರಿಗೂ ಹೇಳಿಕೊಟ್ಟರು. ಇದೇ ಸಂದರ್ಭದಲ್ಲಿ ಯೋಗ ಬಂಧುಗಳಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಜಯಂತಿ ಕಾರ್ಯಕ್ರಮದಲ್ಲಿ ಯೋಗ ಶಿಬಿರಾರ್ಥಿಗಳಾದ ಜಯಣ್ಣ ಕೃಷ್ಣಮೂರ್ತಿ, ಚಿದಾನಂದ, ಸುಜಾತಾ, ಬಿಂದು ವಿಜಯ ಕುಮಾರ್ ಮತ್ತು ಯೋಗ ಶಿಬಿರಾರ್ಥಿಗಳು ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಮಾಡಿ ಗೌರವ ಸಲ್ಲಿಸಿದರು. ವಿನೋದಾ, ಶೋಭಾ, ಗಣೇಶ, ಮಂಜುನಾಥ್, ಚಿದಾನಂದ ಮೂರ್ತಿ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...