Tuesday, May 26, 2026
Tuesday, May 26, 2026

Gandhi Jayanthi ಗಾಂಧೀಜಿ & ಶಾಸ್ತ್ರೀಜಿ ನಮ್ಮೆಲ್ಲರ ಹೆಮ್ಮೆ- ಎನ್.ಎನ್.ಕಬ್ಬೂರ

Date:

Gandhi Jayanthi ಶಾಂತಿಯ ಹರಿಕಾರರಾದ ಮಹಾತ್ಮ ಗಾಂಧೀಜಿಯವರು ಇಡೀ ವಿಶ್ವಕ್ಕೆ ಅಹಿಂಸೆಯ ಪಾಠ ಹೇಳಿಕೊಟ್ಟು, ಅದರ ಮೂಲಕವೇ ಜಗತ್ತನ್ನು ಗೆದ್ದರು, ಅದೇ ರೀತಿ ಲಾಲ್ ಬಹದ್ದೂರ ಶಾಸ್ತ್ರಿಯವರು ಭಾರತೀಯ ಜನರಿಗೆ ದೇಶಪ್ರೇಮ ಹಾಗೂ ನೈತಿಕತೆ ಮಾರ್ಗದರ್ಶನ ಮಾಡಿದರು. ಅವರ ಜಯಂತಿಯ ಈ ದಿನದಂದು ಅವರು ಹಾಕಿಕೊಟ್ಟ ದಾರಿಯಲ್ಲಿ ನಾವು ನೀವೆಲ್ಲ ಸಾಗಬೇಕಾಗಿದೆ, ಈ ಇಬ್ಬರು ಮಹಾನ್ ನಾಯಕರು ನಮ್ಮೆಲ್ಲರ ಹೆಮ್ಮೆಯಾಗಿದ್ದಾರೆ” ಎಂದು ಶಿಕ್ಷಕ ಎನ್.ಎನ್.ಕಬ್ಬೂರ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಪಟ್ಟಣದ ಸ.ಕಿ.ಪ್ರಾ ಕನ್ನಡ ಶಾಲೆ ನಂ-6 ರಲ್ಲಿ ಗಾಂಧಿ ಜಯಂತಿಯ ಅಂಗವಾಗಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಂತರ ಗಾಂಧೀಜಿ ಮತ್ತು ಶಾಸ್ತ್ರಿಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.

Gandhi Jayanthi ಮಕ್ಕಳು ಗಾಂಧೀಜಿ ಹಾಗೂ ಶಾಸ್ತ್ರಿಜಿಯವರ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಭಾಷಣಗಳ ಮೂಲಕ ಹಂಚಿಕೊಂಡರು, ಈ ವೇಳೆ ಶಿಕ್ಷಕಿ ಎಮ್.ಆರ್.ಫಂಡಿ ಮಕ್ಕಳಿಗೆ ಬುಕ್ ಹಾಗೂ ಪೆನ್ನುಗಳನ್ನು ಬಹುಮಾನವಾಗಿ ನೀಡಿದರು. ಅಂಗನವಾಡಿ ಕಾರ್ಯಕರ್ತೆಯರು, ಅಡುಗೆ ಸಿಬ್ಬಂದಿಯವರು, ಪಾಲಕ-ಪೋಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಕ್ರಿಕೆಟ್ ಪಟು ಅಕ್ಷಯ್ ನಿಧನಕ್ಕೆ ಭಗೀರಥ ಸ್ಪೋರ್ಟ್ಸ್ ಅಕಾಡೆಮಿ ಸಂತಾಪ.

Breaking News ಕ್ರಿಕೆಟ್ ಆಟ ಆಡುವಾಗಲೇ ರಣಜಿ ಕ್ರಿಕೆಟ್ ನ ಮಾಜಿ...

Aryabhata Award ಪ್ರಶಾಂತ್ ಕುಮಾರ್ ಸಿ ರಾಯ್ಕರ್ ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ.

Aryabhata Award ಜ್ಞಾನೇಶ್ವರ ಗೋಶಾಲಾ ಟ್ರಸ್ಟ್ ಕಾರ್ಯದರ್ಶಿ ಪ್ರಶಾಂತ್ ಕುಮಾರ್ ಸಿ...

Shimoga News ಹಾವು ಕಡಿತ ಚಿಕಿತ್ಸೆ; ನಾಟಿ ವೈದ್ಯರ ವಿರುದ್ಧ ಸೂಕ್ತ ಕ್ರಮ -ವಿ.ಅಭಿಷೇಕ್.

Shimoga News ಹಾವು ಕಡಿತ ಉಂಟಾದ ತಕ್ಷಣ ಹತ್ತಿರದ ಪಿಹೆಚ್‌ಸಿ ಅಥವಾ...

Shimoga News ಜೂನ್ 28. ಪಲ್ಸ್ ಪೋಲಿಯಿ ಲಸಿಕಾ ಅಭಿಯಾನ ಯಶಸ್ವಿಯಾಗಿ ಅನುಷ್ಠಾನಗೊಳಿಸಿ- ಅಪರ ಜಿಲ್ಲಾಧಿಕಾರಿ ವಿ‌.ಅಭಿಷೇಕ್

Shimoga News ಶಿವಮೊಗ್ಗ ಜಿಲ್ಲೆಯಲ್ಲಿ 2026-27ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ...