Tuesday, May 26, 2026
Tuesday, May 26, 2026

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Date:

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ ಅದ್ಯಾಪಕರದು, ಅವರ ಕಾರ್ಯ ಗುರುತಿಸಿ ಸನ್ಮಾನಿಸುವುದು ನಾಗರೀಕರ ಕರ್ತವ್ಯ ಎಂದು ರೋಟರಿ ಶಿವಮೊಗ್ಗ ಜ್ಯೂಬಿಲಿ ಕ್ಲಬ್ ಆಯೋಜಿಸಿದ್ದ ಅಂಬೇಡ್ಕರ್ ಮಹಿಳಾ ವಸತಿ ಶಾಲೆಯಲ್ಲಿ ಕಾರ್ಯಕ್ರಮ ಉದ್ಘಾಟಿಸಿದ ಮೇಸ್ಕಾಂನ ಮಾಜಿ ಚೀಫ್ ಇಂಜಿನಿಯರ್ ಭಾರದ್ವಾಜ್ ತಿಳಿಸಿದರು.
ಇಂದಿನ ದಿನಗಳಲ್ಲಿ ಹೆಣ್ಣು ಮಕ್ಕಳಿಗೆ ಮನೆಯ ವಾತವರಣದಲ್ಲಿ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರದ ಮಹತ್ವದ ಯೋಜನೆ ಇದಾಗಿದ್ದು ಕಡು ಬಡವರು ತಮ್ಮ ಮಕ್ಕಳ ವಿದ್ಯಾಭ್ಯಾಸವನ್ನು ನಿರ್ಭಯ ವಾಗಿ ಈ ಶಾಲೆಗಳಿಗೆ ಕಳಿಸಿ ಅವರ ಉನ್ನತಿಯಿಂದ ನೆಮ್ಮದಿ ಜೀವನ ಕಾಣಲು ಸಾಧ್ಯ ಎಂದರು.
Rotary Shivamogga ಪ್ರಾಸ್ತಾಕವಾಗಿ ಮಾತನಾಡಿದ ರೇಣುಕರಾಧ್ಯ ರವರು ಸ್ಪರ್ದಾತ್ಮಕ ಜಗತ್ತಿನಲ್ಲಿ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣ ಅತ್ಯಗತ್ಯ. ಸರ್ಕಾರ ಉತ್ತಮ ಶಿಕ್ಷಕರನ್ನು ನೇಮಿಸಿ ಹೆಣ್ಣು ಮಕ್ಕಳು ಸ್ವಾವಲಂಬಿಗಳಾಗಲು ಶ್ರಮ ವಹಿಸುತ್ತಿದೆ. ಅದರ ಸದುಪಯೋಗ ಪಡಿಸಿಕೊಳ್ಳಲು ಪಾಲಕರು ಮುಂದೆ ಬರಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ರೊ.ರೂಪಪುಣ್ಯಕೊಟಿ ಯವರು ಈ ಶಾಲೆಯ ಶಿಕ್ಷಕರ ಶಿಸ್ತುಬದ್ದ ಕಾರ್ಯ ಚಟುವಟಿಕೆ ಗಮನಿಸಿದ್ದೇನೆ. ಮಕ್ಕಳು ಅತ್ಯುತ್ತಮ ಅಂಕಗಳಿಸಿ ಉನ್ನತ ಶಿಕ್ಷಣ ಗಳಿಸಲು ಸಹಕಾರಿಯಾಗಿದೆ. ಎಲೆ ಮರೆ ಕಾಯಿಯಂತೆ ಕಾರ್ಯ ನಿರ್ವಹಿಸುತ್ತಿರುವ ಅಧ್ಯಾಪಕರನ್ನು ಗುರುತಿಸುವುದು ನಮ್ಮಂತ ಸಂಘ ಸಂಸ್ಥೆಗಳ ಆದ್ಯ ಕರ್ತವ್ಯ, ಆ ನಿಟ್ಟಿನಲ್ಲಿ ಇಂದು ಅವರನ್ನು ಸನ್ಮಾನಿಸಿ ಇನ್ನು ಉತ್ತಮ ಕಾರ್ಯ ಮಾಡಲು ಉತ್ತೇಜನ ನೀಡಲಾಗಿದೆ ಎಂದರು.
ಲಕ್ಮೀನಾರಾಯಣ್ ಸ್ವಾಗತಿಸಿ, ಸತ್ಯನಾರಾಯಣ್ ವಂದಿಸಿದರು ರಾಜಶೇಖರ್ ನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಬದುಕಿನ ಪುಟದಲ್ಲೊಂದು ಘಟನೆ

ಪ್ರಸಾದ್ ಶ್ರೀವತ್ಸ ,ದಾವಣಗೆರೆ. Klive Special Article ಮನುಷ್ಯನೆಂದ ಮೇಲೆ ಹಲವಾರು ಸರಿ-ತಪ್ಪು...

Rotary Shivamogga ವೈವಿಧ್ಯಮಯ ಕಲಾಪ್ರಕಾರಗಳ ಕಲಿಕೆಯಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿ- ಡಿ.ಕಿಶೋರ್ ಕುಮಾರ್

Rotary Shivamogga ಬಾಲ್ಯದಿಂದಲೇ ಕಲೆ, ಸಾಹಿತ್ಯ, ನೃತ್ಯದ ಬಗ್ಗೆ ಮಕ್ಕಳಲ್ಲಿ ಆಸಕ್ತಿ...

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...